Categories: ಕೋಲಾರ

ವಿಶ್ವದ ಎತ್ತರದ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಕಾಲ್ನಡಿಗೆ ಜಾಥಾ

ಕೋಲಾರ: ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 200 ಮೀಟರ್ ಎತ್ತರದ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯಿಸಿ ಸೋಮವಾರ ಭೀಮ್ ಪ್ರಜಾ ಸಂಘದ ವತಿಯಿಂದ ನಗರದ ನಚಿಕೇತನ ನಿಲಯದಿಂದ ಎರಡನೇ ಹಂತದ ಸ್ವಾಭಿಮಾನಿಗಳ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು,

ಜಾಥವು ಕೋಲಾರ ನಗರದಲ್ಲಿ ಪ್ರಚಾರಗೊಳಿಸಿ ನಂತರ ಹೊಸಕೋಟೆ ಮಾರ್ಗದಿಂದ ಸಾಗಿ ನವೆಂಬರ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸೇರಲಿದೆ ಅಂದು ರಾಜ್ಯಾದ್ಯಂತ ಸಂಘಟನೆಯ ಕಾರ್ಯಕರ್ತರು ಮುಖಂಡರು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಅಧ್ಯಕ್ಷ ವೈಟ್ ಫೀಲ್ಡ್ ಮುರಗೇಶ್ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು ಬೆಂಗಳೂರು ಹೃದಯ ಭಾಗದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆಗಾಗಿ ಸಾಕಷ್ಟು ಬಾರಿ ಪ್ರತಿಭಟನೆ ಹೋರಾಟ ಕಾಲ್ನಡಿಗೆಯ ಮೂಲಕ ಒತ್ತಾಯಿಸಿದರು ಯಾವುದೇ ಪ್ರಯೋಜನವಾಗಲಿಲ್ಲ ಹಿಂದೆ ಬೀದರ್ ನಿಂದ ಬೆಂಗಳೂರಿಗೆ ಜಾಥಾ ಮೂಲಕ ಒತ್ತಾಯಿಸಿದರು ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿಲ್ಲದ ಭಾಗವಾಗಿ ಎರಡನೇ ಹಂತದ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು

ರಾಜ್ಯದ ಕಾಂಗ್ರೆಸ್ ಸರ್ಕಾರವು ದಲಿತರ, ಹಿಂದುಳಿದ ವರ್ಗಗಳ ಅದರಲ್ಲೂ ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರ ಪರವಾಗಿ ಅಂತ ಹೇಳುವ ಸಿದ್ದರಾಮಯ್ಯ ಪುತ್ಥಳಿ ನಿರ್ಮಾಣಕ್ಕೆ ಯಾಕೆ ವಿಳಂಬ ವಹಿಸಿದ್ದಾರೆ ರಾಜ್ಯ ಸರ್ಕಾರವು ದಲಿತರ ಅಭಿವೃದ್ಧಿಗೆ ಇರುವ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಹಣವನ್ನು ಪಂಚ ಗ್ಯಾರಂಟಿಗಳಿಗೆ ಹಣ ಬಳಕೆ ಮಾಡಿಕೊಂಡಿದ್ದಾರೆ ದಲಿತರ ಬಗ್ಗೆ ಗೌರವ ಇದ್ದರೆ ಕೂಡಲೇ ಪುತ್ಥಳಿ ಸ್ಥಾಪನೆಗೆ ಮುಂದಾಗಲಿ ಇಲ್ಲದೇ ಹೋದರೆ ಪ್ರಾರಂಭ ಮಾಡುವ ತನಕ ಫ್ರೀಡಂ ಪಾರ್ಕ್‌ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ಕರ್ನಾಟಕ ಜನಾಂದೋಲನ ಸಂಘಟನೆಯ ರಾಜ್ಯ ಅಧ್ಯಕ್ಷ ಮರಿಯಪ್ಪ, ಭೀಮ್ ಪ್ರಜಾ ಸಂಘದ ಜಿಲ್ಲಾ ಅಧ್ಯಕ್ಷ ಶಿವಾನಂದ್, ಮಹಿಳಾ ಮುಖಂಡರಾದ ಶೋಭಾ, ಯುವ ಘಟಕದ ಅಧ್ಯಕ್ಷ ರಾಕೇಶ್ ಅಲ್ಪಸಂಖ್ಯಾತ ಮುಖಂಡರಾದ ಸದ್ದೀವುಲ್ಲಾ, ಅಸೇನ್, ಪ್ರಿಯಾ ಮುಂತಾದವರು ಇದ್ದರು.

Ramesh Babu

Journalist

Recent Posts

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

40 minutes ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

5 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

7 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

19 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

19 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

22 hours ago