ವಿಶ್ವ ವಿಕಲಚೇತನರ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್

2023 ರ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ  ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ‌ ಕಛೇರಿ ಸಭಾಂಗಣದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ-2023 ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿಸೆಂಬರ್ 3 ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಡಳಿತ ಭವನದಲ್ಲಿರುವ  ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಶಿಷ್ಠಾಚಾರದಂತೆ ಆಚರಿಸಲಾಗುವುದು. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪುನರ್ವಸತಿ ಕಾರ್ಯಕರ್ತರನ್ನು  ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆ, ವ್ಯಕ್ತಿಗಳಿಗೆ ದಿನಾಚರಣೆಯ ದಿನ ಅಭಿನಂದಿಸಲು ತಿಳಿಸಿದರು.

ತಾಲ್ಲೂಕು ಮಟ್ಟದಲ್ಲಿ ವಿಕಲಚೇತನರ ನೋಡಲ್ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ ವಿಕಲಚೇತನರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ವಿಕಲಚೇತನರ ಪಟ್ಟಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಅಗತ್ಯ ಕ್ರಮವಹಿಸುವಂತೆ ಎಲ್ಲಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ತಿಳಿಸಿದರು.

ದೇವನಹಳ್ಳಿ ಶಾಸಕರ ಅನುದಾನದಲ್ಲಿ ಮಂಜೂರಾದ 09 ಜನ ದೈಹಿಕ ವಿಕಲಚೇತನರಿಗೆ ಸಾಂಕೇತಿಕವಾಗಿ ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ, ವಿಕಲಚೇತನರಿಗೆ ಇರುವ ಸೌಲಭ್ಯಗಳ ಬಗ್ಗೆ ಹಾಗೂ ಕಾಯ್ದೆ ಕಾನೂನುಗಳ ಬಗ್ಗೆ ದಿನಾಚರಣೆಯ ದಿನದಂದು ಸಂಪನ್ಮೂಲ ವ್ಯಕ್ತಿಗಳ ಮೂಲಕ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರಲ್ಲದೇ ವಿಕಲಚೇತನರಿಗೆ ಉಚಿತವಾಗಿ ವೈದ್ಯಕೀಯ ತಪಾಸಣೆ ನಡೆಸಲು ಆರೋಗ್ಯ ಇಲಾಖೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ  ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಹಾಯಕ ನಿರ್ದೇಶಕರು, ತಾಲ್ಲೂಕು ಮಟ್ಟದ ವಿಕಲಚೇತನರ ನೋಡಲ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

19 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago