ವಿಶ್ವಕರ್ಮ ಯೋಜನೆ ತರಬೇತಿಯಲ್ಲಿ ಕಳ್ಳಾಟ..? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಅಕ್ರಮದ ವಾಸನೆ..? ಮಾಧ್ಯಮದವರಿಗೆ ಸೂಕ್ತ ಮಾಹಿತಿ ಒದಗಿಸದೇ ನುಣಿಚಿಕೊಳ್ಳುವ ಯತ್ನ: ನುರಿತ ತರಬೇತುದಾರರ ಕೊರತೆ..?

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ತರಬೇತಿ ಅಧಿಕಾರಿಗಳ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಾದಿ ತಪ್ಪುತ್ತಿದ್ದು, ತರಬೇತಿಗೆಂದು ಜನರನ್ನು ತರಬೇತಿ ಕೇಂದ್ರಕ್ಕೆ ಕರೆಸಿ ಅದು ಸರಿ ಇಲ್ಲ, ಇದು ಸರಿ ಇಲ್ಲ ಎಂದು ದಿನಪೂರ್ತಿ ಅಲ್ಲೇ ಇರಿಸಿಕೊಂಡು ಯಾವ ತರಬೇತಿ ನೀಡದೇ ಮನೆಗೆ ವಾಪಸ್ ಕಳುಹಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಲಕ್ಷಾಂತರ ರೂ. ದುರುಪಯೋಗವಾಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಲಾಗಿನ್ ಲಾಗ್ ಔಟ್ ಗೆ ಸೀಮಿತವಾದ ಬುಟ್ಟಿ ನೇಯ್ಗೆ ತರಬೇತಿ…!

ನಗರದಲ್ಲಿ ಕಳೆದ ಮೂರು ದಿನಗಳಿಂದ ಬುಟ್ಟಿ ನೇಯ್ಗೆ ತರಬೇತಿ ನಡೆಯುತ್ತಿದ್ದು, ಯಾವುದೇ ರೀತಿಯ ತರಬೇತಿ ನೀಡದೇ ಬೆಳಗ್ಗೆ ಸಂಜೆ ಲಾಗಿನ್ ಲಾಗ್ ಔಟ್ ಮಾಡಿಸಿಕೊಂಡು‌ ಮನೆಗೆ ಕಳುಹಿಸಲಾಗುತ್ತಿದೆ ಎಂದು ಹೆಸರನ್ನು ಹೇಳುವುದುಕ್ಕೆ ಇಚ್ಛಿಸದ ತರಬೇತಿ ಪಡೆಯುವವರು ತಿಳಿಸಿದ್ದಾರೆ.

ತರಬೇತಿ ಸ್ಥಳದಲ್ಲಿನ ಸಿಬ್ಬಂದಿಗೆ ತರಬೇತಿ ಕುರಿತು ಪ್ರಶ್ನೆ , ತಾಂತ್ರಿಕ ದೋಷ ಇದೆ. ಆದ್ದರಿಂದ ಹೀಗೆ ಆಗುತ್ತಿದೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಕುಶಲಕರ್ಮಿಗಳಿಗೆ ಬೂಸ್ಟರ್‌ ಡೋಸ್‌ ಆಗಬೇಕಿದ್ದ ಈ ಯೋಜನೆ ಆರಂಭಗೊಂಡು ಬರೋಬ್ಬರಿ ಒಂದು ವರ್ಷ ಕಳೆದರೂ ಯೋಜನೆ ಸರಿಯಾಗಿ ಟೇಕಾಫ್‌ ಆಗದೇ ಹಳ್ಳ ಹಿಡಿದಿದೆ. ಯೋಜನೆಯಡಿ ಗುರುತಿಸಿರುವ 18 ಕೌಶಲ ತರಬೇತಿ ಪೈಕಿ ಕೇವಲ 2ಕ್ಕೆ ಮಾತ್ರ ತರಬೇತಿ ಸಿಗುತ್ತಿದೆ. ಬಹುತೇಕ ಕೌಶಲ ತರಬೇತಿಗಳಿಗೆ ತರಬೇತುದಾರರೇ ಇಲ್ಲದಿರುವುದು ಹಿನ್ನಡೆಗೆ ಕಾರಣವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ತರಬೇತಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀ ಪರಿಶೀಲನೆ ನಡೆಸಬೇಕಿದೆ.

ಅಲ್ಲದೆ ತರಬೇತಿ ಕೇಂದ್ರಗಳ ಸಿಸಿ ಕ್ಯಾಮೆರಾಗಳ ದೃಶ್ಯವನ್ನು ವಶಕ್ಕೆ ಪಡೆದು, ನೀಡಲಾದ ತರಬೇತಿ ಏನು.? ಭಾಗಿಯಾದ ಫಲಾನುಭವಿಗಳು ಎಷ್ಟು..? ತರಬೇತುದಾರರು ಯಾರು..? ಎಂಬ ಕುರಿತು ತನಿಖೆ ನಡೆಸಿ, ತರಬೇತಿ ಹೆಸರಲ್ಲಿ ಲಕ್ಷಾಂತರ ರೂ. ಹಣ ದುರುಪಯೋಗ ಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರ ಮೃತ್ಯುಂಜಯ ಹೇಳಿದ್ದಾರೆ.

Ramesh Babu

Journalist

Recent Posts

ಇಂದಿನಿಂದ “ದೊಡ್ಡಬಳ್ಳಾಪುರ ಸೀರೆ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸೀರೆ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

2 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

6 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

7 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

13 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

24 hours ago