Categories: ಕೋಲಾರ

ವಿಶ್ವದ ಎತ್ತರದ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಕಾಲ್ನಡಿಗೆ ಜಾಥಾ

ಕೋಲಾರ: ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 200 ಮೀಟರ್ ಎತ್ತರದ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯಿಸಿ ಸೋಮವಾರ ಭೀಮ್ ಪ್ರಜಾ ಸಂಘದ ವತಿಯಿಂದ ನಗರದ ನಚಿಕೇತನ ನಿಲಯದಿಂದ ಎರಡನೇ ಹಂತದ ಸ್ವಾಭಿಮಾನಿಗಳ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು,

ಜಾಥವು ಕೋಲಾರ ನಗರದಲ್ಲಿ ಪ್ರಚಾರಗೊಳಿಸಿ ನಂತರ ಹೊಸಕೋಟೆ ಮಾರ್ಗದಿಂದ ಸಾಗಿ ನವೆಂಬರ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸೇರಲಿದೆ ಅಂದು ರಾಜ್ಯಾದ್ಯಂತ ಸಂಘಟನೆಯ ಕಾರ್ಯಕರ್ತರು ಮುಖಂಡರು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಅಧ್ಯಕ್ಷ ವೈಟ್ ಫೀಲ್ಡ್ ಮುರಗೇಶ್ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು ಬೆಂಗಳೂರು ಹೃದಯ ಭಾಗದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆಗಾಗಿ ಸಾಕಷ್ಟು ಬಾರಿ ಪ್ರತಿಭಟನೆ ಹೋರಾಟ ಕಾಲ್ನಡಿಗೆಯ ಮೂಲಕ ಒತ್ತಾಯಿಸಿದರು ಯಾವುದೇ ಪ್ರಯೋಜನವಾಗಲಿಲ್ಲ ಹಿಂದೆ ಬೀದರ್ ನಿಂದ ಬೆಂಗಳೂರಿಗೆ ಜಾಥಾ ಮೂಲಕ ಒತ್ತಾಯಿಸಿದರು ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿಲ್ಲದ ಭಾಗವಾಗಿ ಎರಡನೇ ಹಂತದ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು

ರಾಜ್ಯದ ಕಾಂಗ್ರೆಸ್ ಸರ್ಕಾರವು ದಲಿತರ, ಹಿಂದುಳಿದ ವರ್ಗಗಳ ಅದರಲ್ಲೂ ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರ ಪರವಾಗಿ ಅಂತ ಹೇಳುವ ಸಿದ್ದರಾಮಯ್ಯ ಪುತ್ಥಳಿ ನಿರ್ಮಾಣಕ್ಕೆ ಯಾಕೆ ವಿಳಂಬ ವಹಿಸಿದ್ದಾರೆ ರಾಜ್ಯ ಸರ್ಕಾರವು ದಲಿತರ ಅಭಿವೃದ್ಧಿಗೆ ಇರುವ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಹಣವನ್ನು ಪಂಚ ಗ್ಯಾರಂಟಿಗಳಿಗೆ ಹಣ ಬಳಕೆ ಮಾಡಿಕೊಂಡಿದ್ದಾರೆ ದಲಿತರ ಬಗ್ಗೆ ಗೌರವ ಇದ್ದರೆ ಕೂಡಲೇ ಪುತ್ಥಳಿ ಸ್ಥಾಪನೆಗೆ ಮುಂದಾಗಲಿ ಇಲ್ಲದೇ ಹೋದರೆ ಪ್ರಾರಂಭ ಮಾಡುವ ತನಕ ಫ್ರೀಡಂ ಪಾರ್ಕ್‌ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ಕರ್ನಾಟಕ ಜನಾಂದೋಲನ ಸಂಘಟನೆಯ ರಾಜ್ಯ ಅಧ್ಯಕ್ಷ ಮರಿಯಪ್ಪ, ಭೀಮ್ ಪ್ರಜಾ ಸಂಘದ ಜಿಲ್ಲಾ ಅಧ್ಯಕ್ಷ ಶಿವಾನಂದ್, ಮಹಿಳಾ ಮುಖಂಡರಾದ ಶೋಭಾ, ಯುವ ಘಟಕದ ಅಧ್ಯಕ್ಷ ರಾಕೇಶ್ ಅಲ್ಪಸಂಖ್ಯಾತ ಮುಖಂಡರಾದ ಸದ್ದೀವುಲ್ಲಾ, ಅಸೇನ್, ಪ್ರಿಯಾ ಮುಂತಾದವರು ಇದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

23 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago