Categories: ಕೋಲಾರ

ವಿಶ್ವವಿದ್ಯಾಲಯಗಳ ಅನುದಾನ ಆಯೋಗದ ಪ್ರಸ್ತಾಪವನ್ನು ರದ್ದುಗೊಳಿಸಲು ಎಸ್‌ಎಫ್‌ಐ ಒತ್ತಾಯ

ಕೋಲಾರ: ದೇಶಾದ್ಯಂತ ಇರುವ ವಿಶ್ವವಿದ್ಯಾಲಯಗಳ ಅನುದಾನ ಆಯೋಗ ನಿಯಮಗಳ ಪ್ರಸ್ತಾಪವನ್ನು ಕೂಡಲೇ ರದ್ದು ಪಡಿಸುವಂತೆ ಒತ್ತಾಯಿಸಿ ಭಾರತ ವಿಧ್ಯಾರ್ಥಿ ಫೆಡರೇಶನ್ ( ಎಸ್‌ಎಫ್‌ಐ) ಸಂಘಟನೆಯ ವತಿಯಿಂದ ಸೋಮವಾರ ತಹಶಿಲ್ದಾರ್ ಕಚೇರಿಯ ಉಪ ತಹಶೀಲ್ದಾರ್ ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಶಶಿಕುಮಾರ್ ಮಾತನಾಡಿ, ವಿಶ್ವವಿದ್ಯಾಲಯದ ಅನುದಾನ ಆಯೋಗವು ಕಾಲೇಜುಗಳಲ್ಲಿ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಮತ್ತು ಮುಂಬಡ್ತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ನಿರ್ವಹಿಸುವ ನಿಯಮಗಳ ಕರಡನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಬಿಡುಗಡೆ ಮಾಡಿದ್ದು ಈ ಕರಡು ಕ್ಯಾಂಪಸ್‌ಗಳಲ್ಲಿ ಉನ್ನತ ಶಿಕ್ಷಣವನ್ನು ಕೇಂದ್ರೀಕರಣಗೊಳಿಸುವ ಮತ್ತು ಕಾರ್ಪೊರೇಟ್ ಶಿಕ್ಷಣ ವ್ಯವಸ್ಥೆಗೆ ಸಂಪೂರ್ಣವಾಗಿ ಅವಕಾಶ ಮಾಡಿಕೊಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕೇಂದ್ರ ಸರ್ಕಾರದ ವಿರೋಧ ಪಕ್ಷಗಳು ಆಡಳಿತವಿರುವ ತಮಿಳುನಾಡು, ಕೇರಳದಂತಹ ಹಲವು ರಾಜ್ಯಗಳ ಸರ್ಕಾರಗಳು ಉಪಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಅನೇಕ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಂಘರ್ಷ ನಡೆಸುತ್ತಿವೆ ಈಗ ಪರಿಷ್ಕೃತ ನಿಯಮಗಳು ಉಪಕುಲಪತಿಗಳ ಆಯ್ಕೆಯಲ್ಲಿ ರಾಜ್ಯ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರವನ್ನು ಒದಗಿಸುತ್ತವೆ, ಉಪ ಕುಲಪತಿಗಳ ಆಯ್ಕೆಯಲ್ಲಿಯೂ ಸಹ ಕನಿಷ್ಥ ಅರ್ಹತೆಗಳನ್ನು ನಿಗದಿಪಡಿಸಿಲ್ಲ ಉದ್ಯಮ ರಂಗದ ಪರಿಣಿತರು, ಸಾರ್ವಜನಿಕ ಆಡಳಿತ, ನೀತಿ ನಿರೂಪಣೆಯಲ್ಲಿ ಕೆಲಸ ಮಾಡಿದವರು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳಿಗೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಾಗುವ ಅವಕಾಶ ನೀಡಲಾಗಿದೆ. ಮತ್ತು ಉಪ ಕುಲಪತಿಗಳ ಆಯ್ಕೆಯ ಸಮಿತಿಯಲ್ಲಿಯೂ ಸಹ ಬದಲಾವಣೆ ಮಾಡಲಾಗಿದೆ. ಇದು ದೇಶದ ಶಿಕ್ಷಣ ವ್ಯವಸ್ಥೆಗೆ ಅಪಾಯಕಾರಿಯಾಗಿದೆ ಎಂದರು.

ಯುಜಿಸಿ ಸಿದ್ದಪಡಿಸಿರುವ ಕರಡುವಿನಲ್ಲಿ ಹಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ. ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿ ಪಡೆದವರು ಕನಿಷ್ಠ ಶೇ 55 ರಷ್ಟು ಅಂಕಗಳನ್ನು ಗಳಿಸಿದರೆ ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರವಾಗಿ ಅರ್ಹತೆ ಪಡೆಯುತ್ತಾರೆ. ಅವರು ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ (ಎನ್ ಇ ಟಿ) ಅರ್ಹತೆ ಪಡೆದುಕೊಳ್ಳುವ ಅಗತ್ಯ ಇಲ್ಲ ಇದು ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣದ ನೀಡುವುದರ ಮೇಲೆ ಪರಿಣಾಮ ಬೀಳುತ್ತದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಉಪಾಧ್ಯಕ್ಷೆ ಹರ್ಷಿತ ಮಾತನಾಡಿದ ಈ ನಿಯಮಗಳಿಂದ ಬೋಧನೆ ಮತ್ತು ಸಂಶೋಧನೆಯ ಮೇಲೆ ನೇರವಾದ ಪ್ರಭಾವವನ್ನು ಹೊಂದಿರದ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಸರ್ಕಾರವು ಸಂಶೋಧನೆಯಿಂದ ತನ್ನದೇ ಆದ ಜವಾಬ್ದಾರಿಯನ್ನು ಹಿಂತೆಗೆದುಕೊಳ್ಳುತ್ತಿದೆ ಮತ್ತು ವೆಂಚರ್ ಫಂಡ್‌ಗಳ ಹೆಸರಿನಲ್ಲಿ ವಿವಿಧ ಖಾಸಗಿ ಉದ್ಯಮಿಗಳಿಗೆ ದಾರಿ ಮಾಡಿಕೊಡುತ್ತಿದೆ.ಇದು ಇಡೀ ಶಿಕ್ಷಣ ವ್ಯವಸ್ಥೆಯನ್ನು ಮಾರುಕಟ್ಟೆ ಆಧಾರಿತ ಸಂಶೋಧನೆಯತ್ತ ಕೊಂಡೊಯ್ಯುತ್ತದೆ.ವೆಂಚರ್ ಫಂಡ್‌ಗಳ ಬಗ್ಗೆ ಯಾವುದೇ ಸ್ಪಷ್ಟತೆಯನ್ನು ನಿಡಲಾಗಿಲ್ಲ ಇದು ಕೇಸರಿಕರಣದ ಕಡೆಗೆ ಕಾರಣವಾಗಬಹುದು ಮತ್ತು ಈ ಕರಡು ವರದಿಯಲ್ಲಿ ಬೋಧಕ ಹುದ್ದೆಗಳ ಮೀಸಲಾತಿಯ ಬಗ್ಗೆಯೂ ಮೌನ ವಹಿಸಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಮಹೇಶ್, ಲೋಕೇಶ್, ಅನುಶ್ರೀ, ಮುಂತಾದವರು ಇದ್ದರು.

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

8 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

9 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

12 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

13 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago