ದಾಂಪತ್ಯ ಜೀವನದಲ್ಲಿ ಬಿರುಕು ಕಂಡು ವಿಚ್ಛೇದ ಪಡೆಯುವ ಸಲುವಾಗಿ ನ್ಯಾಯಾಲಯದ ಮೆಟ್ಟಿಲು ಏರಿದ್ದ ಎರಡು ಜೋಡಿಯನ್ನು ಇದೀಗ ಲೋಕ ಅದಾಲತ್ ಒಂದುಗೂಡಿಸಿದೆ.
ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಯನ್ನು ಒಂದು ವರ್ಷ ನಂತರ ಮತ್ತೆ ಒಂದುಗೂಡಿಸಿದ ಪ್ರಕರಣ ನಗರದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಅಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾದ ಪ್ರವೀಣ್ ಆರ್.ಜೆ.ಎಸ್ ಅವರ ಸಮ್ಮುಖದಲ್ಲಿ ನಡೆಯಿತು.
ನಾಗಮಣಿ.ಆರ್ ಹಾಗೂ ಹನುಮಂತರಾಜು.ಎನ್ 2018ರಲ್ಲಿ ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿರುತ್ತಾರೆ.
ನ್ಯಾಯಾಧೀಶ ಪ್ರವೀಣ್ ಆರ್.ಜೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ವಿಚ್ಛೇದನ ಪಡೆಯುವ ಸಂಖ್ಯೆಯೂ ಅಧಿಕವಾಗುತ್ತಿರುವುದು ಬೇಸರದ ಸಂಗತಿ. ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕಾದರೆ ಶಾಂತಿ ಸುವ್ಯವಸ್ಥೆ ಅತ್ಯವಶ್ಯಕ ಎಂದರು.
ಸುಮಾರು 6 ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ 2024ರಲ್ಲಿ ವಿಚ್ಚೇದನ ಬೇಕೆಂದು ಅರ್ಜಿ ಸಲ್ಲಿಸಲಾಗಿತ್ತು. ಈ ದಂಪತಿ ಗಂಡು ಇದ್ದು, ಆ ಮಗುವಿನ ಭವಿಷ್ಯ ಹಿತದೃಷ್ಟಿಯಿಂದ, ಈ ದಂಪತಿಯನ್ನು ಒಂದು ಮಾಡಲು ತೀರ್ಮಾನಿಸಿ ಲೋಕ್ ಅದಾಲತ್ ನಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ಸಂದಾನ ನಡೆಸಿ ಜೊತೆಗೂಡಿಸಲಾಗಿದೆ ಎಂದು ಮಹಿಳಾ ಪರ ವಕೀಲ ವೆಂಕಟಾಚಲಪತಿ ತಿಳಿಸಿದರು.
ಈ ವೇಳೆ ದೊಡ್ಡಬಳ್ಳಾಪುರ 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಮೇಶ್ ದುರುಗಪ್ಪ ಏಕಬೋಟೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಶಿಲ್ಪಾ ಹೆಚ್.ಎ, 2ನೇ ಅಪರ ಸಿವಿಲ್ ನ್ಯಾಯಾಧೀಶರು ಜೆ.ಎಂ. ಎಫ್.ಸಿ. ರವಿ ಬೆಟಗಾರ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿ. ಎಂ, ಉಪಾಧ್ಯಕ್ಷ ಎಂ. ಆರ್. ಸುರೇಶ್, ಕಾರ್ಯದರ್ಶಿ ಎ. ಕೃಷ್ಣಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…