ವಿಶ್ವ ವಿಕಲಚೇತನರ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್

2023 ರ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ  ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ‌ ಕಛೇರಿ ಸಭಾಂಗಣದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ-2023 ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿಸೆಂಬರ್ 3 ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಡಳಿತ ಭವನದಲ್ಲಿರುವ  ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಶಿಷ್ಠಾಚಾರದಂತೆ ಆಚರಿಸಲಾಗುವುದು. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪುನರ್ವಸತಿ ಕಾರ್ಯಕರ್ತರನ್ನು  ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆ, ವ್ಯಕ್ತಿಗಳಿಗೆ ದಿನಾಚರಣೆಯ ದಿನ ಅಭಿನಂದಿಸಲು ತಿಳಿಸಿದರು.

ತಾಲ್ಲೂಕು ಮಟ್ಟದಲ್ಲಿ ವಿಕಲಚೇತನರ ನೋಡಲ್ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ ವಿಕಲಚೇತನರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ವಿಕಲಚೇತನರ ಪಟ್ಟಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಅಗತ್ಯ ಕ್ರಮವಹಿಸುವಂತೆ ಎಲ್ಲಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ತಿಳಿಸಿದರು.

ದೇವನಹಳ್ಳಿ ಶಾಸಕರ ಅನುದಾನದಲ್ಲಿ ಮಂಜೂರಾದ 09 ಜನ ದೈಹಿಕ ವಿಕಲಚೇತನರಿಗೆ ಸಾಂಕೇತಿಕವಾಗಿ ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ, ವಿಕಲಚೇತನರಿಗೆ ಇರುವ ಸೌಲಭ್ಯಗಳ ಬಗ್ಗೆ ಹಾಗೂ ಕಾಯ್ದೆ ಕಾನೂನುಗಳ ಬಗ್ಗೆ ದಿನಾಚರಣೆಯ ದಿನದಂದು ಸಂಪನ್ಮೂಲ ವ್ಯಕ್ತಿಗಳ ಮೂಲಕ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರಲ್ಲದೇ ವಿಕಲಚೇತನರಿಗೆ ಉಚಿತವಾಗಿ ವೈದ್ಯಕೀಯ ತಪಾಸಣೆ ನಡೆಸಲು ಆರೋಗ್ಯ ಇಲಾಖೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ  ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಹಾಯಕ ನಿರ್ದೇಶಕರು, ತಾಲ್ಲೂಕು ಮಟ್ಟದ ವಿಕಲಚೇತನರ ನೋಡಲ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

11 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

11 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

14 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago