ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮೂರು ವಿಕೆಟ್ ಗಳ ರೋಚಕ ಜಯದೊಂದಿಗೆ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸೀಸ್ ಫೈನಲ್ ತಲುಪಿತು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾದ ತಂಡದ ನಾಯಕ ತೆಂಬು ಬವುಮಾ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಅವರ ನಿರ್ಧಾರ ತಲೆಕೆಳಗಾಯಿತು, ನಾಯಕ ಬವುಮಾ (0) ಹಾಗೂ ಆರಂಭಿಕ ಆಟಗಾರ ಕ್ವಿಂಟಾನ್ ಡಿ ಕಾಕ್ (3) ಅವರನ್ನು ಕ್ರಮವಾಗಿ ಮಿಚೆಲ್ ಸ್ಟ್ರಾಕ್ ಹಾಗೂ ಜೋಷ್ ಹೆಜಲ್ವುಡ್ ವಿಕೆಟ್ ಪಡೆದರು.
ನಂತರ ಬಂದ ವ್ಯಾನ್ ಡರ್ ಡುಸೇನ್ (6) ಹಾಗೂ ಮಾಕ್ರಮ್ (10) ಹೆಚ್ಚು ಹೊತ್ತು ನಿಲ್ಲಲಿಲ್ಲ, ಆದರೆ ಆಸೀಸ್ ವೇಗಿಗಳ ವಿರುದ್ಧ ತಾಳ್ಮೆಯಿಂದ ಆಡಿದ ಮಧ್ಯಮ ಕ್ರಮಾಂಕದ ಆಟಗಾರ ಕ್ಲಾಸನ್ (47) ಹಾಗೂ ಮಿಲ್ಲರ್ (101)ರನ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.
ಸಾಧಾರಣ ಗುರಿ ಬೆನ್ನತ್ತಿದ್ದ ಆಸೀಸ್ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ (29) ಹಾಗೂ ಟ್ರಾವಿಸ್ ಹೆಡ್ (69) ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು, ಆದರೆ ಕ್ರಮವಾಗಿ ಮಾಕ್ರಮ್ ಹಾಗೂ ಕೇಶವ್ ಮಹಾರಾಜ್ ಅವರಿಗೆ ವಿಕೆಟ್ ಒಪ್ಪಿಸಿದರು.
ಕೆಳ ಕ್ರಮಾಂಕದ ಆಟಗಾರರಾದ ಜೋಷ್ ಇಂಗ್ಲಿಷ್ (28), ಸ್ಟಾಕ್೯ (16), ಪ್ಯಾಟ್ ಕಮ್ಮಿನ್ಸ್ (14) ರನ್ ಗಳಿಸಿ ತಂಡವನ್ನು ಜಯದ ದಡ ಸೇರಿಸಿದರು, ದಕ್ಷಿಣ ಆಫ್ರಿಕಾದ ಪರವಾಗಿ ಕ್ವಾಟ್ಜಿ ಮತ್ತು ಶಂಶಿ ತಲಾ ಎರಡು ವಿಕೆಟ್ ಪಡೆದರು. ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…