ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮೂರು ವಿಕೆಟ್ ಗಳ ರೋಚಕ ಜಯದೊಂದಿಗೆ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸೀಸ್ ಫೈನಲ್ ತಲುಪಿತು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾದ ತಂಡದ ನಾಯಕ ತೆಂಬು ಬವುಮಾ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಅವರ ನಿರ್ಧಾರ ತಲೆಕೆಳಗಾಯಿತು, ನಾಯಕ ಬವುಮಾ (0) ಹಾಗೂ ಆರಂಭಿಕ ಆಟಗಾರ ಕ್ವಿಂಟಾನ್ ಡಿ ಕಾಕ್ (3) ಅವರನ್ನು ಕ್ರಮವಾಗಿ ಮಿಚೆಲ್ ಸ್ಟ್ರಾಕ್ ಹಾಗೂ ಜೋಷ್ ಹೆಜಲ್ವುಡ್ ವಿಕೆಟ್ ಪಡೆದರು.
ನಂತರ ಬಂದ ವ್ಯಾನ್ ಡರ್ ಡುಸೇನ್ (6) ಹಾಗೂ ಮಾಕ್ರಮ್ (10) ಹೆಚ್ಚು ಹೊತ್ತು ನಿಲ್ಲಲಿಲ್ಲ, ಆದರೆ ಆಸೀಸ್ ವೇಗಿಗಳ ವಿರುದ್ಧ ತಾಳ್ಮೆಯಿಂದ ಆಡಿದ ಮಧ್ಯಮ ಕ್ರಮಾಂಕದ ಆಟಗಾರ ಕ್ಲಾಸನ್ (47) ಹಾಗೂ ಮಿಲ್ಲರ್ (101)ರನ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.
ಸಾಧಾರಣ ಗುರಿ ಬೆನ್ನತ್ತಿದ್ದ ಆಸೀಸ್ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ (29) ಹಾಗೂ ಟ್ರಾವಿಸ್ ಹೆಡ್ (69) ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು, ಆದರೆ ಕ್ರಮವಾಗಿ ಮಾಕ್ರಮ್ ಹಾಗೂ ಕೇಶವ್ ಮಹಾರಾಜ್ ಅವರಿಗೆ ವಿಕೆಟ್ ಒಪ್ಪಿಸಿದರು.
ಕೆಳ ಕ್ರಮಾಂಕದ ಆಟಗಾರರಾದ ಜೋಷ್ ಇಂಗ್ಲಿಷ್ (28), ಸ್ಟಾಕ್೯ (16), ಪ್ಯಾಟ್ ಕಮ್ಮಿನ್ಸ್ (14) ರನ್ ಗಳಿಸಿ ತಂಡವನ್ನು ಜಯದ ದಡ ಸೇರಿಸಿದರು, ದಕ್ಷಿಣ ಆಫ್ರಿಕಾದ ಪರವಾಗಿ ಕ್ವಾಟ್ಜಿ ಮತ್ತು ಶಂಶಿ ತಲಾ ಎರಡು ವಿಕೆಟ್ ಪಡೆದರು. ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…