ವಿಶ್ವಕರ್ಮ ಯೋಜನೆ ತರಬೇತಿಯಲ್ಲಿ ಕಳ್ಳಾಟ..? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಅಕ್ರಮದ ವಾಸನೆ..? ಮಾಧ್ಯಮದವರಿಗೆ ಸೂಕ್ತ ಮಾಹಿತಿ ಒದಗಿಸದೇ ನುಣಿಚಿಕೊಳ್ಳುವ ಯತ್ನ: ನುರಿತ ತರಬೇತುದಾರರ ಕೊರತೆ..?

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ತರಬೇತಿ ಅಧಿಕಾರಿಗಳ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಾದಿ ತಪ್ಪುತ್ತಿದ್ದು, ತರಬೇತಿಗೆಂದು ಜನರನ್ನು ತರಬೇತಿ ಕೇಂದ್ರಕ್ಕೆ ಕರೆಸಿ ಅದು ಸರಿ ಇಲ್ಲ, ಇದು ಸರಿ ಇಲ್ಲ ಎಂದು ದಿನಪೂರ್ತಿ ಅಲ್ಲೇ ಇರಿಸಿಕೊಂಡು ಯಾವ ತರಬೇತಿ ನೀಡದೇ ಮನೆಗೆ ವಾಪಸ್ ಕಳುಹಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಲಕ್ಷಾಂತರ ರೂ. ದುರುಪಯೋಗವಾಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಲಾಗಿನ್ ಲಾಗ್ ಔಟ್ ಗೆ ಸೀಮಿತವಾದ ಬುಟ್ಟಿ ನೇಯ್ಗೆ ತರಬೇತಿ…!

ನಗರದಲ್ಲಿ ಕಳೆದ ಮೂರು ದಿನಗಳಿಂದ ಬುಟ್ಟಿ ನೇಯ್ಗೆ ತರಬೇತಿ ನಡೆಯುತ್ತಿದ್ದು, ಯಾವುದೇ ರೀತಿಯ ತರಬೇತಿ ನೀಡದೇ ಬೆಳಗ್ಗೆ ಸಂಜೆ ಲಾಗಿನ್ ಲಾಗ್ ಔಟ್ ಮಾಡಿಸಿಕೊಂಡು‌ ಮನೆಗೆ ಕಳುಹಿಸಲಾಗುತ್ತಿದೆ ಎಂದು ಹೆಸರನ್ನು ಹೇಳುವುದುಕ್ಕೆ ಇಚ್ಛಿಸದ ತರಬೇತಿ ಪಡೆಯುವವರು ತಿಳಿಸಿದ್ದಾರೆ.

ತರಬೇತಿ ಸ್ಥಳದಲ್ಲಿನ ಸಿಬ್ಬಂದಿಗೆ ತರಬೇತಿ ಕುರಿತು ಪ್ರಶ್ನೆ , ತಾಂತ್ರಿಕ ದೋಷ ಇದೆ. ಆದ್ದರಿಂದ ಹೀಗೆ ಆಗುತ್ತಿದೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಕುಶಲಕರ್ಮಿಗಳಿಗೆ ಬೂಸ್ಟರ್‌ ಡೋಸ್‌ ಆಗಬೇಕಿದ್ದ ಈ ಯೋಜನೆ ಆರಂಭಗೊಂಡು ಬರೋಬ್ಬರಿ ಒಂದು ವರ್ಷ ಕಳೆದರೂ ಯೋಜನೆ ಸರಿಯಾಗಿ ಟೇಕಾಫ್‌ ಆಗದೇ ಹಳ್ಳ ಹಿಡಿದಿದೆ. ಯೋಜನೆಯಡಿ ಗುರುತಿಸಿರುವ 18 ಕೌಶಲ ತರಬೇತಿ ಪೈಕಿ ಕೇವಲ 2ಕ್ಕೆ ಮಾತ್ರ ತರಬೇತಿ ಸಿಗುತ್ತಿದೆ. ಬಹುತೇಕ ಕೌಶಲ ತರಬೇತಿಗಳಿಗೆ ತರಬೇತುದಾರರೇ ಇಲ್ಲದಿರುವುದು ಹಿನ್ನಡೆಗೆ ಕಾರಣವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ತರಬೇತಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀ ಪರಿಶೀಲನೆ ನಡೆಸಬೇಕಿದೆ.

ಅಲ್ಲದೆ ತರಬೇತಿ ಕೇಂದ್ರಗಳ ಸಿಸಿ ಕ್ಯಾಮೆರಾಗಳ ದೃಶ್ಯವನ್ನು ವಶಕ್ಕೆ ಪಡೆದು, ನೀಡಲಾದ ತರಬೇತಿ ಏನು.? ಭಾಗಿಯಾದ ಫಲಾನುಭವಿಗಳು ಎಷ್ಟು..? ತರಬೇತುದಾರರು ಯಾರು..? ಎಂಬ ಕುರಿತು ತನಿಖೆ ನಡೆಸಿ, ತರಬೇತಿ ಹೆಸರಲ್ಲಿ ಲಕ್ಷಾಂತರ ರೂ. ಹಣ ದುರುಪಯೋಗ ಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರ ಮೃತ್ಯುಂಜಯ ಹೇಳಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

8 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

16 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago