ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮೂರು ವಿಕೆಟ್ ಗಳ ರೋಚಕ ಜಯದೊಂದಿಗೆ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸೀಸ್ ಫೈನಲ್ ತಲುಪಿತು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾದ ತಂಡದ ನಾಯಕ ತೆಂಬು ಬವುಮಾ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಅವರ ನಿರ್ಧಾರ ತಲೆಕೆಳಗಾಯಿತು, ನಾಯಕ ಬವುಮಾ (0) ಹಾಗೂ ಆರಂಭಿಕ ಆಟಗಾರ ಕ್ವಿಂಟಾನ್ ಡಿ ಕಾಕ್ (3) ಅವರನ್ನು ಕ್ರಮವಾಗಿ ಮಿಚೆಲ್ ಸ್ಟ್ರಾಕ್ ಹಾಗೂ ಜೋಷ್ ಹೆಜಲ್ವುಡ್ ವಿಕೆಟ್ ಪಡೆದರು.
ನಂತರ ಬಂದ ವ್ಯಾನ್ ಡರ್ ಡುಸೇನ್ (6) ಹಾಗೂ ಮಾಕ್ರಮ್ (10) ಹೆಚ್ಚು ಹೊತ್ತು ನಿಲ್ಲಲಿಲ್ಲ, ಆದರೆ ಆಸೀಸ್ ವೇಗಿಗಳ ವಿರುದ್ಧ ತಾಳ್ಮೆಯಿಂದ ಆಡಿದ ಮಧ್ಯಮ ಕ್ರಮಾಂಕದ ಆಟಗಾರ ಕ್ಲಾಸನ್ (47) ಹಾಗೂ ಮಿಲ್ಲರ್ (101)ರನ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.
ಸಾಧಾರಣ ಗುರಿ ಬೆನ್ನತ್ತಿದ್ದ ಆಸೀಸ್ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ (29) ಹಾಗೂ ಟ್ರಾವಿಸ್ ಹೆಡ್ (69) ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು, ಆದರೆ ಕ್ರಮವಾಗಿ ಮಾಕ್ರಮ್ ಹಾಗೂ ಕೇಶವ್ ಮಹಾರಾಜ್ ಅವರಿಗೆ ವಿಕೆಟ್ ಒಪ್ಪಿಸಿದರು.
ಕೆಳ ಕ್ರಮಾಂಕದ ಆಟಗಾರರಾದ ಜೋಷ್ ಇಂಗ್ಲಿಷ್ (28), ಸ್ಟಾಕ್೯ (16), ಪ್ಯಾಟ್ ಕಮ್ಮಿನ್ಸ್ (14) ರನ್ ಗಳಿಸಿ ತಂಡವನ್ನು ಜಯದ ದಡ ಸೇರಿಸಿದರು, ದಕ್ಷಿಣ ಆಫ್ರಿಕಾದ ಪರವಾಗಿ ಕ್ವಾಟ್ಜಿ ಮತ್ತು ಶಂಶಿ ತಲಾ ಎರಡು ವಿಕೆಟ್ ಪಡೆದರು. ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…