ವಿಶ್ವ ಖ್ಯಾತಿಯ” ಡಿಸ್ಟಿಂಗ್ವಿಶ್ಡ್” ಫೆಲೋಶಿಪ್ ಪ್ರಶಸ್ತಿಗೆ ಭಾಜನರಾದ ಡಾ.ರೊನಾಲ್ಡ್ ಕೊಲಾಸೋ

ದೇವನಹಳ್ಳಿ: ಕರ್ನಾಟಕ ರಾಜ್ಯ ವ್ಯಾಪ್ತಿ ಅಲ್ಲದೆ ವಿಶ್ವ ವ್ಯಾಪ್ತಿಯಾಗಿ ಹಲವಾರು ಸಮಾಜಮುಖಿ ಸೇವೆಗಳು ಸಾರ್ವಜನಿಕ ಉಪಯೋಗಕರವಾದ ಮೂಲಭೂತ ಸೌಕರ್ಯಗಳನ್ನು ವಿವಿಧ ಕ್ಷೇತ್ರಗಳಲ್ಲಿ ನೀಡಿರುವ ಕೊಡುಗೆಗಳನ್ನು ಗುರುತಿಸಿ ಅನಿವಾಸಿ ಭಾರತೀಯರಾದ ಡಾ. ರೊನಾಲ್ಡ್ ಕೊಲಾಸೋ ವಿಶ್ವಖ್ಯಾತಿಯ “ಡಿಸ್ಟಿಂಗ್ವಿಶ್ಡ್” ಫೆಲೋಶಿಪ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

 ಬ್ರಿಟಿಷ್ ಪಾರ್ಲಿಮೆಂಟ್ ಹೌಸ್ ಆಫ್ ಲಂಡನ್ ನಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ಹಾಗೂ ಭಾರತ ಸಂವಿಧಾನದ ಸುಧಾರಣಾ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಂ .ಎನ್ ವೆಂಕಟಾಚಲಯ್ಯ ಅವರು ಸಹಿ ಮಾಡಿರುವ ವಿಶ್ವಖ್ಯಾತಿಯ” ಡಿಸ್ಟಿಂಗ್ವಿಶ್ಡ್” ಫೆಲೋಶಿಪ್ ಪ್ರಶಸ್ತಿ ಪತ್ರದ ಫಲಕವನ್ನು ಲಂಡನ್ ಲಾರ್ಡ್ ಮೇಯರ್ ಲಂಡನ್ ಡಿಜಿಟಲ್ ಆರ್ಥಿಕತೆಯ ಮಂತ್ರಿಗಳು, ಹಾಗೂ ಲೆಫ್ಟಿನೆಂಟ್ ಜನರಲ್ ಸುರೇಂದ್ರನಾಥ್, ಮೂವರು ಜಂಟಿಯಾಗಿ 20ಕ್ಕೂ ಹೆಚ್ಚು ಅಧಿಕ ದೇಶಗಳನ್ನು ಪ್ರತಿನಿಧಿಸುವ CEOಗಳು, ಗಣ್ಯಾತಿಗಣ್ಯರುಗಳ ಉಪಸ್ಥಿತಿಯಲ್ಲಿ ಇನ್ಸ್ ಟ್ಯೂಟ್ ಆಫ್ ಡೈರೆಕ್ಟರ್ಸ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಡಾ. ರೋನಾಲ್ಡ್ ಕೊಲಾಸೋ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಕೆಪಿಸಿಸಿ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸಂದೀಪ್ ಮಾತನಾಡಿ, ಡಾ. ರೊನಾಲ್ಡ್ ಕೊಲಾಸೋ ಅವರು ವಿಶ್ವಕ್ಕೆ ಮಾದರಿಯಾಗುವಂತಿರುವ ಪೊಲೀಸ್ ಠಾಣೆಗಳು, ಸರ್ಕಾರಿ ಹಾಗೂ ಚಾರಿಟಬಲ್ ಟ್ರಸ್ಟ್ ಗಳು ನಡೆಸುವ ಅತ್ಯಾಧುನಿಕ ಮಾದರಿಯ ಶಾಲೆಗಳು, ಸಾರ್ವಜನಿಕ ರಸ್ತೆಗಳು, ಆಸ್ಪತ್ರೆಗಳು, ತಾಲೂಕು ಆಫೀಸ್, ನ್ಯಾಯಾಂಗ, ವಕೀಲರ ಭವನ, ಹಾಫ್ ಕಾಮ್ಸ್ ಮಳಿಗೆಗಳು, ನಿರಾಶ್ರಿತರಿಗೆ ಸೂಕ್ತ ಮನೆಗಳ ಕೊಡುಗೆ, ಹಿಂದೂ ದೇವಾಲಯಗಳು, ಚರ್ಚ್ ಗಳು, ಮಸೀದಿಗಳು, ಬೆಸ್ಕಾಂ, ಸಾರ್ವಜನಿಕ ಸೌಲಭ್ಯಗಳು, ಪಂಚಾಯತಿ ಕಟ್ಟಡ, ಪೀಠೋಪಕರಣಗಳು, ಕೋವಿಡ್ ಸಮಯದಲ್ಲಿ ಸಂಕಟದಲ್ಲಿರುವ ಸಹಸ್ರಾರು ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ಅನೇಕ ಹಳ್ಳಿಗಳಲ್ಲಿ ವಿತರಣೆ ಮಾಡಿ, ಪ್ರಕೃತಿ ವಿಕೋಪಕ್ಕೆ ತುತ್ತಾದವರೆಗೆ ಸಹಾಯ ಹಸ್ತ, ಕುಡಿಯುವ ನೀರಿನ ವ್ಯವಸ್ಥೆ ಮುಂತಾದ ಅಭಿವೃದ್ಧಿ ಹಾಗೂ ಜನಪರ ಸೇವೆಗಳನ್ನು ಗುರುತಿಸಿ ಅವರಿಗೆ ನೀಡಿದ ಗೌರವ ಇದಾಗಿದ್ದು, ಈ ವಿಶ್ವಖ್ಯಾತಿಯ ಗೌರವ ನಮ್ಮ ತಾಲೂಕು ರಾಜ್ಯ ಹಾಗೂ ನಮ್ಮ ದೇಶಕ್ಕೂ ಸಂದ ಗೌರವವಾಗಿರುತ್ತದೆ ಎಂದರು.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

17 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

23 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

1 day ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago