ವಿಶ್ವಕಪ್: ಹರಿಣಗಳನ್ನು ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಆಸೀಸ್ !

ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು  ಮೂರು ವಿಕೆಟ್ ಗಳ ರೋಚಕ ಜಯದೊಂದಿಗೆ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸೀಸ್ ಫೈನಲ್ ತಲುಪಿತು.

ಟಾಸ್ ಗೆದ್ದ ದಕ್ಷಿಣ ಆಫ್ರಿಕಾದ ತಂಡದ ನಾಯಕ ತೆಂಬು ಬವುಮಾ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಅವರ ನಿರ್ಧಾರ ತಲೆಕೆಳಗಾಯಿತು, ನಾಯಕ ಬವುಮಾ (0) ಹಾಗೂ ಆರಂಭಿಕ ಆಟಗಾರ ಕ್ವಿಂಟಾನ್ ಡಿ ಕಾಕ್ (3) ಅವರನ್ನು ಕ್ರಮವಾಗಿ ಮಿಚೆಲ್ ಸ್ಟ್ರಾಕ್ ಹಾಗೂ ಜೋಷ್ ಹೆಜಲ್ವುಡ್ ವಿಕೆಟ್ ಪಡೆದರು.

ನಂತರ ಬಂದ ವ್ಯಾನ್ ಡರ್ ಡುಸೇನ್ (6) ಹಾಗೂ ಮಾಕ್ರಮ್ (10) ಹೆಚ್ಚು ಹೊತ್ತು ನಿಲ್ಲಲಿಲ್ಲ, ಆದರೆ ಆಸೀಸ್ ವೇಗಿಗಳ ವಿರುದ್ಧ ತಾಳ್ಮೆಯಿಂದ ಆಡಿದ ಮಧ್ಯಮ ಕ್ರಮಾಂಕದ ಆಟಗಾರ ಕ್ಲಾಸನ್ (47) ಹಾಗೂ  ಮಿಲ್ಲರ್ (101)ರನ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.

ಆಸ್ಟ್ರೇಲಿಯಾದ ಪರವಾಗಿ ಮಿಚೆಲ್ ಸ್ಟ್ರಾಕ್ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್ ತಲಾ ಮೂರು ವಿಕೆಟ್ ಕಬಳಿಸಿದರೆ, ಜೋಷ್ ಹೆಜಲ್ವುಡ್ ಹಾಗೂ ಟ್ರಾವಿಸ್ ಹೆಡ್ ತಲಾ ಎರಡು ವಿಕೆಟ್ ಪಡೆದು 212 ರನ್ ಗೆ ಆಲೌಟ್ ಮಾಡಿದರು.

ಸಾಧಾರಣ ಗುರಿ ಬೆನ್ನತ್ತಿದ್ದ ಆಸೀಸ್ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ (29) ಹಾಗೂ ಟ್ರಾವಿಸ್ ಹೆಡ್ (69) ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು, ಆದರೆ ಕ್ರಮವಾಗಿ ಮಾಕ್ರಮ್ ಹಾಗೂ ಕೇಶವ್ ಮಹಾರಾಜ್ ಅವರಿಗೆ ವಿಕೆಟ್ ಒಪ್ಪಿಸಿದರು.

ಅಲ್ ರೌಂಡರ್ ಮಿಚೆಲ್ ಮಾಷ್೯ (0) ಅವರನ್ನು ರಬಾಡ ಪೆವಿಲಿಯನ್ ಗೆ ಕಳಿಸಿದರು, ಆಸ್ಟ್ರೇಲಿಯಾ ತಂಡದ ಭರವಸೆಯ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ವಲ್ (1) ಸ್ಪಿನ್ನರ್ ಶಂಸಿಗೆ ವಿಕೆಟ್ ಒಪ್ಪಿಸಿದರು.

ಕೆಳ ಕ್ರಮಾಂಕದ ಆಟಗಾರರಾದ ಜೋಷ್ ಇಂಗ್ಲಿಷ್ (28), ಸ್ಟಾಕ್೯ (16), ಪ್ಯಾಟ್ ಕಮ್ಮಿನ್ಸ್ (14) ರನ್ ಗಳಿಸಿ ತಂಡವನ್ನು ಜಯದ ದಡ ಸೇರಿಸಿದರು, ದಕ್ಷಿಣ ಆಫ್ರಿಕಾದ ಪರವಾಗಿ ಕ್ವಾಟ್ಜಿ ಮತ್ತು ಶಂಶಿ ತಲಾ ಎರಡು ವಿಕೆಟ್ ಪಡೆದರು. ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago