ವಿಶ್ವಕರ್ಮ ಯೋಜನೆ ತರಬೇತಿಯಲ್ಲಿ ಕಳ್ಳಾಟ..? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಅಕ್ರಮದ ವಾಸನೆ..? ಮಾಧ್ಯಮದವರಿಗೆ ಸೂಕ್ತ ಮಾಹಿತಿ ಒದಗಿಸದೇ ನುಣಿಚಿಕೊಳ್ಳುವ ಯತ್ನ: ನುರಿತ ತರಬೇತುದಾರರ ಕೊರತೆ..?

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ತರಬೇತಿ ಅಧಿಕಾರಿಗಳ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಾದಿ ತಪ್ಪುತ್ತಿದ್ದು, ತರಬೇತಿಗೆಂದು ಜನರನ್ನು ತರಬೇತಿ ಕೇಂದ್ರಕ್ಕೆ ಕರೆಸಿ ಅದು ಸರಿ ಇಲ್ಲ, ಇದು ಸರಿ ಇಲ್ಲ ಎಂದು ದಿನಪೂರ್ತಿ ಅಲ್ಲೇ ಇರಿಸಿಕೊಂಡು ಯಾವ ತರಬೇತಿ ನೀಡದೇ ಮನೆಗೆ ವಾಪಸ್ ಕಳುಹಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಲಕ್ಷಾಂತರ ರೂ. ದುರುಪಯೋಗವಾಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಲಾಗಿನ್ ಲಾಗ್ ಔಟ್ ಗೆ ಸೀಮಿತವಾದ ಬುಟ್ಟಿ ನೇಯ್ಗೆ ತರಬೇತಿ…!

ನಗರದಲ್ಲಿ ಕಳೆದ ಮೂರು ದಿನಗಳಿಂದ ಬುಟ್ಟಿ ನೇಯ್ಗೆ ತರಬೇತಿ ನಡೆಯುತ್ತಿದ್ದು, ಯಾವುದೇ ರೀತಿಯ ತರಬೇತಿ ನೀಡದೇ ಬೆಳಗ್ಗೆ ಸಂಜೆ ಲಾಗಿನ್ ಲಾಗ್ ಔಟ್ ಮಾಡಿಸಿಕೊಂಡು‌ ಮನೆಗೆ ಕಳುಹಿಸಲಾಗುತ್ತಿದೆ ಎಂದು ಹೆಸರನ್ನು ಹೇಳುವುದುಕ್ಕೆ ಇಚ್ಛಿಸದ ತರಬೇತಿ ಪಡೆಯುವವರು ತಿಳಿಸಿದ್ದಾರೆ.

ತರಬೇತಿ ಸ್ಥಳದಲ್ಲಿನ ಸಿಬ್ಬಂದಿಗೆ ತರಬೇತಿ ಕುರಿತು ಪ್ರಶ್ನೆ , ತಾಂತ್ರಿಕ ದೋಷ ಇದೆ. ಆದ್ದರಿಂದ ಹೀಗೆ ಆಗುತ್ತಿದೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಕುಶಲಕರ್ಮಿಗಳಿಗೆ ಬೂಸ್ಟರ್‌ ಡೋಸ್‌ ಆಗಬೇಕಿದ್ದ ಈ ಯೋಜನೆ ಆರಂಭಗೊಂಡು ಬರೋಬ್ಬರಿ ಒಂದು ವರ್ಷ ಕಳೆದರೂ ಯೋಜನೆ ಸರಿಯಾಗಿ ಟೇಕಾಫ್‌ ಆಗದೇ ಹಳ್ಳ ಹಿಡಿದಿದೆ. ಯೋಜನೆಯಡಿ ಗುರುತಿಸಿರುವ 18 ಕೌಶಲ ತರಬೇತಿ ಪೈಕಿ ಕೇವಲ 2ಕ್ಕೆ ಮಾತ್ರ ತರಬೇತಿ ಸಿಗುತ್ತಿದೆ. ಬಹುತೇಕ ಕೌಶಲ ತರಬೇತಿಗಳಿಗೆ ತರಬೇತುದಾರರೇ ಇಲ್ಲದಿರುವುದು ಹಿನ್ನಡೆಗೆ ಕಾರಣವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ತರಬೇತಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀ ಪರಿಶೀಲನೆ ನಡೆಸಬೇಕಿದೆ.

ಅಲ್ಲದೆ ತರಬೇತಿ ಕೇಂದ್ರಗಳ ಸಿಸಿ ಕ್ಯಾಮೆರಾಗಳ ದೃಶ್ಯವನ್ನು ವಶಕ್ಕೆ ಪಡೆದು, ನೀಡಲಾದ ತರಬೇತಿ ಏನು.? ಭಾಗಿಯಾದ ಫಲಾನುಭವಿಗಳು ಎಷ್ಟು..? ತರಬೇತುದಾರರು ಯಾರು..? ಎಂಬ ಕುರಿತು ತನಿಖೆ ನಡೆಸಿ, ತರಬೇತಿ ಹೆಸರಲ್ಲಿ ಲಕ್ಷಾಂತರ ರೂ. ಹಣ ದುರುಪಯೋಗ ಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರ ಮೃತ್ಯುಂಜಯ ಹೇಳಿದ್ದಾರೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

5 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

6 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

19 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

19 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

19 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

20 hours ago