Categories: ಕೋಲಾರ

ವಿಶ್ವವಿದ್ಯಾಲಯಗಳ ಅನುದಾನ ಆಯೋಗದ ಪ್ರಸ್ತಾಪವನ್ನು ರದ್ದುಗೊಳಿಸಲು ಎಸ್‌ಎಫ್‌ಐ ಒತ್ತಾಯ

ಕೋಲಾರ: ದೇಶಾದ್ಯಂತ ಇರುವ ವಿಶ್ವವಿದ್ಯಾಲಯಗಳ ಅನುದಾನ ಆಯೋಗ ನಿಯಮಗಳ ಪ್ರಸ್ತಾಪವನ್ನು ಕೂಡಲೇ ರದ್ದು ಪಡಿಸುವಂತೆ ಒತ್ತಾಯಿಸಿ ಭಾರತ ವಿಧ್ಯಾರ್ಥಿ ಫೆಡರೇಶನ್ ( ಎಸ್‌ಎಫ್‌ಐ) ಸಂಘಟನೆಯ ವತಿಯಿಂದ ಸೋಮವಾರ ತಹಶಿಲ್ದಾರ್ ಕಚೇರಿಯ ಉಪ ತಹಶೀಲ್ದಾರ್ ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಶಶಿಕುಮಾರ್ ಮಾತನಾಡಿ, ವಿಶ್ವವಿದ್ಯಾಲಯದ ಅನುದಾನ ಆಯೋಗವು ಕಾಲೇಜುಗಳಲ್ಲಿ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಮತ್ತು ಮುಂಬಡ್ತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ನಿರ್ವಹಿಸುವ ನಿಯಮಗಳ ಕರಡನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಬಿಡುಗಡೆ ಮಾಡಿದ್ದು ಈ ಕರಡು ಕ್ಯಾಂಪಸ್‌ಗಳಲ್ಲಿ ಉನ್ನತ ಶಿಕ್ಷಣವನ್ನು ಕೇಂದ್ರೀಕರಣಗೊಳಿಸುವ ಮತ್ತು ಕಾರ್ಪೊರೇಟ್ ಶಿಕ್ಷಣ ವ್ಯವಸ್ಥೆಗೆ ಸಂಪೂರ್ಣವಾಗಿ ಅವಕಾಶ ಮಾಡಿಕೊಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕೇಂದ್ರ ಸರ್ಕಾರದ ವಿರೋಧ ಪಕ್ಷಗಳು ಆಡಳಿತವಿರುವ ತಮಿಳುನಾಡು, ಕೇರಳದಂತಹ ಹಲವು ರಾಜ್ಯಗಳ ಸರ್ಕಾರಗಳು ಉಪಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಅನೇಕ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಂಘರ್ಷ ನಡೆಸುತ್ತಿವೆ ಈಗ ಪರಿಷ್ಕೃತ ನಿಯಮಗಳು ಉಪಕುಲಪತಿಗಳ ಆಯ್ಕೆಯಲ್ಲಿ ರಾಜ್ಯ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರವನ್ನು ಒದಗಿಸುತ್ತವೆ, ಉಪ ಕುಲಪತಿಗಳ ಆಯ್ಕೆಯಲ್ಲಿಯೂ ಸಹ ಕನಿಷ್ಥ ಅರ್ಹತೆಗಳನ್ನು ನಿಗದಿಪಡಿಸಿಲ್ಲ ಉದ್ಯಮ ರಂಗದ ಪರಿಣಿತರು, ಸಾರ್ವಜನಿಕ ಆಡಳಿತ, ನೀತಿ ನಿರೂಪಣೆಯಲ್ಲಿ ಕೆಲಸ ಮಾಡಿದವರು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳಿಗೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಾಗುವ ಅವಕಾಶ ನೀಡಲಾಗಿದೆ. ಮತ್ತು ಉಪ ಕುಲಪತಿಗಳ ಆಯ್ಕೆಯ ಸಮಿತಿಯಲ್ಲಿಯೂ ಸಹ ಬದಲಾವಣೆ ಮಾಡಲಾಗಿದೆ. ಇದು ದೇಶದ ಶಿಕ್ಷಣ ವ್ಯವಸ್ಥೆಗೆ ಅಪಾಯಕಾರಿಯಾಗಿದೆ ಎಂದರು.

ಯುಜಿಸಿ ಸಿದ್ದಪಡಿಸಿರುವ ಕರಡುವಿನಲ್ಲಿ ಹಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ. ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿ ಪಡೆದವರು ಕನಿಷ್ಠ ಶೇ 55 ರಷ್ಟು ಅಂಕಗಳನ್ನು ಗಳಿಸಿದರೆ ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರವಾಗಿ ಅರ್ಹತೆ ಪಡೆಯುತ್ತಾರೆ. ಅವರು ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ (ಎನ್ ಇ ಟಿ) ಅರ್ಹತೆ ಪಡೆದುಕೊಳ್ಳುವ ಅಗತ್ಯ ಇಲ್ಲ ಇದು ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣದ ನೀಡುವುದರ ಮೇಲೆ ಪರಿಣಾಮ ಬೀಳುತ್ತದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಉಪಾಧ್ಯಕ್ಷೆ ಹರ್ಷಿತ ಮಾತನಾಡಿದ ಈ ನಿಯಮಗಳಿಂದ ಬೋಧನೆ ಮತ್ತು ಸಂಶೋಧನೆಯ ಮೇಲೆ ನೇರವಾದ ಪ್ರಭಾವವನ್ನು ಹೊಂದಿರದ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಸರ್ಕಾರವು ಸಂಶೋಧನೆಯಿಂದ ತನ್ನದೇ ಆದ ಜವಾಬ್ದಾರಿಯನ್ನು ಹಿಂತೆಗೆದುಕೊಳ್ಳುತ್ತಿದೆ ಮತ್ತು ವೆಂಚರ್ ಫಂಡ್‌ಗಳ ಹೆಸರಿನಲ್ಲಿ ವಿವಿಧ ಖಾಸಗಿ ಉದ್ಯಮಿಗಳಿಗೆ ದಾರಿ ಮಾಡಿಕೊಡುತ್ತಿದೆ.ಇದು ಇಡೀ ಶಿಕ್ಷಣ ವ್ಯವಸ್ಥೆಯನ್ನು ಮಾರುಕಟ್ಟೆ ಆಧಾರಿತ ಸಂಶೋಧನೆಯತ್ತ ಕೊಂಡೊಯ್ಯುತ್ತದೆ.ವೆಂಚರ್ ಫಂಡ್‌ಗಳ ಬಗ್ಗೆ ಯಾವುದೇ ಸ್ಪಷ್ಟತೆಯನ್ನು ನಿಡಲಾಗಿಲ್ಲ ಇದು ಕೇಸರಿಕರಣದ ಕಡೆಗೆ ಕಾರಣವಾಗಬಹುದು ಮತ್ತು ಈ ಕರಡು ವರದಿಯಲ್ಲಿ ಬೋಧಕ ಹುದ್ದೆಗಳ ಮೀಸಲಾತಿಯ ಬಗ್ಗೆಯೂ ಮೌನ ವಹಿಸಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಮಹೇಶ್, ಲೋಕೇಶ್, ಅನುಶ್ರೀ, ಮುಂತಾದವರು ಇದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

55 minutes ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago