ವಿಶ್ವಕರ್ಮ ಯೋಜನೆ ತರಬೇತಿಯಲ್ಲಿ ಕಳ್ಳಾಟ..? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಅಕ್ರಮದ ವಾಸನೆ..? ಮಾಧ್ಯಮದವರಿಗೆ ಸೂಕ್ತ ಮಾಹಿತಿ ಒದಗಿಸದೇ ನುಣಿಚಿಕೊಳ್ಳುವ ಯತ್ನ: ನುರಿತ ತರಬೇತುದಾರರ ಕೊರತೆ..?

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ತರಬೇತಿ ಅಧಿಕಾರಿಗಳ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಾದಿ ತಪ್ಪುತ್ತಿದ್ದು, ತರಬೇತಿಗೆಂದು ಜನರನ್ನು ತರಬೇತಿ ಕೇಂದ್ರಕ್ಕೆ ಕರೆಸಿ ಅದು ಸರಿ ಇಲ್ಲ, ಇದು ಸರಿ ಇಲ್ಲ ಎಂದು ದಿನಪೂರ್ತಿ ಅಲ್ಲೇ ಇರಿಸಿಕೊಂಡು ಯಾವ ತರಬೇತಿ ನೀಡದೇ ಮನೆಗೆ ವಾಪಸ್ ಕಳುಹಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಲಕ್ಷಾಂತರ ರೂ. ದುರುಪಯೋಗವಾಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಲಾಗಿನ್ ಲಾಗ್ ಔಟ್ ಗೆ ಸೀಮಿತವಾದ ಬುಟ್ಟಿ ನೇಯ್ಗೆ ತರಬೇತಿ…!

ನಗರದಲ್ಲಿ ಕಳೆದ ಮೂರು ದಿನಗಳಿಂದ ಬುಟ್ಟಿ ನೇಯ್ಗೆ ತರಬೇತಿ ನಡೆಯುತ್ತಿದ್ದು, ಯಾವುದೇ ರೀತಿಯ ತರಬೇತಿ ನೀಡದೇ ಬೆಳಗ್ಗೆ ಸಂಜೆ ಲಾಗಿನ್ ಲಾಗ್ ಔಟ್ ಮಾಡಿಸಿಕೊಂಡು‌ ಮನೆಗೆ ಕಳುಹಿಸಲಾಗುತ್ತಿದೆ ಎಂದು ಹೆಸರನ್ನು ಹೇಳುವುದುಕ್ಕೆ ಇಚ್ಛಿಸದ ತರಬೇತಿ ಪಡೆಯುವವರು ತಿಳಿಸಿದ್ದಾರೆ.

ತರಬೇತಿ ಸ್ಥಳದಲ್ಲಿನ ಸಿಬ್ಬಂದಿಗೆ ತರಬೇತಿ ಕುರಿತು ಪ್ರಶ್ನೆ , ತಾಂತ್ರಿಕ ದೋಷ ಇದೆ. ಆದ್ದರಿಂದ ಹೀಗೆ ಆಗುತ್ತಿದೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಕುಶಲಕರ್ಮಿಗಳಿಗೆ ಬೂಸ್ಟರ್‌ ಡೋಸ್‌ ಆಗಬೇಕಿದ್ದ ಈ ಯೋಜನೆ ಆರಂಭಗೊಂಡು ಬರೋಬ್ಬರಿ ಒಂದು ವರ್ಷ ಕಳೆದರೂ ಯೋಜನೆ ಸರಿಯಾಗಿ ಟೇಕಾಫ್‌ ಆಗದೇ ಹಳ್ಳ ಹಿಡಿದಿದೆ. ಯೋಜನೆಯಡಿ ಗುರುತಿಸಿರುವ 18 ಕೌಶಲ ತರಬೇತಿ ಪೈಕಿ ಕೇವಲ 2ಕ್ಕೆ ಮಾತ್ರ ತರಬೇತಿ ಸಿಗುತ್ತಿದೆ. ಬಹುತೇಕ ಕೌಶಲ ತರಬೇತಿಗಳಿಗೆ ತರಬೇತುದಾರರೇ ಇಲ್ಲದಿರುವುದು ಹಿನ್ನಡೆಗೆ ಕಾರಣವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ತರಬೇತಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀ ಪರಿಶೀಲನೆ ನಡೆಸಬೇಕಿದೆ.

ಅಲ್ಲದೆ ತರಬೇತಿ ಕೇಂದ್ರಗಳ ಸಿಸಿ ಕ್ಯಾಮೆರಾಗಳ ದೃಶ್ಯವನ್ನು ವಶಕ್ಕೆ ಪಡೆದು, ನೀಡಲಾದ ತರಬೇತಿ ಏನು.? ಭಾಗಿಯಾದ ಫಲಾನುಭವಿಗಳು ಎಷ್ಟು..? ತರಬೇತುದಾರರು ಯಾರು..? ಎಂಬ ಕುರಿತು ತನಿಖೆ ನಡೆಸಿ, ತರಬೇತಿ ಹೆಸರಲ್ಲಿ ಲಕ್ಷಾಂತರ ರೂ. ಹಣ ದುರುಪಯೋಗ ಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರ ಮೃತ್ಯುಂಜಯ ಹೇಳಿದ್ದಾರೆ.

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

28 minutes ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

49 minutes ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

2 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

2 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

3 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

11 hours ago