ವಿಶ್ವ ಕಪ್: ಕೊಹ್ಲಿ – ರಾಹುಲ್ ಜುಗಲ್ ಬಂದಿ, ಆಸೀಸ್ ವಿರುದ್ಧ ರೋಚಕ ಗೆಲುವು!

ವಿಶ್ವಕಪ್ ನಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯವನ್ನು ಆರಂಭಿಕ ಹಿನ್ನಡೆಯ ನಡುವೆಯೂ ಚೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ ಬಲದಿಂದ ರೋಚಕ ಗೆಲುವು ಸಾಧಿಸಿತು.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಭಾರತ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಆರಂಭಿಕ ಆಟಗಾರನಾದ ಮಿಚೆಲ್ ಮಾಷ್೯ ಅವರ ವಿಕೆಟ್ ಪಡೆದರು.

ನಂತರ ಒಂದಾದ ಡೇವಿಡ್ ವಾರ್ನರ್ (41) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಸ್ಟೀವನ್ ಸ್ಮಿತ್ (46) ಉತ್ತಮ ಜೊತೆಯಾಟ ನಡೆಸಿ ತಂಡವನ್ನು 74 ರ ಗಡಿ ದಾಟಿಸಿದರು, ಲಬುಶನಗೆ (27) ಹಾಗೂ ಬೌಲರ್ ಮಿಚೆಲ್ ಸ್ಟ್ರಾಕ್ (28) ಉತ್ತಮ ರನ್ ಗಳಿಸುವ ಮೂಲಕ ಭಾರತಕ್ಕೆ 200 ರನ್ ಗುರಿ ನೀಡಿದರು.

ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ ಮೂರು ವಿಕೆಟ್, ಸ್ಪಿನ್ನರ್ ಕುಲದೀಪ್ ಯಾದವ್ ಹಾಗೂ ವೇಗಿ ಜಸ್ಪ್ರಿತ್ ಬುಮ್ರಾ ಎರಡು ವಿಕೆಟ್, ಸಿರಾಜ್, ಆರ್. ಅಶ್ವಿನ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.

200 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (0), ಇಶಾನ್ ಕಿಶನ್ (೦) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (೦) ಸೊನ್ನೆ ಸುತ್ತಿದರು ಒಂದು ಹಂತದಲ್ಲಿ ಎರಡು ರನ್ ಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ವಿಕೆಟ್ ಪಡೆದ ಖುಷಿಯಿಂದ ಬೀಗುತ್ತಿದ್ದ ಆಸ್ಟ್ರೇಲಿಯಾ ತಂಡದ ಖುಷಿ ಹೆಚ್ಚು ಹೊತ್ತು ಇರಲಿಲ್ಲ, ಮುರಿಯದ ನಾಲ್ಕನೇ ವಿಕೆಟ್ ಗೆ ವಿರಾಟ್ ಕೊಹ್ಲಿ ಆರು ಬೌಂಡರಿ ನೆರವಿನಿಂದ (85) ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಎಂಟು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 97 ರನ್ ಗಳಿಸುವ ಮೂಲಕ 165 ರನ್ ಗಳ ಜೊತೆಯಾಟ ನಡೆಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಕೊನೆಗೂ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವಲ್ಲಿ ಆಸೀಸ್ ಸಫಲರಾದರೂ ಸಹ ನಂತರ ಬಂದ ಉಪ ನಾಯಕ ಹಾರ್ದಿಕ್ ಪಾಂಡ್ಯ ಜೊತೆಗೂಡಿದ ರಾಹುಲ್ ಗೆಲುವಿನ ಸಿಕ್ಸರ್ ಸಿಡಿಸಿ ಜಯ ತಂದುಕೊಡುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

8 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

19 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

20 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

20 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

22 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago