ವಿಶ್ವ ಹಿರಿಯ ನಾಗರಿಕರ ದಿನಾಚರಣೆ – ಹಿರಿಯ ನಾಗರಿಕರು ಅನುಭವದ ಕಣಜಗಳು – ಎಡಿಸಿ ಸೈಯಿದಾ ಅಯಿಷಾ

ನಾಗರಿಕರು ಅನುಭವದ ಗ್ರಂಥಗಳು ಅವರ ಜೊತೆ ಸಮಯ ಕಳೆಯಿರಿ ಅವರ ಆರೋಗ್ಯಕ್ಕೆ ಭದ್ರತೆ ಕೊಡಿ. ಹಿರಿಯರ ತ್ಯಾಗ ಪರಿಶ್ರಮದಿಂದ ಇಂದು ನಾವೆಲ್ಲರೂ ಸುಖ-ಸೌಕರ್ಯವನ್ನು ಅನುಭವಿಸುತ್ತಿದ್ದೇವೆ ಹಿರಿಯ ನಾಗರಿಕರನ್ನು ಪ್ರೀತಿಸಿ, ಗೌರವಿಸಿ ಅವರ ಆಶೀರ್ವಾದವನ್ನು ಪಡೆದು ಸಂತೋಷದ ವಾತಾವರಣ ನಿರ್ಮಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿರಿಯರ ತ್ಯಾಗ ಸೇವೆ, ಜ್ಞಾನವನ್ನು ನೆನಪಿಸುವ ಮಹತ್ತರ ದಿನವಾಗಿದೆ. ಹಿರಿಯರು ನಮ್ಮ ಭೂತಕಾಲದ ನೆನಪುಗಳು ವರ್ತಮಾನದ ಆಸ್ತಿಗಳು ಮತ್ತು ಭವಿಷ್ಯದ ಪ್ರೇರಣೆ. ಅವರು ನಮ್ಮ ಸಮಾಜದ ಬೆನ್ನೆಲುಬು ತಮ್ಮ ಜೀವನವನ್ನು ಕುಟುಂಬ,ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಅರ್ಪಿಸಿದ್ದಾರೆ. ಹಿರಿಯರು ಸಂಸ್ಕೃತಿಯ ಸಾಗರ ಅನುಭವದ ವಿಶ್ವಕೋಶ. ಅವರ ಆಶೀರ್ವಾದವಿಲ್ಲದೆ ಯಾವ ಕುಟುಂಬ ಸಮೃದ್ಧಿ ಹೊಂದಲು ಸಾಧ್ಯವಿಲ್ಲ. ನಾವು ಹಿರಿಯರನ್ನು ಕೇವಲ ಕುಟುಂಬದ ಸದಸ್ಯರಾಗಿ ಕಾಣಬಾರದು ಅವರನ್ನು ಜ್ಞಾನಿಗಳಾಗಿ ಮಾರ್ಗದರ್ಶಕರಾಗಿ ಕಾಣಬೇಕು. ಅವರ ಪ್ರೀತಿ ಸಲಹೆ ಮಾರ್ಗದರ್ಶನಗಳು ನಮ್ಮ ಬದುಕಿಗೆ ದಾರಿ ತೋರುವ ದೀಪಗಳು ಎಂದರು.

ಜಿಲ್ಲೆಯಲ್ಲಿ 1,12,236 ಜನ ಹಿರಿಯ ನಾಗರಿಕರು ಪಿಂಚಣಿ ತೆಗೆದುಕೊಳ್ಳುತ್ತಿದ್ದಾರೆ. ಹಿರಿಯ ನಾಗರಿಕರು ಓಡಾಡುವಾಗ ಕೆಲ ಸಂದರ್ಭದಲ್ಲಿ ಬಿದ್ದು ಪ್ರಾಣ ಹಾನಿಗಳು ಆಗಿವೆ ಕೆಲವರು ಕೈ ಕಾಲುಗಳನ್ನು ಕಳೆದು ಕೊಂಡಿದ್ದಾರೆ ಹೀಗೆ ಹಲವಾರು ರೀತಿ ಅನಾಹುತಗಳು ಆಗಿವೆ ಅದಕ್ಕಾಗಿ ಹಿರಿಯ ನಾಗರಿಕರಿಗೆ ಅನುಕೂಲವಾಗಲು ನಮ್ಮ ಊರುಗೋಲು ಎಂಬ ಕಾರ್ಯಕ್ರಮ ರೂಪಿಸಿ ಅದರಲ್ಲಿ 5000 ಹಿರಿಯ ನಾಗರಿಕರಿಗೆ ಊರಗೋಲನ್ನು ವಿತರಿಸಲಾಯಿತು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಮಾತನಾಡಿ ಹಿರಿಯ ನಾಗರಿಕರು ಅನುಭವದಿಂದ ಪಾಠ ಕಲಿತಿರುತ್ತಾರೆ. ಹಿರಿಯರು ಹೇಳುವ ಕಥೆಯಲ್ಲಿ ನೈತಿಕತೆಯ ಸಾರಂಶ, ನೀತಿ ಪಾಠ ತುಂಬಿರುತ್ತದೆ. ಅವರು ಮಾನಸಿಕವಾಗಿ ಸಧೃಡರಾಗಿರುತ್ತಾರೆ. ಅವರು ವಿದ್ಯಾಭ್ಯಾಸ ಮಾಡಿರದಿದ್ದರು ಔಷಧೋಪಚಾರದ ಅರಿವಿರುತ್ತಿತ್ತು. ಅವರ ಅನುಭವದ ಸಾಮರ್ಥ್ಯ ಬಹಳ ದೊಡ್ಡದು ಹಾಗಾಗಿ ಅವರ ಮಾತನ್ನು ಕೇಳಬೇಕು. ಇಂದು ನಾನು ಅಧಿಕಾರಿಯಾಗಿ ಕೆಲಸ ನಿರ್ವಹಿಸಲು ಕಾರಣ ಹಿರಿಯರು ಎಂದು ನೆನಪಿಸಿಕೊಂಡರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನೆಲಮಂಗಲ ತಾಲ್ಲೂಕಿನ ಎಂ.ಆರ್. ರುದ್ರೇಶ್ ವಯಸ್ಸು 69 ಪೋಲಿಸ್ ಇಲಾಖೆಯಲ್ಲಿ ಎ.ಎಸ್.ಐ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುತ್ತಾರೆ, ಹೊಸಕೋಟೆಯ ಕೃಷ್ಣಮೂರ್ತಿ ವಯಸ್ಸು 87 ಇವರು 31 ವರ್ಷಗಳ ಕಾಲ ಅರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹಿರಿಯ ಆರೋಗ್ಯ ನಿರ್ದೇಶಕರಾಗಿ ನಿವೃತ್ತಿ ಹೊಂದಿದ್ದಾರೆ, ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಚ್ ಹನುಮಂತರಾಯಪ್ಪ ವಯಸ್ಸು 90 ನಿವೃತ್ತ ಗಾಮ ಲೆಕ್ಕಾಧಿಕಾರಿಗಳು, ದೇವನಹಳ್ಳಿ ತಾಲ್ಲೂಕಿನ ರಮೇಶ್ ವಯಸ್ಸು 61 ಕಲಾವಿದರು ಇವರುಗಳಿಗೆ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ನೀಡಿದರು. ಜೊತೆಗೆ ಬ್ಯಾಪ್ಟಿಸ್ಟ್ ಆಸ್ಪತ್ರೆಯವರ ವತಿಯಿಂದ ಇಬ್ಬರು ಅಂಗವಿಕಲರಿಗೆ ಕೃತಕ ಕಾಲುಗಳನ್ನು ನೀಡಲಾಯಿತು

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ್ ಪಾಣಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರ ಮುದ್ದಣ ಎಂ, ಹಾಗೂ ಇಲಾಖೆ ಅಧಿಕಾರಿ ಜಗದೀಶ್ ಎನ್. ಎಂ, ಹಿರಿಯ ನಾಗರಿಕರ ನಿವೃತ್ತ ಸಂಘದ ಕಾರ್ಯದರ್ಶಿ ಪ್ರಭಾಕರ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಸಂಯೋಜಕ ರವಿಕುಮಾರ್ ಹಾಗೂ ಜಿಲ್ಲೆಯ ಹಿರಿಯ ನಾಗರಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

3 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

6 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

18 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

19 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

21 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

23 hours ago