Categories: ಕೋಲಾರ

ವಿಶ್ವದ ಎತ್ತರದ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಕಾಲ್ನಡಿಗೆ ಜಾಥಾ

ಕೋಲಾರ: ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 200 ಮೀಟರ್ ಎತ್ತರದ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯಿಸಿ ಸೋಮವಾರ ಭೀಮ್ ಪ್ರಜಾ ಸಂಘದ ವತಿಯಿಂದ ನಗರದ ನಚಿಕೇತನ ನಿಲಯದಿಂದ ಎರಡನೇ ಹಂತದ ಸ್ವಾಭಿಮಾನಿಗಳ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು,

ಜಾಥವು ಕೋಲಾರ ನಗರದಲ್ಲಿ ಪ್ರಚಾರಗೊಳಿಸಿ ನಂತರ ಹೊಸಕೋಟೆ ಮಾರ್ಗದಿಂದ ಸಾಗಿ ನವೆಂಬರ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸೇರಲಿದೆ ಅಂದು ರಾಜ್ಯಾದ್ಯಂತ ಸಂಘಟನೆಯ ಕಾರ್ಯಕರ್ತರು ಮುಖಂಡರು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಅಧ್ಯಕ್ಷ ವೈಟ್ ಫೀಲ್ಡ್ ಮುರಗೇಶ್ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು ಬೆಂಗಳೂರು ಹೃದಯ ಭಾಗದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆಗಾಗಿ ಸಾಕಷ್ಟು ಬಾರಿ ಪ್ರತಿಭಟನೆ ಹೋರಾಟ ಕಾಲ್ನಡಿಗೆಯ ಮೂಲಕ ಒತ್ತಾಯಿಸಿದರು ಯಾವುದೇ ಪ್ರಯೋಜನವಾಗಲಿಲ್ಲ ಹಿಂದೆ ಬೀದರ್ ನಿಂದ ಬೆಂಗಳೂರಿಗೆ ಜಾಥಾ ಮೂಲಕ ಒತ್ತಾಯಿಸಿದರು ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿಲ್ಲದ ಭಾಗವಾಗಿ ಎರಡನೇ ಹಂತದ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು

ರಾಜ್ಯದ ಕಾಂಗ್ರೆಸ್ ಸರ್ಕಾರವು ದಲಿತರ, ಹಿಂದುಳಿದ ವರ್ಗಗಳ ಅದರಲ್ಲೂ ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರ ಪರವಾಗಿ ಅಂತ ಹೇಳುವ ಸಿದ್ದರಾಮಯ್ಯ ಪುತ್ಥಳಿ ನಿರ್ಮಾಣಕ್ಕೆ ಯಾಕೆ ವಿಳಂಬ ವಹಿಸಿದ್ದಾರೆ ರಾಜ್ಯ ಸರ್ಕಾರವು ದಲಿತರ ಅಭಿವೃದ್ಧಿಗೆ ಇರುವ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಹಣವನ್ನು ಪಂಚ ಗ್ಯಾರಂಟಿಗಳಿಗೆ ಹಣ ಬಳಕೆ ಮಾಡಿಕೊಂಡಿದ್ದಾರೆ ದಲಿತರ ಬಗ್ಗೆ ಗೌರವ ಇದ್ದರೆ ಕೂಡಲೇ ಪುತ್ಥಳಿ ಸ್ಥಾಪನೆಗೆ ಮುಂದಾಗಲಿ ಇಲ್ಲದೇ ಹೋದರೆ ಪ್ರಾರಂಭ ಮಾಡುವ ತನಕ ಫ್ರೀಡಂ ಪಾರ್ಕ್‌ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ಕರ್ನಾಟಕ ಜನಾಂದೋಲನ ಸಂಘಟನೆಯ ರಾಜ್ಯ ಅಧ್ಯಕ್ಷ ಮರಿಯಪ್ಪ, ಭೀಮ್ ಪ್ರಜಾ ಸಂಘದ ಜಿಲ್ಲಾ ಅಧ್ಯಕ್ಷ ಶಿವಾನಂದ್, ಮಹಿಳಾ ಮುಖಂಡರಾದ ಶೋಭಾ, ಯುವ ಘಟಕದ ಅಧ್ಯಕ್ಷ ರಾಕೇಶ್ ಅಲ್ಪಸಂಖ್ಯಾತ ಮುಖಂಡರಾದ ಸದ್ದೀವುಲ್ಲಾ, ಅಸೇನ್, ಪ್ರಿಯಾ ಮುಂತಾದವರು ಇದ್ದರು.

Ramesh Babu

Journalist

Recent Posts

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

2 hours ago

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ- ಸಚಿವ ಎನ್ ಚಲುವರಾಯಸ್ವಾಮಿ

ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ…

6 hours ago

ಇಂದು (ಸೆ.8) ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ…

6 hours ago

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

19 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

21 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

1 day ago