ವಿಶ್ವಕಪ್: ರನ್ ಹೊಳೆ ಹರಿಸಿದ ಶ್ರೇಯಸ್ – ರಾಹುಲ್, ಡಚ್ಚರಿಗೆ ಡಿಚ್ಚಿ ಹೊಡೆದ ಭಾರತ !

ದೀಪಾವಳಿ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದ ಬೆಂಗಳೂರಿಗರಿಗೆ ಭಾರತದ ಕ್ರಿಕೆಟ್ ತಂಡ ನೆದರ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ 160 ರನ್ ಗಳ ಜಯಭೇರಿ ಬಾರಿಸಿ ಸಂಭ್ರಮವನ್ನು ದುಪ್ಪಟ್ಟು ಗೊಳಿಸಿದರು.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಉತ್ತಮ ಲಯದಲ್ಲಿದ್ದ ನಾಯಕ ರೋಹಿತ್ ಶರ್ಮಾ (61) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (51) ರನ್ ಗಳಿಸಿ ಶತಕದ ಜೊತೆಯಾಟ ನಡೆಸಿದರು.

ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (51) ರನ್ ಗಳಿಸಿದರೆ, ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ 10 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ (128*) ಹಾಗೂ ಕನ್ನಡಿಗ, ವಿಕೆಟ್ ಕೀಪರ್ ಕೆ.ಎಲ್ . ರಾಹುಲ್ 11 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ (102) ರನ್ ಗಳಿಸಿ ವಿಶ್ವಕಪ್ ನಲ್ಲಿ ಅತಿವೇಗದ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು ಹಾಗೂ ತಂಡದ ಮೊತ್ತವನ್ನು 410 ರ ಗಡಿ ದಾಟಿಸಿದರು .

ನೆದರ್ಲೆಂಡ್ ಪರವಾಗಿ ಲ್ಯಾಡ್ ಎರಡು ವಿಕೆಟ್, ಮಿಕೆರೆನ್ ಹಾಗೂ ಮಿರ್ವೆ ತಲಾ ಒಂದು ವಿಕೆಟ್ ಪಡೆದರೆ ವ್ಯಾನ್ ಬೇಕ್ 107 ರನ್ ನೀಡಿ ಒಂದೂ ವಿಕೆಟ್ ಪಡೆಯದೆ ದುಬಾರಿಯಾದರು.

ಬೃಹತ್ ಮೊತ್ತ ಬೆನ್ನತ್ತಿದ್ದ ಡಚ್ಚರಿಗೆ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಆಘಾತ ನೀಡಿದರು, ಆರಂಭಿಕ ಆಟಗಾರ ಬೆರ್ಸಿ(4) ರನ್ ಗಳಿಸಿ ಔಟಾದರು, ಅನುಭವಿ ಆಟಗಾರ ಮ್ಯಾಕ್ಸ್ ಓಡೌಡ್ (30), ಆಕ್ರಮನ್ (35), ಸೈಬ್ರಾಡ್ (45) ಹಾಗೂ ತೇಜ್ ನಿಡುಮಾನುರು (54) ರನ್ ಗಳಿಸಿದರೂ ಸಹ ಗುರಿ ತಲುಪಲಾಗದೆ 250 ರನ್ ಗಳಿಸಿ ಆಲೌಟ್ ಆದರು.

ಈ ಮೂಲಕ ಭಾರತ 160 ರನ್ ಜಯ ಸಾಧಿಸಿತು, ಭಾರತದ ಪರವಾಗಿ ವೇಗಿ ಜಸ್ಪ್ರಿತ್ ಬುಮ್ರಾ , ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ ಹಾಗೂ ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಕಬಳಿಸಿದರೆ ಬ್ಯಾಟ್ಸ್ಮನಗಳಾದ ನಾಯಕ ರೋಹಿತ್ ಶರ್ಮಾ ಹಾಗೂ ಹಿರಿಯ ಆಟಗಾರ ವಿರಾಟ್ ಕೋಹ್ಲಿ ತಲಾ ಒಂದು ವಿಕೆಟ್ ಪಡೆದರು. ಈ ಪಂದ್ಯದಲ್ಲಿ ಭಾರತ 9 ಬೌಲರ್ ಗಳು ಬೌಲಿಂಗ್ ಮಾಡಿದ್ದು ವಿಶೇಷವಾಗಿತ್ತು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

7 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

8 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

13 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

15 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

17 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

19 hours ago