Categories: ಕೋಲಾರ

ವಿಶ್ವವಿದ್ಯಾಲಯಗಳ ಅನುದಾನ ಆಯೋಗದ ಪ್ರಸ್ತಾಪವನ್ನು ರದ್ದುಗೊಳಿಸಲು ಎಸ್‌ಎಫ್‌ಐ ಒತ್ತಾಯ

ಕೋಲಾರ: ದೇಶಾದ್ಯಂತ ಇರುವ ವಿಶ್ವವಿದ್ಯಾಲಯಗಳ ಅನುದಾನ ಆಯೋಗ ನಿಯಮಗಳ ಪ್ರಸ್ತಾಪವನ್ನು ಕೂಡಲೇ ರದ್ದು ಪಡಿಸುವಂತೆ ಒತ್ತಾಯಿಸಿ ಭಾರತ ವಿಧ್ಯಾರ್ಥಿ ಫೆಡರೇಶನ್ ( ಎಸ್‌ಎಫ್‌ಐ) ಸಂಘಟನೆಯ ವತಿಯಿಂದ ಸೋಮವಾರ ತಹಶಿಲ್ದಾರ್ ಕಚೇರಿಯ ಉಪ ತಹಶೀಲ್ದಾರ್ ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಶಶಿಕುಮಾರ್ ಮಾತನಾಡಿ, ವಿಶ್ವವಿದ್ಯಾಲಯದ ಅನುದಾನ ಆಯೋಗವು ಕಾಲೇಜುಗಳಲ್ಲಿ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಮತ್ತು ಮುಂಬಡ್ತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ನಿರ್ವಹಿಸುವ ನಿಯಮಗಳ ಕರಡನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಬಿಡುಗಡೆ ಮಾಡಿದ್ದು ಈ ಕರಡು ಕ್ಯಾಂಪಸ್‌ಗಳಲ್ಲಿ ಉನ್ನತ ಶಿಕ್ಷಣವನ್ನು ಕೇಂದ್ರೀಕರಣಗೊಳಿಸುವ ಮತ್ತು ಕಾರ್ಪೊರೇಟ್ ಶಿಕ್ಷಣ ವ್ಯವಸ್ಥೆಗೆ ಸಂಪೂರ್ಣವಾಗಿ ಅವಕಾಶ ಮಾಡಿಕೊಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕೇಂದ್ರ ಸರ್ಕಾರದ ವಿರೋಧ ಪಕ್ಷಗಳು ಆಡಳಿತವಿರುವ ತಮಿಳುನಾಡು, ಕೇರಳದಂತಹ ಹಲವು ರಾಜ್ಯಗಳ ಸರ್ಕಾರಗಳು ಉಪಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಅನೇಕ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಂಘರ್ಷ ನಡೆಸುತ್ತಿವೆ ಈಗ ಪರಿಷ್ಕೃತ ನಿಯಮಗಳು ಉಪಕುಲಪತಿಗಳ ಆಯ್ಕೆಯಲ್ಲಿ ರಾಜ್ಯ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರವನ್ನು ಒದಗಿಸುತ್ತವೆ, ಉಪ ಕುಲಪತಿಗಳ ಆಯ್ಕೆಯಲ್ಲಿಯೂ ಸಹ ಕನಿಷ್ಥ ಅರ್ಹತೆಗಳನ್ನು ನಿಗದಿಪಡಿಸಿಲ್ಲ ಉದ್ಯಮ ರಂಗದ ಪರಿಣಿತರು, ಸಾರ್ವಜನಿಕ ಆಡಳಿತ, ನೀತಿ ನಿರೂಪಣೆಯಲ್ಲಿ ಕೆಲಸ ಮಾಡಿದವರು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳಿಗೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಾಗುವ ಅವಕಾಶ ನೀಡಲಾಗಿದೆ. ಮತ್ತು ಉಪ ಕುಲಪತಿಗಳ ಆಯ್ಕೆಯ ಸಮಿತಿಯಲ್ಲಿಯೂ ಸಹ ಬದಲಾವಣೆ ಮಾಡಲಾಗಿದೆ. ಇದು ದೇಶದ ಶಿಕ್ಷಣ ವ್ಯವಸ್ಥೆಗೆ ಅಪಾಯಕಾರಿಯಾಗಿದೆ ಎಂದರು.

ಯುಜಿಸಿ ಸಿದ್ದಪಡಿಸಿರುವ ಕರಡುವಿನಲ್ಲಿ ಹಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ. ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿ ಪಡೆದವರು ಕನಿಷ್ಠ ಶೇ 55 ರಷ್ಟು ಅಂಕಗಳನ್ನು ಗಳಿಸಿದರೆ ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರವಾಗಿ ಅರ್ಹತೆ ಪಡೆಯುತ್ತಾರೆ. ಅವರು ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ (ಎನ್ ಇ ಟಿ) ಅರ್ಹತೆ ಪಡೆದುಕೊಳ್ಳುವ ಅಗತ್ಯ ಇಲ್ಲ ಇದು ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣದ ನೀಡುವುದರ ಮೇಲೆ ಪರಿಣಾಮ ಬೀಳುತ್ತದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಉಪಾಧ್ಯಕ್ಷೆ ಹರ್ಷಿತ ಮಾತನಾಡಿದ ಈ ನಿಯಮಗಳಿಂದ ಬೋಧನೆ ಮತ್ತು ಸಂಶೋಧನೆಯ ಮೇಲೆ ನೇರವಾದ ಪ್ರಭಾವವನ್ನು ಹೊಂದಿರದ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಸರ್ಕಾರವು ಸಂಶೋಧನೆಯಿಂದ ತನ್ನದೇ ಆದ ಜವಾಬ್ದಾರಿಯನ್ನು ಹಿಂತೆಗೆದುಕೊಳ್ಳುತ್ತಿದೆ ಮತ್ತು ವೆಂಚರ್ ಫಂಡ್‌ಗಳ ಹೆಸರಿನಲ್ಲಿ ವಿವಿಧ ಖಾಸಗಿ ಉದ್ಯಮಿಗಳಿಗೆ ದಾರಿ ಮಾಡಿಕೊಡುತ್ತಿದೆ.ಇದು ಇಡೀ ಶಿಕ್ಷಣ ವ್ಯವಸ್ಥೆಯನ್ನು ಮಾರುಕಟ್ಟೆ ಆಧಾರಿತ ಸಂಶೋಧನೆಯತ್ತ ಕೊಂಡೊಯ್ಯುತ್ತದೆ.ವೆಂಚರ್ ಫಂಡ್‌ಗಳ ಬಗ್ಗೆ ಯಾವುದೇ ಸ್ಪಷ್ಟತೆಯನ್ನು ನಿಡಲಾಗಿಲ್ಲ ಇದು ಕೇಸರಿಕರಣದ ಕಡೆಗೆ ಕಾರಣವಾಗಬಹುದು ಮತ್ತು ಈ ಕರಡು ವರದಿಯಲ್ಲಿ ಬೋಧಕ ಹುದ್ದೆಗಳ ಮೀಸಲಾತಿಯ ಬಗ್ಗೆಯೂ ಮೌನ ವಹಿಸಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಮಹೇಶ್, ಲೋಕೇಶ್, ಅನುಶ್ರೀ, ಮುಂತಾದವರು ಇದ್ದರು.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

1 hour ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

11 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

22 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago