ದೇವನಹಳ್ಳಿ: ಕರ್ನಾಟಕ ರಾಜ್ಯ ವ್ಯಾಪ್ತಿ ಅಲ್ಲದೆ ವಿಶ್ವ ವ್ಯಾಪ್ತಿಯಾಗಿ ಹಲವಾರು ಸಮಾಜಮುಖಿ ಸೇವೆಗಳು ಸಾರ್ವಜನಿಕ ಉಪಯೋಗಕರವಾದ ಮೂಲಭೂತ ಸೌಕರ್ಯಗಳನ್ನು ವಿವಿಧ ಕ್ಷೇತ್ರಗಳಲ್ಲಿ ನೀಡಿರುವ ಕೊಡುಗೆಗಳನ್ನು ಗುರುತಿಸಿ ಅನಿವಾಸಿ ಭಾರತೀಯರಾದ ಡಾ. ರೊನಾಲ್ಡ್ ಕೊಲಾಸೋ ವಿಶ್ವಖ್ಯಾತಿಯ “ಡಿಸ್ಟಿಂಗ್ವಿಶ್ಡ್” ಫೆಲೋಶಿಪ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬ್ರಿಟಿಷ್ ಪಾರ್ಲಿಮೆಂಟ್ ಹೌಸ್ ಆಫ್ ಲಂಡನ್ ನಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ಹಾಗೂ ಭಾರತ ಸಂವಿಧಾನದ ಸುಧಾರಣಾ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಂ .ಎನ್ ವೆಂಕಟಾಚಲಯ್ಯ ಅವರು ಸಹಿ ಮಾಡಿರುವ ವಿಶ್ವಖ್ಯಾತಿಯ” ಡಿಸ್ಟಿಂಗ್ವಿಶ್ಡ್” ಫೆಲೋಶಿಪ್ ಪ್ರಶಸ್ತಿ ಪತ್ರದ ಫಲಕವನ್ನು ಲಂಡನ್ ಲಾರ್ಡ್ ಮೇಯರ್ ಲಂಡನ್ ಡಿಜಿಟಲ್ ಆರ್ಥಿಕತೆಯ ಮಂತ್ರಿಗಳು, ಹಾಗೂ ಲೆಫ್ಟಿನೆಂಟ್ ಜನರಲ್ ಸುರೇಂದ್ರನಾಥ್, ಮೂವರು ಜಂಟಿಯಾಗಿ 20ಕ್ಕೂ ಹೆಚ್ಚು ಅಧಿಕ ದೇಶಗಳನ್ನು ಪ್ರತಿನಿಧಿಸುವ CEOಗಳು, ಗಣ್ಯಾತಿಗಣ್ಯರುಗಳ ಉಪಸ್ಥಿತಿಯಲ್ಲಿ ಇನ್ಸ್ ಟ್ಯೂಟ್ ಆಫ್ ಡೈರೆಕ್ಟರ್ಸ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಡಾ. ರೋನಾಲ್ಡ್ ಕೊಲಾಸೋ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಕೆಪಿಸಿಸಿ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸಂದೀಪ್ ಮಾತನಾಡಿ, ಡಾ. ರೊನಾಲ್ಡ್ ಕೊಲಾಸೋ ಅವರು ವಿಶ್ವಕ್ಕೆ ಮಾದರಿಯಾಗುವಂತಿರುವ ಪೊಲೀಸ್ ಠಾಣೆಗಳು, ಸರ್ಕಾರಿ ಹಾಗೂ ಚಾರಿಟಬಲ್ ಟ್ರಸ್ಟ್ ಗಳು ನಡೆಸುವ ಅತ್ಯಾಧುನಿಕ ಮಾದರಿಯ ಶಾಲೆಗಳು, ಸಾರ್ವಜನಿಕ ರಸ್ತೆಗಳು, ಆಸ್ಪತ್ರೆಗಳು, ತಾಲೂಕು ಆಫೀಸ್, ನ್ಯಾಯಾಂಗ, ವಕೀಲರ ಭವನ, ಹಾಫ್ ಕಾಮ್ಸ್ ಮಳಿಗೆಗಳು, ನಿರಾಶ್ರಿತರಿಗೆ ಸೂಕ್ತ ಮನೆಗಳ ಕೊಡುಗೆ, ಹಿಂದೂ ದೇವಾಲಯಗಳು, ಚರ್ಚ್ ಗಳು, ಮಸೀದಿಗಳು, ಬೆಸ್ಕಾಂ, ಸಾರ್ವಜನಿಕ ಸೌಲಭ್ಯಗಳು, ಪಂಚಾಯತಿ ಕಟ್ಟಡ, ಪೀಠೋಪಕರಣಗಳು, ಕೋವಿಡ್ ಸಮಯದಲ್ಲಿ ಸಂಕಟದಲ್ಲಿರುವ ಸಹಸ್ರಾರು ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ಅನೇಕ ಹಳ್ಳಿಗಳಲ್ಲಿ ವಿತರಣೆ ಮಾಡಿ, ಪ್ರಕೃತಿ ವಿಕೋಪಕ್ಕೆ ತುತ್ತಾದವರೆಗೆ ಸಹಾಯ ಹಸ್ತ, ಕುಡಿಯುವ ನೀರಿನ ವ್ಯವಸ್ಥೆ ಮುಂತಾದ ಅಭಿವೃದ್ಧಿ ಹಾಗೂ ಜನಪರ ಸೇವೆಗಳನ್ನು ಗುರುತಿಸಿ ಅವರಿಗೆ ನೀಡಿದ ಗೌರವ ಇದಾಗಿದ್ದು, ಈ ವಿಶ್ವಖ್ಯಾತಿಯ ಗೌರವ ನಮ್ಮ ತಾಲೂಕು ರಾಜ್ಯ ಹಾಗೂ ನಮ್ಮ ದೇಶಕ್ಕೂ ಸಂದ ಗೌರವವಾಗಿರುತ್ತದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…