ವಿಶ್ವಕಪ್ ನಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯವನ್ನು ಆರಂಭಿಕ ಹಿನ್ನಡೆಯ ನಡುವೆಯೂ ಚೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ ಬಲದಿಂದ ರೋಚಕ ಗೆಲುವು ಸಾಧಿಸಿತು.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಭಾರತ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಆರಂಭಿಕ ಆಟಗಾರನಾದ ಮಿಚೆಲ್ ಮಾಷ್೯ ಅವರ ವಿಕೆಟ್ ಪಡೆದರು.
ನಂತರ ಒಂದಾದ ಡೇವಿಡ್ ವಾರ್ನರ್ (41) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಸ್ಟೀವನ್ ಸ್ಮಿತ್ (46) ಉತ್ತಮ ಜೊತೆಯಾಟ ನಡೆಸಿ ತಂಡವನ್ನು 74 ರ ಗಡಿ ದಾಟಿಸಿದರು, ಲಬುಶನಗೆ (27) ಹಾಗೂ ಬೌಲರ್ ಮಿಚೆಲ್ ಸ್ಟ್ರಾಕ್ (28) ಉತ್ತಮ ರನ್ ಗಳಿಸುವ ಮೂಲಕ ಭಾರತಕ್ಕೆ 200 ರನ್ ಗುರಿ ನೀಡಿದರು.
200 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (0), ಇಶಾನ್ ಕಿಶನ್ (೦) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (೦) ಸೊನ್ನೆ ಸುತ್ತಿದರು ಒಂದು ಹಂತದಲ್ಲಿ ಎರಡು ರನ್ ಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಕೊನೆಗೂ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವಲ್ಲಿ ಆಸೀಸ್ ಸಫಲರಾದರೂ ಸಹ ನಂತರ ಬಂದ ಉಪ ನಾಯಕ ಹಾರ್ದಿಕ್ ಪಾಂಡ್ಯ ಜೊತೆಗೂಡಿದ ರಾಹುಲ್ ಗೆಲುವಿನ ಸಿಕ್ಸರ್ ಸಿಡಿಸಿ ಜಯ ತಂದುಕೊಡುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…