Categories: ಆರೋಗ್ಯ

ವಿಶ್ವ ಹೃದಯ ದಿನ: ಹೃದಯದ ಬಗ್ಗೆ ಕಾಳಜಿ ವಹಿಸಿ

ಹೃದಯದ ಆರೋಗ್ಯದ ಕಾಳಜಿ ಕುರಿತು ವಿಶ್ವದ ಜನರಿಗೆ ಅರಿವು ಮೂಡಿಸಲು ವಿಶ್ವಮಟ್ಟದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 29ರಂದು ‘ವಿಶ್ವ ಹೃದಯ ದಿನ’ ವನ್ನು ಆಚರಿಸಲಾಗುತ್ತದೆ.

ಹೃದ್ರೋಗ ಜಾಗತಿಕ ಮಟ್ಟದಲ್ಲಿ ನಂ.1 ಮಾರಣಾಂತಿಕ ರೋಗ ಎಂಬುದರ ಬಗ್ಗೆ ಜಗತ್ತಿನಾದ್ಯಂತ ಜನರಿಗೆ ಮಾಹಿತಿ ನೀಡಲು ಮತ್ತು ಅರಿವು ಮೂಡಿಸುವ ಉದ್ದೇಶದಿಂದ ವಿಶ್ವ ಹೃದಯ ಒಕ್ಕೂಟವು ವಿಶ್ವ ಹೃದಯ ದಿನದ ಪರಿಕಲ್ಪನೆಯನ್ನು ಸೃಷ್ಟಿಸಿದೆ.

ಹೃದಯಾಘಾತದ ಎಚ್ಚರಿಕೆ ಸಂಕೇತಗಳು

ದವಡೆಯಿಂದ ಕೆಳಭಾಗ ಮತ್ತು ಹೊಕ್ಕುಳಿನಿಂದ ಮೇಲು ಭಾಗದ ಯಾವುದೇ ಸ್ಥಳದಲ್ಲಿ ಅಸ್ವಸ್ಥತೆಯು ಹೃದಯ ರೋಗದ ಕಾರಣದಿಂದ ಉಂಟಾಗಬಹುದು ಮತ್ತು ಅದರ ಸಂಕೀರ್ಣ ಸಮಸ್ಯೆಗಳನ್ನು ತಡೆಯಲು ಎಷ್ಟು ಸಾಧ್ಯವೋ ಅಷ್ಟು ಬೇಗ ಪರಿಣಿತ ವೈದ್ಯಕೀಯ ಅಭಿಪ್ರಾಯವನ್ನು ಪಡೆಯಬೇಕು. ಹೃದಯಾಘಾತದ ಕೌಟುಂಬಿಕ ಚರಿತ್ರೆ ಇರುವವರು ಹೃದಯ ರೋಗಗಳಿಗೆ ತುತ್ತಾಗುವ ಅಪಾಯ ಇರುವುದರಿಂದ ಮತ್ತಷ್ಟು ಎಚ್ಚರಿಕೆಯಿಂದಿರಬೇಕು.

ವಿಶ್ವ ಹೃದಯ ದಿನದ ಮಹತ್ವ

ವಿಶ್ವ ಹೃದಯ ಒಕ್ಕೂಟದ ಪ್ರಕಾರ, ಅನಾರೋಗ್ಯಕರ ಆಹಾರ, ತಂಬಾಕು ಬಳಕೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಆಲ್ಕೋಹಾಲ್ ಬಳಕೆಯಂತಹ ನಾಲ್ಕು ಪ್ರಮುಖ ಅಪಾಯಕಾರಿ ಅಂಶಗಳನ್ನು ನಿಯಂತ್ರಿಸುವ ಮೂಲಕ ಕನಿಷ್ಠ 80% ಅಕಾಲಿಕ ಮರಣಗಳನ್ನು (ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ) ರಕ್ಷಿಸಬಹುದು. ವಿಶ್ವ ಹೃದಯ ದಿನದ ಅಭಿಯಾನದಲ್ಲಿ ಜನಸಾಮಾನ್ಯರೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೃದಯ ಸಂಬಂಧಿತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವು ಪಡೆಯುತ್ತಾರೆ ಹಾಗೂ ಅಕಾಲಿಕವಾಗಿ ಸಂಭವಿರುವ ಸಾವು ಎದುರಾಗದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸುತ್ತಾರೆ.

ಹೃದಯ ಕಾಳಜಿ ಅತಿ ಮುಖ್ಯ

ಮಧ್ಯ ವಯಸ್ಕರು ಸಾಮಾನ್ಯವಾಗಿ ಬೆಳಗ್ಗಿನ ಉಪಾಹಾರದ ಬದಲಿಗೆ ಜ್ಯೂಸ್ ಅಥವಾ ಕಾಫಿ ಸೇವಿಸಿ ಸುಮ್ಮನಾಗುತ್ತಾರೆ. ಆದರೆ, ಹಾಗೇ ಸರಿಯಾದ ಸಮಯಕ್ಕೆ ಸರಿಯಾದ ಪ್ರಮಾಣದ ಉಪಾಹಾರ ಸೇವಿಸದಿದ್ದರೆ ಹೃದಯ ಸಂಬಂಧಿ ರೋಗಗಳು ಬರುತ್ತವೆ. ಇದರ ನಿವಾರಣೆಗೆ ಸಮತೋಲನ ಆಹಾರ ಸೇವನೆ, ತೂಕದಲ್ಲಿ ಇಳಿಕೆ, ವ್ಯಾಯಾಮ, ಕಡಿಮೆ ಉಪ್ಪು, ಸಕ್ಕರೆ ಮತ್ತು ಕೊಬ್ಬಿನಾಂಶವಿರುವ ಆಹಾರ ಪದಾರ್ಥಗಳ ಮಿತಬಳಕೆ ಮಾಡಬೇಕು.

ಧ್ಯಾನ ಮಾಡುವುದರಿಂದ ದೇಹದ ಆಯಾಸ,‌ ಕೋಪ, ಹತಾಶೆಯನ್ನು ಕಡಿಮೆ ಮಾಡಿ, ಧ್ಯಾನ ಹೃದಯದ ಆರೋಗ್ಯವನ್ನು ವೃದ್ಧಿಸುತ್ತಿರುತ್ತದೆ. ನಿತ್ಯ 30 ನಿಮಿಷಗಳ ವ್ಯಾಯಾಮ ಮಾಡಬೇಕು. ಕಡಿಮೆ ನಿದ್ದೆ ಮಾಡುವುದು ಕೂಡಾ ಹೃದಯಕ್ಕೆ ಹಾನಿಕಾರಕ.

ಧೂಮಪಾನ, ಮದ್ಯಪಾನ, ತಂಬಾಕು ಸೇವನೆಯಿಂದ ದೂರವಿರುವುದು ಕೂಡಾ ಹೃದಯ ಆರೈಕೆಗೆ ಒಳ್ಳೆಯ ಮಾರ್ಗ. ಸದಾ ಚಟುವಟಿಕೆಯಿಂದ ಇರಿ, ಸಣ್ಣಪುಟ್ಟ ವಿಷಯಗಳನ್ನು ಗಂಭೀರವಾಗಿ ಪರಿಗಣಿಸದಿರಿ, ಆಗಾಗ್ಗೆ ವೈದ್ಯರ ಬಳಿ ಆರೋಗ್ಯ ತಪಾಸಣೆ ಮಾಡಿಸಿ.

ಇನ್ನು, ನಮ್ಮ ದೇಹವನ್ನು ಸದೃಢವಾಗಿಟ್ಟುಕೊಳ್ಳುವುದು ಸಹ ಮುಖ್ಯವಾಗುತ್ತದೆ. ಪ್ರತಿದಿನ ವ್ಯಾಯಾಮ, ಯೋಗಾಸನ ಮಾಡುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದಿನನಿತ್ಯ ಕನಿಷ್ಠ 45 ನಿಮಿಷ ದೇಹವನ್ನು ದಂಡಿಸಿ ಅಂದರೆ ವ್ಯಾಯಾಮ ಮಾಡಿ, ನಡಿಗೆ ಮಾಡಿ. ದಿನಕ್ಕೆ 10 ಸಾವಿರ ಹೆಜ್ಜೆ ಹಾಕಿರಿ ಇದು ಆರೋಗ್ಯಕ್ಕೆ ಒಳ್ಳೆಯದು.

ವಿಶೇಷ ಲೇಖನ: ಆರೋಗ್ಯ ಇಲಾಖೆ ಪ್ರಕಟಣೆ

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

9 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

10 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

18 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago