Categories: ಕೋಲಾರ

ವಿಶ್ವವಿದ್ಯಾಲಯಗಳ ಅನುದಾನ ಆಯೋಗದ ಪ್ರಸ್ತಾಪವನ್ನು ರದ್ದುಗೊಳಿಸಲು ಎಸ್‌ಎಫ್‌ಐ ಒತ್ತಾಯ

ಕೋಲಾರ: ದೇಶಾದ್ಯಂತ ಇರುವ ವಿಶ್ವವಿದ್ಯಾಲಯಗಳ ಅನುದಾನ ಆಯೋಗ ನಿಯಮಗಳ ಪ್ರಸ್ತಾಪವನ್ನು ಕೂಡಲೇ ರದ್ದು ಪಡಿಸುವಂತೆ ಒತ್ತಾಯಿಸಿ ಭಾರತ ವಿಧ್ಯಾರ್ಥಿ ಫೆಡರೇಶನ್ ( ಎಸ್‌ಎಫ್‌ಐ) ಸಂಘಟನೆಯ ವತಿಯಿಂದ ಸೋಮವಾರ ತಹಶಿಲ್ದಾರ್ ಕಚೇರಿಯ ಉಪ ತಹಶೀಲ್ದಾರ್ ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಶಶಿಕುಮಾರ್ ಮಾತನಾಡಿ, ವಿಶ್ವವಿದ್ಯಾಲಯದ ಅನುದಾನ ಆಯೋಗವು ಕಾಲೇಜುಗಳಲ್ಲಿ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಮತ್ತು ಮುಂಬಡ್ತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ನಿರ್ವಹಿಸುವ ನಿಯಮಗಳ ಕರಡನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಬಿಡುಗಡೆ ಮಾಡಿದ್ದು ಈ ಕರಡು ಕ್ಯಾಂಪಸ್‌ಗಳಲ್ಲಿ ಉನ್ನತ ಶಿಕ್ಷಣವನ್ನು ಕೇಂದ್ರೀಕರಣಗೊಳಿಸುವ ಮತ್ತು ಕಾರ್ಪೊರೇಟ್ ಶಿಕ್ಷಣ ವ್ಯವಸ್ಥೆಗೆ ಸಂಪೂರ್ಣವಾಗಿ ಅವಕಾಶ ಮಾಡಿಕೊಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕೇಂದ್ರ ಸರ್ಕಾರದ ವಿರೋಧ ಪಕ್ಷಗಳು ಆಡಳಿತವಿರುವ ತಮಿಳುನಾಡು, ಕೇರಳದಂತಹ ಹಲವು ರಾಜ್ಯಗಳ ಸರ್ಕಾರಗಳು ಉಪಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಅನೇಕ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಂಘರ್ಷ ನಡೆಸುತ್ತಿವೆ ಈಗ ಪರಿಷ್ಕೃತ ನಿಯಮಗಳು ಉಪಕುಲಪತಿಗಳ ಆಯ್ಕೆಯಲ್ಲಿ ರಾಜ್ಯ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರವನ್ನು ಒದಗಿಸುತ್ತವೆ, ಉಪ ಕುಲಪತಿಗಳ ಆಯ್ಕೆಯಲ್ಲಿಯೂ ಸಹ ಕನಿಷ್ಥ ಅರ್ಹತೆಗಳನ್ನು ನಿಗದಿಪಡಿಸಿಲ್ಲ ಉದ್ಯಮ ರಂಗದ ಪರಿಣಿತರು, ಸಾರ್ವಜನಿಕ ಆಡಳಿತ, ನೀತಿ ನಿರೂಪಣೆಯಲ್ಲಿ ಕೆಲಸ ಮಾಡಿದವರು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳಿಗೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಾಗುವ ಅವಕಾಶ ನೀಡಲಾಗಿದೆ. ಮತ್ತು ಉಪ ಕುಲಪತಿಗಳ ಆಯ್ಕೆಯ ಸಮಿತಿಯಲ್ಲಿಯೂ ಸಹ ಬದಲಾವಣೆ ಮಾಡಲಾಗಿದೆ. ಇದು ದೇಶದ ಶಿಕ್ಷಣ ವ್ಯವಸ್ಥೆಗೆ ಅಪಾಯಕಾರಿಯಾಗಿದೆ ಎಂದರು.

ಯುಜಿಸಿ ಸಿದ್ದಪಡಿಸಿರುವ ಕರಡುವಿನಲ್ಲಿ ಹಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ. ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿ ಪಡೆದವರು ಕನಿಷ್ಠ ಶೇ 55 ರಷ್ಟು ಅಂಕಗಳನ್ನು ಗಳಿಸಿದರೆ ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರವಾಗಿ ಅರ್ಹತೆ ಪಡೆಯುತ್ತಾರೆ. ಅವರು ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ (ಎನ್ ಇ ಟಿ) ಅರ್ಹತೆ ಪಡೆದುಕೊಳ್ಳುವ ಅಗತ್ಯ ಇಲ್ಲ ಇದು ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣದ ನೀಡುವುದರ ಮೇಲೆ ಪರಿಣಾಮ ಬೀಳುತ್ತದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಉಪಾಧ್ಯಕ್ಷೆ ಹರ್ಷಿತ ಮಾತನಾಡಿದ ಈ ನಿಯಮಗಳಿಂದ ಬೋಧನೆ ಮತ್ತು ಸಂಶೋಧನೆಯ ಮೇಲೆ ನೇರವಾದ ಪ್ರಭಾವವನ್ನು ಹೊಂದಿರದ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಸರ್ಕಾರವು ಸಂಶೋಧನೆಯಿಂದ ತನ್ನದೇ ಆದ ಜವಾಬ್ದಾರಿಯನ್ನು ಹಿಂತೆಗೆದುಕೊಳ್ಳುತ್ತಿದೆ ಮತ್ತು ವೆಂಚರ್ ಫಂಡ್‌ಗಳ ಹೆಸರಿನಲ್ಲಿ ವಿವಿಧ ಖಾಸಗಿ ಉದ್ಯಮಿಗಳಿಗೆ ದಾರಿ ಮಾಡಿಕೊಡುತ್ತಿದೆ.ಇದು ಇಡೀ ಶಿಕ್ಷಣ ವ್ಯವಸ್ಥೆಯನ್ನು ಮಾರುಕಟ್ಟೆ ಆಧಾರಿತ ಸಂಶೋಧನೆಯತ್ತ ಕೊಂಡೊಯ್ಯುತ್ತದೆ.ವೆಂಚರ್ ಫಂಡ್‌ಗಳ ಬಗ್ಗೆ ಯಾವುದೇ ಸ್ಪಷ್ಟತೆಯನ್ನು ನಿಡಲಾಗಿಲ್ಲ ಇದು ಕೇಸರಿಕರಣದ ಕಡೆಗೆ ಕಾರಣವಾಗಬಹುದು ಮತ್ತು ಈ ಕರಡು ವರದಿಯಲ್ಲಿ ಬೋಧಕ ಹುದ್ದೆಗಳ ಮೀಸಲಾತಿಯ ಬಗ್ಗೆಯೂ ಮೌನ ವಹಿಸಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಮಹೇಶ್, ಲೋಕೇಶ್, ಅನುಶ್ರೀ, ಮುಂತಾದವರು ಇದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

10 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

12 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

16 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

18 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

21 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago