Categories: ಆರೋಗ್ಯ

ವಿಶ್ವ ಹೃದಯ ದಿನ: ಹೃದಯದ ಬಗ್ಗೆ ಕಾಳಜಿ ವಹಿಸಿ

ಹೃದಯದ ಆರೋಗ್ಯದ ಕಾಳಜಿ ಕುರಿತು ವಿಶ್ವದ ಜನರಿಗೆ ಅರಿವು ಮೂಡಿಸಲು ವಿಶ್ವಮಟ್ಟದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 29ರಂದು ‘ವಿಶ್ವ ಹೃದಯ ದಿನ’ ವನ್ನು ಆಚರಿಸಲಾಗುತ್ತದೆ.

ಹೃದ್ರೋಗ ಜಾಗತಿಕ ಮಟ್ಟದಲ್ಲಿ ನಂ.1 ಮಾರಣಾಂತಿಕ ರೋಗ ಎಂಬುದರ ಬಗ್ಗೆ ಜಗತ್ತಿನಾದ್ಯಂತ ಜನರಿಗೆ ಮಾಹಿತಿ ನೀಡಲು ಮತ್ತು ಅರಿವು ಮೂಡಿಸುವ ಉದ್ದೇಶದಿಂದ ವಿಶ್ವ ಹೃದಯ ಒಕ್ಕೂಟವು ವಿಶ್ವ ಹೃದಯ ದಿನದ ಪರಿಕಲ್ಪನೆಯನ್ನು ಸೃಷ್ಟಿಸಿದೆ.

ಹೃದಯಾಘಾತದ ಎಚ್ಚರಿಕೆ ಸಂಕೇತಗಳು

ದವಡೆಯಿಂದ ಕೆಳಭಾಗ ಮತ್ತು ಹೊಕ್ಕುಳಿನಿಂದ ಮೇಲು ಭಾಗದ ಯಾವುದೇ ಸ್ಥಳದಲ್ಲಿ ಅಸ್ವಸ್ಥತೆಯು ಹೃದಯ ರೋಗದ ಕಾರಣದಿಂದ ಉಂಟಾಗಬಹುದು ಮತ್ತು ಅದರ ಸಂಕೀರ್ಣ ಸಮಸ್ಯೆಗಳನ್ನು ತಡೆಯಲು ಎಷ್ಟು ಸಾಧ್ಯವೋ ಅಷ್ಟು ಬೇಗ ಪರಿಣಿತ ವೈದ್ಯಕೀಯ ಅಭಿಪ್ರಾಯವನ್ನು ಪಡೆಯಬೇಕು. ಹೃದಯಾಘಾತದ ಕೌಟುಂಬಿಕ ಚರಿತ್ರೆ ಇರುವವರು ಹೃದಯ ರೋಗಗಳಿಗೆ ತುತ್ತಾಗುವ ಅಪಾಯ ಇರುವುದರಿಂದ ಮತ್ತಷ್ಟು ಎಚ್ಚರಿಕೆಯಿಂದಿರಬೇಕು.

ವಿಶ್ವ ಹೃದಯ ದಿನದ ಮಹತ್ವ

ವಿಶ್ವ ಹೃದಯ ಒಕ್ಕೂಟದ ಪ್ರಕಾರ, ಅನಾರೋಗ್ಯಕರ ಆಹಾರ, ತಂಬಾಕು ಬಳಕೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಆಲ್ಕೋಹಾಲ್ ಬಳಕೆಯಂತಹ ನಾಲ್ಕು ಪ್ರಮುಖ ಅಪಾಯಕಾರಿ ಅಂಶಗಳನ್ನು ನಿಯಂತ್ರಿಸುವ ಮೂಲಕ ಕನಿಷ್ಠ 80% ಅಕಾಲಿಕ ಮರಣಗಳನ್ನು (ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ) ರಕ್ಷಿಸಬಹುದು. ವಿಶ್ವ ಹೃದಯ ದಿನದ ಅಭಿಯಾನದಲ್ಲಿ ಜನಸಾಮಾನ್ಯರೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೃದಯ ಸಂಬಂಧಿತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವು ಪಡೆಯುತ್ತಾರೆ ಹಾಗೂ ಅಕಾಲಿಕವಾಗಿ ಸಂಭವಿರುವ ಸಾವು ಎದುರಾಗದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸುತ್ತಾರೆ.

ಹೃದಯ ಕಾಳಜಿ ಅತಿ ಮುಖ್ಯ

ಮಧ್ಯ ವಯಸ್ಕರು ಸಾಮಾನ್ಯವಾಗಿ ಬೆಳಗ್ಗಿನ ಉಪಾಹಾರದ ಬದಲಿಗೆ ಜ್ಯೂಸ್ ಅಥವಾ ಕಾಫಿ ಸೇವಿಸಿ ಸುಮ್ಮನಾಗುತ್ತಾರೆ. ಆದರೆ, ಹಾಗೇ ಸರಿಯಾದ ಸಮಯಕ್ಕೆ ಸರಿಯಾದ ಪ್ರಮಾಣದ ಉಪಾಹಾರ ಸೇವಿಸದಿದ್ದರೆ ಹೃದಯ ಸಂಬಂಧಿ ರೋಗಗಳು ಬರುತ್ತವೆ. ಇದರ ನಿವಾರಣೆಗೆ ಸಮತೋಲನ ಆಹಾರ ಸೇವನೆ, ತೂಕದಲ್ಲಿ ಇಳಿಕೆ, ವ್ಯಾಯಾಮ, ಕಡಿಮೆ ಉಪ್ಪು, ಸಕ್ಕರೆ ಮತ್ತು ಕೊಬ್ಬಿನಾಂಶವಿರುವ ಆಹಾರ ಪದಾರ್ಥಗಳ ಮಿತಬಳಕೆ ಮಾಡಬೇಕು.

ಧ್ಯಾನ ಮಾಡುವುದರಿಂದ ದೇಹದ ಆಯಾಸ,‌ ಕೋಪ, ಹತಾಶೆಯನ್ನು ಕಡಿಮೆ ಮಾಡಿ, ಧ್ಯಾನ ಹೃದಯದ ಆರೋಗ್ಯವನ್ನು ವೃದ್ಧಿಸುತ್ತಿರುತ್ತದೆ. ನಿತ್ಯ 30 ನಿಮಿಷಗಳ ವ್ಯಾಯಾಮ ಮಾಡಬೇಕು. ಕಡಿಮೆ ನಿದ್ದೆ ಮಾಡುವುದು ಕೂಡಾ ಹೃದಯಕ್ಕೆ ಹಾನಿಕಾರಕ.

ಧೂಮಪಾನ, ಮದ್ಯಪಾನ, ತಂಬಾಕು ಸೇವನೆಯಿಂದ ದೂರವಿರುವುದು ಕೂಡಾ ಹೃದಯ ಆರೈಕೆಗೆ ಒಳ್ಳೆಯ ಮಾರ್ಗ. ಸದಾ ಚಟುವಟಿಕೆಯಿಂದ ಇರಿ, ಸಣ್ಣಪುಟ್ಟ ವಿಷಯಗಳನ್ನು ಗಂಭೀರವಾಗಿ ಪರಿಗಣಿಸದಿರಿ, ಆಗಾಗ್ಗೆ ವೈದ್ಯರ ಬಳಿ ಆರೋಗ್ಯ ತಪಾಸಣೆ ಮಾಡಿಸಿ.

ಇನ್ನು, ನಮ್ಮ ದೇಹವನ್ನು ಸದೃಢವಾಗಿಟ್ಟುಕೊಳ್ಳುವುದು ಸಹ ಮುಖ್ಯವಾಗುತ್ತದೆ. ಪ್ರತಿದಿನ ವ್ಯಾಯಾಮ, ಯೋಗಾಸನ ಮಾಡುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದಿನನಿತ್ಯ ಕನಿಷ್ಠ 45 ನಿಮಿಷ ದೇಹವನ್ನು ದಂಡಿಸಿ ಅಂದರೆ ವ್ಯಾಯಾಮ ಮಾಡಿ, ನಡಿಗೆ ಮಾಡಿ. ದಿನಕ್ಕೆ 10 ಸಾವಿರ ಹೆಜ್ಜೆ ಹಾಕಿರಿ ಇದು ಆರೋಗ್ಯಕ್ಕೆ ಒಳ್ಳೆಯದು.

ವಿಶೇಷ ಲೇಖನ: ಆರೋಗ್ಯ ಇಲಾಖೆ ಪ್ರಕಟಣೆ

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

29 minutes ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

12 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

14 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago