Categories: ಕೋಲಾರ

ವಿಶ್ವವಿದ್ಯಾಲಯಗಳ ಅನುದಾನ ಆಯೋಗದ ಪ್ರಸ್ತಾಪವನ್ನು ರದ್ದುಗೊಳಿಸಲು ಎಸ್‌ಎಫ್‌ಐ ಒತ್ತಾಯ

ಕೋಲಾರ: ದೇಶಾದ್ಯಂತ ಇರುವ ವಿಶ್ವವಿದ್ಯಾಲಯಗಳ ಅನುದಾನ ಆಯೋಗ ನಿಯಮಗಳ ಪ್ರಸ್ತಾಪವನ್ನು ಕೂಡಲೇ ರದ್ದು ಪಡಿಸುವಂತೆ ಒತ್ತಾಯಿಸಿ ಭಾರತ ವಿಧ್ಯಾರ್ಥಿ ಫೆಡರೇಶನ್ ( ಎಸ್‌ಎಫ್‌ಐ) ಸಂಘಟನೆಯ ವತಿಯಿಂದ ಸೋಮವಾರ ತಹಶಿಲ್ದಾರ್ ಕಚೇರಿಯ ಉಪ ತಹಶೀಲ್ದಾರ್ ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಶಶಿಕುಮಾರ್ ಮಾತನಾಡಿ, ವಿಶ್ವವಿದ್ಯಾಲಯದ ಅನುದಾನ ಆಯೋಗವು ಕಾಲೇಜುಗಳಲ್ಲಿ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಮತ್ತು ಮುಂಬಡ್ತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ನಿರ್ವಹಿಸುವ ನಿಯಮಗಳ ಕರಡನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಬಿಡುಗಡೆ ಮಾಡಿದ್ದು ಈ ಕರಡು ಕ್ಯಾಂಪಸ್‌ಗಳಲ್ಲಿ ಉನ್ನತ ಶಿಕ್ಷಣವನ್ನು ಕೇಂದ್ರೀಕರಣಗೊಳಿಸುವ ಮತ್ತು ಕಾರ್ಪೊರೇಟ್ ಶಿಕ್ಷಣ ವ್ಯವಸ್ಥೆಗೆ ಸಂಪೂರ್ಣವಾಗಿ ಅವಕಾಶ ಮಾಡಿಕೊಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕೇಂದ್ರ ಸರ್ಕಾರದ ವಿರೋಧ ಪಕ್ಷಗಳು ಆಡಳಿತವಿರುವ ತಮಿಳುನಾಡು, ಕೇರಳದಂತಹ ಹಲವು ರಾಜ್ಯಗಳ ಸರ್ಕಾರಗಳು ಉಪಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಅನೇಕ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಂಘರ್ಷ ನಡೆಸುತ್ತಿವೆ ಈಗ ಪರಿಷ್ಕೃತ ನಿಯಮಗಳು ಉಪಕುಲಪತಿಗಳ ಆಯ್ಕೆಯಲ್ಲಿ ರಾಜ್ಯ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರವನ್ನು ಒದಗಿಸುತ್ತವೆ, ಉಪ ಕುಲಪತಿಗಳ ಆಯ್ಕೆಯಲ್ಲಿಯೂ ಸಹ ಕನಿಷ್ಥ ಅರ್ಹತೆಗಳನ್ನು ನಿಗದಿಪಡಿಸಿಲ್ಲ ಉದ್ಯಮ ರಂಗದ ಪರಿಣಿತರು, ಸಾರ್ವಜನಿಕ ಆಡಳಿತ, ನೀತಿ ನಿರೂಪಣೆಯಲ್ಲಿ ಕೆಲಸ ಮಾಡಿದವರು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳಿಗೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಾಗುವ ಅವಕಾಶ ನೀಡಲಾಗಿದೆ. ಮತ್ತು ಉಪ ಕುಲಪತಿಗಳ ಆಯ್ಕೆಯ ಸಮಿತಿಯಲ್ಲಿಯೂ ಸಹ ಬದಲಾವಣೆ ಮಾಡಲಾಗಿದೆ. ಇದು ದೇಶದ ಶಿಕ್ಷಣ ವ್ಯವಸ್ಥೆಗೆ ಅಪಾಯಕಾರಿಯಾಗಿದೆ ಎಂದರು.

ಯುಜಿಸಿ ಸಿದ್ದಪಡಿಸಿರುವ ಕರಡುವಿನಲ್ಲಿ ಹಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ. ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿ ಪಡೆದವರು ಕನಿಷ್ಠ ಶೇ 55 ರಷ್ಟು ಅಂಕಗಳನ್ನು ಗಳಿಸಿದರೆ ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರವಾಗಿ ಅರ್ಹತೆ ಪಡೆಯುತ್ತಾರೆ. ಅವರು ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ (ಎನ್ ಇ ಟಿ) ಅರ್ಹತೆ ಪಡೆದುಕೊಳ್ಳುವ ಅಗತ್ಯ ಇಲ್ಲ ಇದು ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣದ ನೀಡುವುದರ ಮೇಲೆ ಪರಿಣಾಮ ಬೀಳುತ್ತದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಉಪಾಧ್ಯಕ್ಷೆ ಹರ್ಷಿತ ಮಾತನಾಡಿದ ಈ ನಿಯಮಗಳಿಂದ ಬೋಧನೆ ಮತ್ತು ಸಂಶೋಧನೆಯ ಮೇಲೆ ನೇರವಾದ ಪ್ರಭಾವವನ್ನು ಹೊಂದಿರದ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಸರ್ಕಾರವು ಸಂಶೋಧನೆಯಿಂದ ತನ್ನದೇ ಆದ ಜವಾಬ್ದಾರಿಯನ್ನು ಹಿಂತೆಗೆದುಕೊಳ್ಳುತ್ತಿದೆ ಮತ್ತು ವೆಂಚರ್ ಫಂಡ್‌ಗಳ ಹೆಸರಿನಲ್ಲಿ ವಿವಿಧ ಖಾಸಗಿ ಉದ್ಯಮಿಗಳಿಗೆ ದಾರಿ ಮಾಡಿಕೊಡುತ್ತಿದೆ.ಇದು ಇಡೀ ಶಿಕ್ಷಣ ವ್ಯವಸ್ಥೆಯನ್ನು ಮಾರುಕಟ್ಟೆ ಆಧಾರಿತ ಸಂಶೋಧನೆಯತ್ತ ಕೊಂಡೊಯ್ಯುತ್ತದೆ.ವೆಂಚರ್ ಫಂಡ್‌ಗಳ ಬಗ್ಗೆ ಯಾವುದೇ ಸ್ಪಷ್ಟತೆಯನ್ನು ನಿಡಲಾಗಿಲ್ಲ ಇದು ಕೇಸರಿಕರಣದ ಕಡೆಗೆ ಕಾರಣವಾಗಬಹುದು ಮತ್ತು ಈ ಕರಡು ವರದಿಯಲ್ಲಿ ಬೋಧಕ ಹುದ್ದೆಗಳ ಮೀಸಲಾತಿಯ ಬಗ್ಗೆಯೂ ಮೌನ ವಹಿಸಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಮಹೇಶ್, ಲೋಕೇಶ್, ಅನುಶ್ರೀ, ಮುಂತಾದವರು ಇದ್ದರು.

Ramesh Babu

Journalist

Recent Posts

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ಅಸಂಬದ್ಧ: ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಸರ್ಕಾರದ ಚಿಂತನೆ – ಸಚಿವ ಚಲುವರಾಯಸ್ವಾಮಿ

ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…

2 hours ago

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

5 hours ago

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ- ಸಚಿವ ಎನ್ ಚಲುವರಾಯಸ್ವಾಮಿ

ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ…

9 hours ago

ಇಂದು (ಸೆ.8) ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ…

9 hours ago

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

22 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

24 hours ago