ವಿಶ್ವ ಕಪ್: ಕೊಹ್ಲಿ – ರಾಹುಲ್ ಜುಗಲ್ ಬಂದಿ, ಆಸೀಸ್ ವಿರುದ್ಧ ರೋಚಕ ಗೆಲುವು!

ವಿಶ್ವಕಪ್ ನಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯವನ್ನು ಆರಂಭಿಕ ಹಿನ್ನಡೆಯ ನಡುವೆಯೂ ಚೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ ಬಲದಿಂದ ರೋಚಕ ಗೆಲುವು ಸಾಧಿಸಿತು.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಭಾರತ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಆರಂಭಿಕ ಆಟಗಾರನಾದ ಮಿಚೆಲ್ ಮಾಷ್೯ ಅವರ ವಿಕೆಟ್ ಪಡೆದರು.

ನಂತರ ಒಂದಾದ ಡೇವಿಡ್ ವಾರ್ನರ್ (41) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಸ್ಟೀವನ್ ಸ್ಮಿತ್ (46) ಉತ್ತಮ ಜೊತೆಯಾಟ ನಡೆಸಿ ತಂಡವನ್ನು 74 ರ ಗಡಿ ದಾಟಿಸಿದರು, ಲಬುಶನಗೆ (27) ಹಾಗೂ ಬೌಲರ್ ಮಿಚೆಲ್ ಸ್ಟ್ರಾಕ್ (28) ಉತ್ತಮ ರನ್ ಗಳಿಸುವ ಮೂಲಕ ಭಾರತಕ್ಕೆ 200 ರನ್ ಗುರಿ ನೀಡಿದರು.

ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ ಮೂರು ವಿಕೆಟ್, ಸ್ಪಿನ್ನರ್ ಕುಲದೀಪ್ ಯಾದವ್ ಹಾಗೂ ವೇಗಿ ಜಸ್ಪ್ರಿತ್ ಬುಮ್ರಾ ಎರಡು ವಿಕೆಟ್, ಸಿರಾಜ್, ಆರ್. ಅಶ್ವಿನ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.

200 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (0), ಇಶಾನ್ ಕಿಶನ್ (೦) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (೦) ಸೊನ್ನೆ ಸುತ್ತಿದರು ಒಂದು ಹಂತದಲ್ಲಿ ಎರಡು ರನ್ ಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ವಿಕೆಟ್ ಪಡೆದ ಖುಷಿಯಿಂದ ಬೀಗುತ್ತಿದ್ದ ಆಸ್ಟ್ರೇಲಿಯಾ ತಂಡದ ಖುಷಿ ಹೆಚ್ಚು ಹೊತ್ತು ಇರಲಿಲ್ಲ, ಮುರಿಯದ ನಾಲ್ಕನೇ ವಿಕೆಟ್ ಗೆ ವಿರಾಟ್ ಕೊಹ್ಲಿ ಆರು ಬೌಂಡರಿ ನೆರವಿನಿಂದ (85) ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಎಂಟು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 97 ರನ್ ಗಳಿಸುವ ಮೂಲಕ 165 ರನ್ ಗಳ ಜೊತೆಯಾಟ ನಡೆಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಕೊನೆಗೂ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವಲ್ಲಿ ಆಸೀಸ್ ಸಫಲರಾದರೂ ಸಹ ನಂತರ ಬಂದ ಉಪ ನಾಯಕ ಹಾರ್ದಿಕ್ ಪಾಂಡ್ಯ ಜೊತೆಗೂಡಿದ ರಾಹುಲ್ ಗೆಲುವಿನ ಸಿಕ್ಸರ್ ಸಿಡಿಸಿ ಜಯ ತಂದುಕೊಡುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

6 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

7 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

13 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

14 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

19 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago