ವಿಶ್ವಕಪ್: ಭಾರತದ ಬೌಲಿಂಗ್ ದಾಳಿಗೆ ಬೆದರಿದ ಪಾಕ್, ಭಾರತಕ್ಕೆ ಏಳು ವಿಕೆಟ್ ಜಯ

ವಿಶ್ವಕಪ್ ನ ಹೈಹೊಲ್ಟೇಜ್ ಪಂದ್ಯವಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಪಂದ್ಯದಲ್ಲಿ ಭಾರತ ತಂಡದ ಬಿಗಿ ಬೌಲಿಂಗ್ ದಾಳಿ ಹಾಗೂ ಬ್ಯಾಟಿಂಗ್ ಬಲದಿಂದ ಏಳು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿತು.

ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು.

ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ವೇಗಿಗಳಾದ ಜಸ್ಪ್ರಿತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಪಾಕಿಸ್ತಾನದ ಬ್ಯಾಟಿಂಗ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.

ಪಾಕಿಸ್ತಾನದ ಆರಂಭಿಕ ಆಟಗಾರರಾದ ಶಾಫಿ(20) ಹಾಗೂ ಇಮಾಮ್ ಉಲ್ ಹಕ್ (36) ರನ್ ಗಳಿಸುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟರು ಆದರೆ ಅವರಿಬ್ಬರನ್ನು ಬುಮ್ರಾ ಹಾಗೂ ಸಿರಾಜ್ ಪೆವಿಲಿಯನ್ ಗೆ ಕಳುಹಿಸಲು ಯಶಸ್ವಿಯಾದರು.

ನಂತರ ಒಂದಾದ ನಾಯಕ ಬಾಬರ್ ಅಜಾಮ್ (50) ರನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (49) ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು, ಆದರೆ ಸಿರಾಜ್ ಬೌಲಿಂಗ್ ಅರಿಯಲು ವಿಫಲವಾದ ಬಾಬರ್ ಅರ್ಧಶತಕ ಗಳಿಸಿ ಕ್ಲೀನ್ ಬೌಲ್ಡ್ ಆದರು.

ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಆಟಗಾರರಾದ ಶಕೀಲ್ (6), ಅಹಮದ್ (4), ಶಾಬದ್ ಖಾನ್ (2), ಮಹಮದ್ ನವಾಜ್ (4) ವಿಫಲರಾದರು, ಭಾರತದ ಪರವಾಗಿ ಜಸ್ಪ್ರಿತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿರಾಜ್, ಕುಲದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.

191 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಆರು ಬೌಂಡರಿ ಹಾಗೂ ಆರು ಸಿಕ್ಸರ್ ನೆರವಿನಿಂದ (86) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (53) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ವಿರಾಟ್ ಕೊಹ್ಲಿ (16), ಶುಭ್ಮನ್ ಗಿಲ್ (16) ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ (19) ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು, ಪಾಕಿಸ್ತಾನದ ಪರವಾಗಿ ಶಾಹೀನ್ ಅಫ್ರಿದಿ ಎರಡು ವಿಕೆಟ್ ಹಾಗೂ ಹಸನ್ ಅಲಿ ಒಂದು ವಿಕೆಟ್ ಪಡೆದರು, ಉತ್ತಮವಾಗಿ ಬೌಲಿಂಗ್ ಪ್ರದರ್ಶನ ನೀಡಿದ ವೇಗಿ ಜಸ್ಪ್ರಿತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago