ವಿಶ್ವಕಪ್ ನಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯವನ್ನು ಆರಂಭಿಕ ಹಿನ್ನಡೆಯ ನಡುವೆಯೂ ಚೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ ಬಲದಿಂದ ರೋಚಕ ಗೆಲುವು ಸಾಧಿಸಿತು.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಭಾರತ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಆರಂಭಿಕ ಆಟಗಾರನಾದ ಮಿಚೆಲ್ ಮಾಷ್೯ ಅವರ ವಿಕೆಟ್ ಪಡೆದರು.
ನಂತರ ಒಂದಾದ ಡೇವಿಡ್ ವಾರ್ನರ್ (41) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಸ್ಟೀವನ್ ಸ್ಮಿತ್ (46) ಉತ್ತಮ ಜೊತೆಯಾಟ ನಡೆಸಿ ತಂಡವನ್ನು 74 ರ ಗಡಿ ದಾಟಿಸಿದರು, ಲಬುಶನಗೆ (27) ಹಾಗೂ ಬೌಲರ್ ಮಿಚೆಲ್ ಸ್ಟ್ರಾಕ್ (28) ಉತ್ತಮ ರನ್ ಗಳಿಸುವ ಮೂಲಕ ಭಾರತಕ್ಕೆ 200 ರನ್ ಗುರಿ ನೀಡಿದರು.
200 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (0), ಇಶಾನ್ ಕಿಶನ್ (೦) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (೦) ಸೊನ್ನೆ ಸುತ್ತಿದರು ಒಂದು ಹಂತದಲ್ಲಿ ಎರಡು ರನ್ ಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಕೊನೆಗೂ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವಲ್ಲಿ ಆಸೀಸ್ ಸಫಲರಾದರೂ ಸಹ ನಂತರ ಬಂದ ಉಪ ನಾಯಕ ಹಾರ್ದಿಕ್ ಪಾಂಡ್ಯ ಜೊತೆಗೂಡಿದ ರಾಹುಲ್ ಗೆಲುವಿನ ಸಿಕ್ಸರ್ ಸಿಡಿಸಿ ಜಯ ತಂದುಕೊಡುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…