ದೀಪಾವಳಿ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದ ಬೆಂಗಳೂರಿಗರಿಗೆ ಭಾರತದ ಕ್ರಿಕೆಟ್ ತಂಡ ನೆದರ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ 160 ರನ್ ಗಳ ಜಯಭೇರಿ ಬಾರಿಸಿ ಸಂಭ್ರಮವನ್ನು ದುಪ್ಪಟ್ಟು ಗೊಳಿಸಿದರು.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಉತ್ತಮ ಲಯದಲ್ಲಿದ್ದ ನಾಯಕ ರೋಹಿತ್ ಶರ್ಮಾ (61) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (51) ರನ್ ಗಳಿಸಿ ಶತಕದ ಜೊತೆಯಾಟ ನಡೆಸಿದರು.
ಬೃಹತ್ ಮೊತ್ತ ಬೆನ್ನತ್ತಿದ್ದ ಡಚ್ಚರಿಗೆ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಆಘಾತ ನೀಡಿದರು, ಆರಂಭಿಕ ಆಟಗಾರ ಬೆರ್ಸಿ(4) ರನ್ ಗಳಿಸಿ ಔಟಾದರು, ಅನುಭವಿ ಆಟಗಾರ ಮ್ಯಾಕ್ಸ್ ಓಡೌಡ್ (30), ಆಕ್ರಮನ್ (35), ಸೈಬ್ರಾಡ್ (45) ಹಾಗೂ ತೇಜ್ ನಿಡುಮಾನುರು (54) ರನ್ ಗಳಿಸಿದರೂ ಸಹ ಗುರಿ ತಲುಪಲಾಗದೆ 250 ರನ್ ಗಳಿಸಿ ಆಲೌಟ್ ಆದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…