ವಿಶ್ವಕಪ್: ರನ್ ಹೊಳೆ ಹರಿಸಿದ ಶ್ರೇಯಸ್ – ರಾಹುಲ್, ಡಚ್ಚರಿಗೆ ಡಿಚ್ಚಿ ಹೊಡೆದ ಭಾರತ !

ದೀಪಾವಳಿ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದ ಬೆಂಗಳೂರಿಗರಿಗೆ ಭಾರತದ ಕ್ರಿಕೆಟ್ ತಂಡ ನೆದರ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ 160 ರನ್ ಗಳ ಜಯಭೇರಿ ಬಾರಿಸಿ ಸಂಭ್ರಮವನ್ನು ದುಪ್ಪಟ್ಟು ಗೊಳಿಸಿದರು.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಉತ್ತಮ ಲಯದಲ್ಲಿದ್ದ ನಾಯಕ ರೋಹಿತ್ ಶರ್ಮಾ (61) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (51) ರನ್ ಗಳಿಸಿ ಶತಕದ ಜೊತೆಯಾಟ ನಡೆಸಿದರು.

ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (51) ರನ್ ಗಳಿಸಿದರೆ, ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ 10 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ (128*) ಹಾಗೂ ಕನ್ನಡಿಗ, ವಿಕೆಟ್ ಕೀಪರ್ ಕೆ.ಎಲ್ . ರಾಹುಲ್ 11 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ (102) ರನ್ ಗಳಿಸಿ ವಿಶ್ವಕಪ್ ನಲ್ಲಿ ಅತಿವೇಗದ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು ಹಾಗೂ ತಂಡದ ಮೊತ್ತವನ್ನು 410 ರ ಗಡಿ ದಾಟಿಸಿದರು .

ನೆದರ್ಲೆಂಡ್ ಪರವಾಗಿ ಲ್ಯಾಡ್ ಎರಡು ವಿಕೆಟ್, ಮಿಕೆರೆನ್ ಹಾಗೂ ಮಿರ್ವೆ ತಲಾ ಒಂದು ವಿಕೆಟ್ ಪಡೆದರೆ ವ್ಯಾನ್ ಬೇಕ್ 107 ರನ್ ನೀಡಿ ಒಂದೂ ವಿಕೆಟ್ ಪಡೆಯದೆ ದುಬಾರಿಯಾದರು.

ಬೃಹತ್ ಮೊತ್ತ ಬೆನ್ನತ್ತಿದ್ದ ಡಚ್ಚರಿಗೆ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಆಘಾತ ನೀಡಿದರು, ಆರಂಭಿಕ ಆಟಗಾರ ಬೆರ್ಸಿ(4) ರನ್ ಗಳಿಸಿ ಔಟಾದರು, ಅನುಭವಿ ಆಟಗಾರ ಮ್ಯಾಕ್ಸ್ ಓಡೌಡ್ (30), ಆಕ್ರಮನ್ (35), ಸೈಬ್ರಾಡ್ (45) ಹಾಗೂ ತೇಜ್ ನಿಡುಮಾನುರು (54) ರನ್ ಗಳಿಸಿದರೂ ಸಹ ಗುರಿ ತಲುಪಲಾಗದೆ 250 ರನ್ ಗಳಿಸಿ ಆಲೌಟ್ ಆದರು.

ಈ ಮೂಲಕ ಭಾರತ 160 ರನ್ ಜಯ ಸಾಧಿಸಿತು, ಭಾರತದ ಪರವಾಗಿ ವೇಗಿ ಜಸ್ಪ್ರಿತ್ ಬುಮ್ರಾ , ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ ಹಾಗೂ ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಕಬಳಿಸಿದರೆ ಬ್ಯಾಟ್ಸ್ಮನಗಳಾದ ನಾಯಕ ರೋಹಿತ್ ಶರ್ಮಾ ಹಾಗೂ ಹಿರಿಯ ಆಟಗಾರ ವಿರಾಟ್ ಕೋಹ್ಲಿ ತಲಾ ಒಂದು ವಿಕೆಟ್ ಪಡೆದರು. ಈ ಪಂದ್ಯದಲ್ಲಿ ಭಾರತ 9 ಬೌಲರ್ ಗಳು ಬೌಲಿಂಗ್ ಮಾಡಿದ್ದು ವಿಶೇಷವಾಗಿತ್ತು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

7 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago