ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮೂರು ವಿಕೆಟ್ ಗಳ ರೋಚಕ ಜಯದೊಂದಿಗೆ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸೀಸ್ ಫೈನಲ್ ತಲುಪಿತು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾದ ತಂಡದ ನಾಯಕ ತೆಂಬು ಬವುಮಾ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಅವರ ನಿರ್ಧಾರ ತಲೆಕೆಳಗಾಯಿತು, ನಾಯಕ ಬವುಮಾ (0) ಹಾಗೂ ಆರಂಭಿಕ ಆಟಗಾರ ಕ್ವಿಂಟಾನ್ ಡಿ ಕಾಕ್ (3) ಅವರನ್ನು ಕ್ರಮವಾಗಿ ಮಿಚೆಲ್ ಸ್ಟ್ರಾಕ್ ಹಾಗೂ ಜೋಷ್ ಹೆಜಲ್ವುಡ್ ವಿಕೆಟ್ ಪಡೆದರು.
ನಂತರ ಬಂದ ವ್ಯಾನ್ ಡರ್ ಡುಸೇನ್ (6) ಹಾಗೂ ಮಾಕ್ರಮ್ (10) ಹೆಚ್ಚು ಹೊತ್ತು ನಿಲ್ಲಲಿಲ್ಲ, ಆದರೆ ಆಸೀಸ್ ವೇಗಿಗಳ ವಿರುದ್ಧ ತಾಳ್ಮೆಯಿಂದ ಆಡಿದ ಮಧ್ಯಮ ಕ್ರಮಾಂಕದ ಆಟಗಾರ ಕ್ಲಾಸನ್ (47) ಹಾಗೂ ಮಿಲ್ಲರ್ (101)ರನ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.
ಸಾಧಾರಣ ಗುರಿ ಬೆನ್ನತ್ತಿದ್ದ ಆಸೀಸ್ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ (29) ಹಾಗೂ ಟ್ರಾವಿಸ್ ಹೆಡ್ (69) ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು, ಆದರೆ ಕ್ರಮವಾಗಿ ಮಾಕ್ರಮ್ ಹಾಗೂ ಕೇಶವ್ ಮಹಾರಾಜ್ ಅವರಿಗೆ ವಿಕೆಟ್ ಒಪ್ಪಿಸಿದರು.
ಕೆಳ ಕ್ರಮಾಂಕದ ಆಟಗಾರರಾದ ಜೋಷ್ ಇಂಗ್ಲಿಷ್ (28), ಸ್ಟಾಕ್೯ (16), ಪ್ಯಾಟ್ ಕಮ್ಮಿನ್ಸ್ (14) ರನ್ ಗಳಿಸಿ ತಂಡವನ್ನು ಜಯದ ದಡ ಸೇರಿಸಿದರು, ದಕ್ಷಿಣ ಆಫ್ರಿಕಾದ ಪರವಾಗಿ ಕ್ವಾಟ್ಜಿ ಮತ್ತು ಶಂಶಿ ತಲಾ ಎರಡು ವಿಕೆಟ್ ಪಡೆದರು. ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…