ವಿಶ್ವಕಪ್ ನಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯವನ್ನು ಆರಂಭಿಕ ಹಿನ್ನಡೆಯ ನಡುವೆಯೂ ಚೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ ಬಲದಿಂದ ರೋಚಕ ಗೆಲುವು ಸಾಧಿಸಿತು.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಭಾರತ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಆರಂಭಿಕ ಆಟಗಾರನಾದ ಮಿಚೆಲ್ ಮಾಷ್೯ ಅವರ ವಿಕೆಟ್ ಪಡೆದರು.
ನಂತರ ಒಂದಾದ ಡೇವಿಡ್ ವಾರ್ನರ್ (41) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಸ್ಟೀವನ್ ಸ್ಮಿತ್ (46) ಉತ್ತಮ ಜೊತೆಯಾಟ ನಡೆಸಿ ತಂಡವನ್ನು 74 ರ ಗಡಿ ದಾಟಿಸಿದರು, ಲಬುಶನಗೆ (27) ಹಾಗೂ ಬೌಲರ್ ಮಿಚೆಲ್ ಸ್ಟ್ರಾಕ್ (28) ಉತ್ತಮ ರನ್ ಗಳಿಸುವ ಮೂಲಕ ಭಾರತಕ್ಕೆ 200 ರನ್ ಗುರಿ ನೀಡಿದರು.
200 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (0), ಇಶಾನ್ ಕಿಶನ್ (೦) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (೦) ಸೊನ್ನೆ ಸುತ್ತಿದರು ಒಂದು ಹಂತದಲ್ಲಿ ಎರಡು ರನ್ ಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಕೊನೆಗೂ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವಲ್ಲಿ ಆಸೀಸ್ ಸಫಲರಾದರೂ ಸಹ ನಂತರ ಬಂದ ಉಪ ನಾಯಕ ಹಾರ್ದಿಕ್ ಪಾಂಡ್ಯ ಜೊತೆಗೂಡಿದ ರಾಹುಲ್ ಗೆಲುವಿನ ಸಿಕ್ಸರ್ ಸಿಡಿಸಿ ಜಯ ತಂದುಕೊಡುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…