ವಿಶ್ವ ಖ್ಯಾತಿಯ” ಡಿಸ್ಟಿಂಗ್ವಿಶ್ಡ್” ಫೆಲೋಶಿಪ್ ಪ್ರಶಸ್ತಿಗೆ ಭಾಜನರಾದ ಡಾ.ರೊನಾಲ್ಡ್ ಕೊಲಾಸೋ

ದೇವನಹಳ್ಳಿ: ಕರ್ನಾಟಕ ರಾಜ್ಯ ವ್ಯಾಪ್ತಿ ಅಲ್ಲದೆ ವಿಶ್ವ ವ್ಯಾಪ್ತಿಯಾಗಿ ಹಲವಾರು ಸಮಾಜಮುಖಿ ಸೇವೆಗಳು ಸಾರ್ವಜನಿಕ ಉಪಯೋಗಕರವಾದ ಮೂಲಭೂತ ಸೌಕರ್ಯಗಳನ್ನು ವಿವಿಧ ಕ್ಷೇತ್ರಗಳಲ್ಲಿ ನೀಡಿರುವ ಕೊಡುಗೆಗಳನ್ನು ಗುರುತಿಸಿ ಅನಿವಾಸಿ ಭಾರತೀಯರಾದ ಡಾ. ರೊನಾಲ್ಡ್ ಕೊಲಾಸೋ ವಿಶ್ವಖ್ಯಾತಿಯ “ಡಿಸ್ಟಿಂಗ್ವಿಶ್ಡ್” ಫೆಲೋಶಿಪ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

 ಬ್ರಿಟಿಷ್ ಪಾರ್ಲಿಮೆಂಟ್ ಹೌಸ್ ಆಫ್ ಲಂಡನ್ ನಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ಹಾಗೂ ಭಾರತ ಸಂವಿಧಾನದ ಸುಧಾರಣಾ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಂ .ಎನ್ ವೆಂಕಟಾಚಲಯ್ಯ ಅವರು ಸಹಿ ಮಾಡಿರುವ ವಿಶ್ವಖ್ಯಾತಿಯ” ಡಿಸ್ಟಿಂಗ್ವಿಶ್ಡ್” ಫೆಲೋಶಿಪ್ ಪ್ರಶಸ್ತಿ ಪತ್ರದ ಫಲಕವನ್ನು ಲಂಡನ್ ಲಾರ್ಡ್ ಮೇಯರ್ ಲಂಡನ್ ಡಿಜಿಟಲ್ ಆರ್ಥಿಕತೆಯ ಮಂತ್ರಿಗಳು, ಹಾಗೂ ಲೆಫ್ಟಿನೆಂಟ್ ಜನರಲ್ ಸುರೇಂದ್ರನಾಥ್, ಮೂವರು ಜಂಟಿಯಾಗಿ 20ಕ್ಕೂ ಹೆಚ್ಚು ಅಧಿಕ ದೇಶಗಳನ್ನು ಪ್ರತಿನಿಧಿಸುವ CEOಗಳು, ಗಣ್ಯಾತಿಗಣ್ಯರುಗಳ ಉಪಸ್ಥಿತಿಯಲ್ಲಿ ಇನ್ಸ್ ಟ್ಯೂಟ್ ಆಫ್ ಡೈರೆಕ್ಟರ್ಸ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಡಾ. ರೋನಾಲ್ಡ್ ಕೊಲಾಸೋ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಕೆಪಿಸಿಸಿ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸಂದೀಪ್ ಮಾತನಾಡಿ, ಡಾ. ರೊನಾಲ್ಡ್ ಕೊಲಾಸೋ ಅವರು ವಿಶ್ವಕ್ಕೆ ಮಾದರಿಯಾಗುವಂತಿರುವ ಪೊಲೀಸ್ ಠಾಣೆಗಳು, ಸರ್ಕಾರಿ ಹಾಗೂ ಚಾರಿಟಬಲ್ ಟ್ರಸ್ಟ್ ಗಳು ನಡೆಸುವ ಅತ್ಯಾಧುನಿಕ ಮಾದರಿಯ ಶಾಲೆಗಳು, ಸಾರ್ವಜನಿಕ ರಸ್ತೆಗಳು, ಆಸ್ಪತ್ರೆಗಳು, ತಾಲೂಕು ಆಫೀಸ್, ನ್ಯಾಯಾಂಗ, ವಕೀಲರ ಭವನ, ಹಾಫ್ ಕಾಮ್ಸ್ ಮಳಿಗೆಗಳು, ನಿರಾಶ್ರಿತರಿಗೆ ಸೂಕ್ತ ಮನೆಗಳ ಕೊಡುಗೆ, ಹಿಂದೂ ದೇವಾಲಯಗಳು, ಚರ್ಚ್ ಗಳು, ಮಸೀದಿಗಳು, ಬೆಸ್ಕಾಂ, ಸಾರ್ವಜನಿಕ ಸೌಲಭ್ಯಗಳು, ಪಂಚಾಯತಿ ಕಟ್ಟಡ, ಪೀಠೋಪಕರಣಗಳು, ಕೋವಿಡ್ ಸಮಯದಲ್ಲಿ ಸಂಕಟದಲ್ಲಿರುವ ಸಹಸ್ರಾರು ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ಅನೇಕ ಹಳ್ಳಿಗಳಲ್ಲಿ ವಿತರಣೆ ಮಾಡಿ, ಪ್ರಕೃತಿ ವಿಕೋಪಕ್ಕೆ ತುತ್ತಾದವರೆಗೆ ಸಹಾಯ ಹಸ್ತ, ಕುಡಿಯುವ ನೀರಿನ ವ್ಯವಸ್ಥೆ ಮುಂತಾದ ಅಭಿವೃದ್ಧಿ ಹಾಗೂ ಜನಪರ ಸೇವೆಗಳನ್ನು ಗುರುತಿಸಿ ಅವರಿಗೆ ನೀಡಿದ ಗೌರವ ಇದಾಗಿದ್ದು, ಈ ವಿಶ್ವಖ್ಯಾತಿಯ ಗೌರವ ನಮ್ಮ ತಾಲೂಕು ರಾಜ್ಯ ಹಾಗೂ ನಮ್ಮ ದೇಶಕ್ಕೂ ಸಂದ ಗೌರವವಾಗಿರುತ್ತದೆ ಎಂದರು.

Ramesh Babu

Journalist

Recent Posts

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

20 hours ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

1 day ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago