ವಿಶ್ವಕಪ್: ಹರಿಣಗಳನ್ನು ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಆಸೀಸ್ !

ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು  ಮೂರು ವಿಕೆಟ್ ಗಳ ರೋಚಕ ಜಯದೊಂದಿಗೆ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸೀಸ್ ಫೈನಲ್ ತಲುಪಿತು.

ಟಾಸ್ ಗೆದ್ದ ದಕ್ಷಿಣ ಆಫ್ರಿಕಾದ ತಂಡದ ನಾಯಕ ತೆಂಬು ಬವುಮಾ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಅವರ ನಿರ್ಧಾರ ತಲೆಕೆಳಗಾಯಿತು, ನಾಯಕ ಬವುಮಾ (0) ಹಾಗೂ ಆರಂಭಿಕ ಆಟಗಾರ ಕ್ವಿಂಟಾನ್ ಡಿ ಕಾಕ್ (3) ಅವರನ್ನು ಕ್ರಮವಾಗಿ ಮಿಚೆಲ್ ಸ್ಟ್ರಾಕ್ ಹಾಗೂ ಜೋಷ್ ಹೆಜಲ್ವುಡ್ ವಿಕೆಟ್ ಪಡೆದರು.

ನಂತರ ಬಂದ ವ್ಯಾನ್ ಡರ್ ಡುಸೇನ್ (6) ಹಾಗೂ ಮಾಕ್ರಮ್ (10) ಹೆಚ್ಚು ಹೊತ್ತು ನಿಲ್ಲಲಿಲ್ಲ, ಆದರೆ ಆಸೀಸ್ ವೇಗಿಗಳ ವಿರುದ್ಧ ತಾಳ್ಮೆಯಿಂದ ಆಡಿದ ಮಧ್ಯಮ ಕ್ರಮಾಂಕದ ಆಟಗಾರ ಕ್ಲಾಸನ್ (47) ಹಾಗೂ  ಮಿಲ್ಲರ್ (101)ರನ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.

ಆಸ್ಟ್ರೇಲಿಯಾದ ಪರವಾಗಿ ಮಿಚೆಲ್ ಸ್ಟ್ರಾಕ್ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್ ತಲಾ ಮೂರು ವಿಕೆಟ್ ಕಬಳಿಸಿದರೆ, ಜೋಷ್ ಹೆಜಲ್ವುಡ್ ಹಾಗೂ ಟ್ರಾವಿಸ್ ಹೆಡ್ ತಲಾ ಎರಡು ವಿಕೆಟ್ ಪಡೆದು 212 ರನ್ ಗೆ ಆಲೌಟ್ ಮಾಡಿದರು.

ಸಾಧಾರಣ ಗುರಿ ಬೆನ್ನತ್ತಿದ್ದ ಆಸೀಸ್ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ (29) ಹಾಗೂ ಟ್ರಾವಿಸ್ ಹೆಡ್ (69) ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು, ಆದರೆ ಕ್ರಮವಾಗಿ ಮಾಕ್ರಮ್ ಹಾಗೂ ಕೇಶವ್ ಮಹಾರಾಜ್ ಅವರಿಗೆ ವಿಕೆಟ್ ಒಪ್ಪಿಸಿದರು.

ಅಲ್ ರೌಂಡರ್ ಮಿಚೆಲ್ ಮಾಷ್೯ (0) ಅವರನ್ನು ರಬಾಡ ಪೆವಿಲಿಯನ್ ಗೆ ಕಳಿಸಿದರು, ಆಸ್ಟ್ರೇಲಿಯಾ ತಂಡದ ಭರವಸೆಯ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ವಲ್ (1) ಸ್ಪಿನ್ನರ್ ಶಂಸಿಗೆ ವಿಕೆಟ್ ಒಪ್ಪಿಸಿದರು.

ಕೆಳ ಕ್ರಮಾಂಕದ ಆಟಗಾರರಾದ ಜೋಷ್ ಇಂಗ್ಲಿಷ್ (28), ಸ್ಟಾಕ್೯ (16), ಪ್ಯಾಟ್ ಕಮ್ಮಿನ್ಸ್ (14) ರನ್ ಗಳಿಸಿ ತಂಡವನ್ನು ಜಯದ ದಡ ಸೇರಿಸಿದರು, ದಕ್ಷಿಣ ಆಫ್ರಿಕಾದ ಪರವಾಗಿ ಕ್ವಾಟ್ಜಿ ಮತ್ತು ಶಂಶಿ ತಲಾ ಎರಡು ವಿಕೆಟ್ ಪಡೆದರು. ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

13 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago