ವಿಶ್ವಕಪ್: ಭಾರತದ ಬೌಲಿಂಗ್ ದಾಳಿಗೆ ಬೆದರಿದ ಪಾಕ್, ಭಾರತಕ್ಕೆ ಏಳು ವಿಕೆಟ್ ಜಯ

ವಿಶ್ವಕಪ್ ನ ಹೈಹೊಲ್ಟೇಜ್ ಪಂದ್ಯವಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಪಂದ್ಯದಲ್ಲಿ ಭಾರತ ತಂಡದ ಬಿಗಿ ಬೌಲಿಂಗ್ ದಾಳಿ ಹಾಗೂ ಬ್ಯಾಟಿಂಗ್ ಬಲದಿಂದ ಏಳು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿತು.

ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು.

ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ವೇಗಿಗಳಾದ ಜಸ್ಪ್ರಿತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಪಾಕಿಸ್ತಾನದ ಬ್ಯಾಟಿಂಗ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.

ಪಾಕಿಸ್ತಾನದ ಆರಂಭಿಕ ಆಟಗಾರರಾದ ಶಾಫಿ(20) ಹಾಗೂ ಇಮಾಮ್ ಉಲ್ ಹಕ್ (36) ರನ್ ಗಳಿಸುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟರು ಆದರೆ ಅವರಿಬ್ಬರನ್ನು ಬುಮ್ರಾ ಹಾಗೂ ಸಿರಾಜ್ ಪೆವಿಲಿಯನ್ ಗೆ ಕಳುಹಿಸಲು ಯಶಸ್ವಿಯಾದರು.

ನಂತರ ಒಂದಾದ ನಾಯಕ ಬಾಬರ್ ಅಜಾಮ್ (50) ರನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (49) ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು, ಆದರೆ ಸಿರಾಜ್ ಬೌಲಿಂಗ್ ಅರಿಯಲು ವಿಫಲವಾದ ಬಾಬರ್ ಅರ್ಧಶತಕ ಗಳಿಸಿ ಕ್ಲೀನ್ ಬೌಲ್ಡ್ ಆದರು.

ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಆಟಗಾರರಾದ ಶಕೀಲ್ (6), ಅಹಮದ್ (4), ಶಾಬದ್ ಖಾನ್ (2), ಮಹಮದ್ ನವಾಜ್ (4) ವಿಫಲರಾದರು, ಭಾರತದ ಪರವಾಗಿ ಜಸ್ಪ್ರಿತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿರಾಜ್, ಕುಲದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.

191 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಆರು ಬೌಂಡರಿ ಹಾಗೂ ಆರು ಸಿಕ್ಸರ್ ನೆರವಿನಿಂದ (86) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (53) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ವಿರಾಟ್ ಕೊಹ್ಲಿ (16), ಶುಭ್ಮನ್ ಗಿಲ್ (16) ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ (19) ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು, ಪಾಕಿಸ್ತಾನದ ಪರವಾಗಿ ಶಾಹೀನ್ ಅಫ್ರಿದಿ ಎರಡು ವಿಕೆಟ್ ಹಾಗೂ ಹಸನ್ ಅಲಿ ಒಂದು ವಿಕೆಟ್ ಪಡೆದರು, ಉತ್ತಮವಾಗಿ ಬೌಲಿಂಗ್ ಪ್ರದರ್ಶನ ನೀಡಿದ ವೇಗಿ ಜಸ್ಪ್ರಿತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

4 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

7 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

21 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago