ವಿಶ್ವಕಪ್ ನಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯವನ್ನು ಆರಂಭಿಕ ಹಿನ್ನಡೆಯ ನಡುವೆಯೂ ಚೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ ಬಲದಿಂದ ರೋಚಕ ಗೆಲುವು ಸಾಧಿಸಿತು.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಭಾರತ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಆರಂಭಿಕ ಆಟಗಾರನಾದ ಮಿಚೆಲ್ ಮಾಷ್೯ ಅವರ ವಿಕೆಟ್ ಪಡೆದರು.
ನಂತರ ಒಂದಾದ ಡೇವಿಡ್ ವಾರ್ನರ್ (41) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಸ್ಟೀವನ್ ಸ್ಮಿತ್ (46) ಉತ್ತಮ ಜೊತೆಯಾಟ ನಡೆಸಿ ತಂಡವನ್ನು 74 ರ ಗಡಿ ದಾಟಿಸಿದರು, ಲಬುಶನಗೆ (27) ಹಾಗೂ ಬೌಲರ್ ಮಿಚೆಲ್ ಸ್ಟ್ರಾಕ್ (28) ಉತ್ತಮ ರನ್ ಗಳಿಸುವ ಮೂಲಕ ಭಾರತಕ್ಕೆ 200 ರನ್ ಗುರಿ ನೀಡಿದರು.
200 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (0), ಇಶಾನ್ ಕಿಶನ್ (೦) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (೦) ಸೊನ್ನೆ ಸುತ್ತಿದರು ಒಂದು ಹಂತದಲ್ಲಿ ಎರಡು ರನ್ ಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಕೊನೆಗೂ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವಲ್ಲಿ ಆಸೀಸ್ ಸಫಲರಾದರೂ ಸಹ ನಂತರ ಬಂದ ಉಪ ನಾಯಕ ಹಾರ್ದಿಕ್ ಪಾಂಡ್ಯ ಜೊತೆಗೂಡಿದ ರಾಹುಲ್ ಗೆಲುವಿನ ಸಿಕ್ಸರ್ ಸಿಡಿಸಿ ಜಯ ತಂದುಕೊಡುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…