ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದಲ್ಲಿ ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಯಿತು.
ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಡೆಯುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಕುಮಾರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪ್ರತಿಯೊಬ್ಬರು ತಮ್ಮ ಮನೆ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿ, ನೈರ್ಮಲ್ಯದಿಂದ ಕಾಪಾಡಬೇಕು. ನೈರ್ಮಲ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರೂ ಬಯಲು ಶೌಚ ಮಾಡುವುದನ್ನು ಬಿಟ್ಟು ಮನೆ ಶೌಚಾಲಯಗಳನ್ನು ಬಳಸುವ ಜತೆಗೆ ಸುತ್ತ ಮುತ್ತಲಿನ ಪ್ರತಿಯೊಬ್ಬ ಜನರು ಶೌಚಾಲಯ ಬಳಸುವಂತೆ ಪ್ರೇರಣೆ ತುಂಬಬೇಕು. ಪ್ರತಿಯೊಬ್ಬರೂ ಸಾರ್ವಜನಿಕ ಶೌಚಾಲಯಗಳನ್ನು ನಮ್ಮ ಮನೆ ಶೌಚಾಲಯಗಳಂತೆ ಬಳಸಿಕೊಂಡ ಬಯಲು ಶೌಚ್ಛ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.
ಈ ವೇಳೆ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆಯ ಕುರಿತು ಗ್ರಾಮಸ್ಥರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಕುಂದಾಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ನಾಗೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿ.ಪಂ ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲಕುಮಾರ, ಕುಂದಾಣ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…