ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮೂರು ವಿಕೆಟ್ ಗಳ ರೋಚಕ ಜಯದೊಂದಿಗೆ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸೀಸ್ ಫೈನಲ್ ತಲುಪಿತು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾದ ತಂಡದ ನಾಯಕ ತೆಂಬು ಬವುಮಾ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಅವರ ನಿರ್ಧಾರ ತಲೆಕೆಳಗಾಯಿತು, ನಾಯಕ ಬವುಮಾ (0) ಹಾಗೂ ಆರಂಭಿಕ ಆಟಗಾರ ಕ್ವಿಂಟಾನ್ ಡಿ ಕಾಕ್ (3) ಅವರನ್ನು ಕ್ರಮವಾಗಿ ಮಿಚೆಲ್ ಸ್ಟ್ರಾಕ್ ಹಾಗೂ ಜೋಷ್ ಹೆಜಲ್ವುಡ್ ವಿಕೆಟ್ ಪಡೆದರು.
ನಂತರ ಬಂದ ವ್ಯಾನ್ ಡರ್ ಡುಸೇನ್ (6) ಹಾಗೂ ಮಾಕ್ರಮ್ (10) ಹೆಚ್ಚು ಹೊತ್ತು ನಿಲ್ಲಲಿಲ್ಲ, ಆದರೆ ಆಸೀಸ್ ವೇಗಿಗಳ ವಿರುದ್ಧ ತಾಳ್ಮೆಯಿಂದ ಆಡಿದ ಮಧ್ಯಮ ಕ್ರಮಾಂಕದ ಆಟಗಾರ ಕ್ಲಾಸನ್ (47) ಹಾಗೂ ಮಿಲ್ಲರ್ (101)ರನ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.
ಸಾಧಾರಣ ಗುರಿ ಬೆನ್ನತ್ತಿದ್ದ ಆಸೀಸ್ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ (29) ಹಾಗೂ ಟ್ರಾವಿಸ್ ಹೆಡ್ (69) ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು, ಆದರೆ ಕ್ರಮವಾಗಿ ಮಾಕ್ರಮ್ ಹಾಗೂ ಕೇಶವ್ ಮಹಾರಾಜ್ ಅವರಿಗೆ ವಿಕೆಟ್ ಒಪ್ಪಿಸಿದರು.
ಕೆಳ ಕ್ರಮಾಂಕದ ಆಟಗಾರರಾದ ಜೋಷ್ ಇಂಗ್ಲಿಷ್ (28), ಸ್ಟಾಕ್೯ (16), ಪ್ಯಾಟ್ ಕಮ್ಮಿನ್ಸ್ (14) ರನ್ ಗಳಿಸಿ ತಂಡವನ್ನು ಜಯದ ದಡ ಸೇರಿಸಿದರು, ದಕ್ಷಿಣ ಆಫ್ರಿಕಾದ ಪರವಾಗಿ ಕ್ವಾಟ್ಜಿ ಮತ್ತು ಶಂಶಿ ತಲಾ ಎರಡು ವಿಕೆಟ್ ಪಡೆದರು. ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…