ವಿಶ್ವ ಖ್ಯಾತಿಯ” ಡಿಸ್ಟಿಂಗ್ವಿಶ್ಡ್” ಫೆಲೋಶಿಪ್ ಪ್ರಶಸ್ತಿಗೆ ಭಾಜನರಾದ ಡಾ.ರೊನಾಲ್ಡ್ ಕೊಲಾಸೋ

ದೇವನಹಳ್ಳಿ: ಕರ್ನಾಟಕ ರಾಜ್ಯ ವ್ಯಾಪ್ತಿ ಅಲ್ಲದೆ ವಿಶ್ವ ವ್ಯಾಪ್ತಿಯಾಗಿ ಹಲವಾರು ಸಮಾಜಮುಖಿ ಸೇವೆಗಳು ಸಾರ್ವಜನಿಕ ಉಪಯೋಗಕರವಾದ ಮೂಲಭೂತ ಸೌಕರ್ಯಗಳನ್ನು ವಿವಿಧ ಕ್ಷೇತ್ರಗಳಲ್ಲಿ ನೀಡಿರುವ ಕೊಡುಗೆಗಳನ್ನು ಗುರುತಿಸಿ ಅನಿವಾಸಿ ಭಾರತೀಯರಾದ ಡಾ. ರೊನಾಲ್ಡ್ ಕೊಲಾಸೋ ವಿಶ್ವಖ್ಯಾತಿಯ “ಡಿಸ್ಟಿಂಗ್ವಿಶ್ಡ್” ಫೆಲೋಶಿಪ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

 ಬ್ರಿಟಿಷ್ ಪಾರ್ಲಿಮೆಂಟ್ ಹೌಸ್ ಆಫ್ ಲಂಡನ್ ನಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ಹಾಗೂ ಭಾರತ ಸಂವಿಧಾನದ ಸುಧಾರಣಾ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಂ .ಎನ್ ವೆಂಕಟಾಚಲಯ್ಯ ಅವರು ಸಹಿ ಮಾಡಿರುವ ವಿಶ್ವಖ್ಯಾತಿಯ” ಡಿಸ್ಟಿಂಗ್ವಿಶ್ಡ್” ಫೆಲೋಶಿಪ್ ಪ್ರಶಸ್ತಿ ಪತ್ರದ ಫಲಕವನ್ನು ಲಂಡನ್ ಲಾರ್ಡ್ ಮೇಯರ್ ಲಂಡನ್ ಡಿಜಿಟಲ್ ಆರ್ಥಿಕತೆಯ ಮಂತ್ರಿಗಳು, ಹಾಗೂ ಲೆಫ್ಟಿನೆಂಟ್ ಜನರಲ್ ಸುರೇಂದ್ರನಾಥ್, ಮೂವರು ಜಂಟಿಯಾಗಿ 20ಕ್ಕೂ ಹೆಚ್ಚು ಅಧಿಕ ದೇಶಗಳನ್ನು ಪ್ರತಿನಿಧಿಸುವ CEOಗಳು, ಗಣ್ಯಾತಿಗಣ್ಯರುಗಳ ಉಪಸ್ಥಿತಿಯಲ್ಲಿ ಇನ್ಸ್ ಟ್ಯೂಟ್ ಆಫ್ ಡೈರೆಕ್ಟರ್ಸ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಡಾ. ರೋನಾಲ್ಡ್ ಕೊಲಾಸೋ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಕೆಪಿಸಿಸಿ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸಂದೀಪ್ ಮಾತನಾಡಿ, ಡಾ. ರೊನಾಲ್ಡ್ ಕೊಲಾಸೋ ಅವರು ವಿಶ್ವಕ್ಕೆ ಮಾದರಿಯಾಗುವಂತಿರುವ ಪೊಲೀಸ್ ಠಾಣೆಗಳು, ಸರ್ಕಾರಿ ಹಾಗೂ ಚಾರಿಟಬಲ್ ಟ್ರಸ್ಟ್ ಗಳು ನಡೆಸುವ ಅತ್ಯಾಧುನಿಕ ಮಾದರಿಯ ಶಾಲೆಗಳು, ಸಾರ್ವಜನಿಕ ರಸ್ತೆಗಳು, ಆಸ್ಪತ್ರೆಗಳು, ತಾಲೂಕು ಆಫೀಸ್, ನ್ಯಾಯಾಂಗ, ವಕೀಲರ ಭವನ, ಹಾಫ್ ಕಾಮ್ಸ್ ಮಳಿಗೆಗಳು, ನಿರಾಶ್ರಿತರಿಗೆ ಸೂಕ್ತ ಮನೆಗಳ ಕೊಡುಗೆ, ಹಿಂದೂ ದೇವಾಲಯಗಳು, ಚರ್ಚ್ ಗಳು, ಮಸೀದಿಗಳು, ಬೆಸ್ಕಾಂ, ಸಾರ್ವಜನಿಕ ಸೌಲಭ್ಯಗಳು, ಪಂಚಾಯತಿ ಕಟ್ಟಡ, ಪೀಠೋಪಕರಣಗಳು, ಕೋವಿಡ್ ಸಮಯದಲ್ಲಿ ಸಂಕಟದಲ್ಲಿರುವ ಸಹಸ್ರಾರು ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ಅನೇಕ ಹಳ್ಳಿಗಳಲ್ಲಿ ವಿತರಣೆ ಮಾಡಿ, ಪ್ರಕೃತಿ ವಿಕೋಪಕ್ಕೆ ತುತ್ತಾದವರೆಗೆ ಸಹಾಯ ಹಸ್ತ, ಕುಡಿಯುವ ನೀರಿನ ವ್ಯವಸ್ಥೆ ಮುಂತಾದ ಅಭಿವೃದ್ಧಿ ಹಾಗೂ ಜನಪರ ಸೇವೆಗಳನ್ನು ಗುರುತಿಸಿ ಅವರಿಗೆ ನೀಡಿದ ಗೌರವ ಇದಾಗಿದ್ದು, ಈ ವಿಶ್ವಖ್ಯಾತಿಯ ಗೌರವ ನಮ್ಮ ತಾಲೂಕು ರಾಜ್ಯ ಹಾಗೂ ನಮ್ಮ ದೇಶಕ್ಕೂ ಸಂದ ಗೌರವವಾಗಿರುತ್ತದೆ ಎಂದರು.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

24 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

1 hour ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

10 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago