Categories: ಆರೋಗ್ಯ

ವಿಶ್ವ ಹೃದಯ ದಿನ: ಹೃದಯದ ಬಗ್ಗೆ ಕಾಳಜಿ ವಹಿಸಿ

ಹೃದಯದ ಆರೋಗ್ಯದ ಕಾಳಜಿ ಕುರಿತು ವಿಶ್ವದ ಜನರಿಗೆ ಅರಿವು ಮೂಡಿಸಲು ವಿಶ್ವಮಟ್ಟದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 29ರಂದು ‘ವಿಶ್ವ ಹೃದಯ ದಿನ’ ವನ್ನು ಆಚರಿಸಲಾಗುತ್ತದೆ.

ಹೃದ್ರೋಗ ಜಾಗತಿಕ ಮಟ್ಟದಲ್ಲಿ ನಂ.1 ಮಾರಣಾಂತಿಕ ರೋಗ ಎಂಬುದರ ಬಗ್ಗೆ ಜಗತ್ತಿನಾದ್ಯಂತ ಜನರಿಗೆ ಮಾಹಿತಿ ನೀಡಲು ಮತ್ತು ಅರಿವು ಮೂಡಿಸುವ ಉದ್ದೇಶದಿಂದ ವಿಶ್ವ ಹೃದಯ ಒಕ್ಕೂಟವು ವಿಶ್ವ ಹೃದಯ ದಿನದ ಪರಿಕಲ್ಪನೆಯನ್ನು ಸೃಷ್ಟಿಸಿದೆ.

ಹೃದಯಾಘಾತದ ಎಚ್ಚರಿಕೆ ಸಂಕೇತಗಳು

ದವಡೆಯಿಂದ ಕೆಳಭಾಗ ಮತ್ತು ಹೊಕ್ಕುಳಿನಿಂದ ಮೇಲು ಭಾಗದ ಯಾವುದೇ ಸ್ಥಳದಲ್ಲಿ ಅಸ್ವಸ್ಥತೆಯು ಹೃದಯ ರೋಗದ ಕಾರಣದಿಂದ ಉಂಟಾಗಬಹುದು ಮತ್ತು ಅದರ ಸಂಕೀರ್ಣ ಸಮಸ್ಯೆಗಳನ್ನು ತಡೆಯಲು ಎಷ್ಟು ಸಾಧ್ಯವೋ ಅಷ್ಟು ಬೇಗ ಪರಿಣಿತ ವೈದ್ಯಕೀಯ ಅಭಿಪ್ರಾಯವನ್ನು ಪಡೆಯಬೇಕು. ಹೃದಯಾಘಾತದ ಕೌಟುಂಬಿಕ ಚರಿತ್ರೆ ಇರುವವರು ಹೃದಯ ರೋಗಗಳಿಗೆ ತುತ್ತಾಗುವ ಅಪಾಯ ಇರುವುದರಿಂದ ಮತ್ತಷ್ಟು ಎಚ್ಚರಿಕೆಯಿಂದಿರಬೇಕು.

ವಿಶ್ವ ಹೃದಯ ದಿನದ ಮಹತ್ವ

ವಿಶ್ವ ಹೃದಯ ಒಕ್ಕೂಟದ ಪ್ರಕಾರ, ಅನಾರೋಗ್ಯಕರ ಆಹಾರ, ತಂಬಾಕು ಬಳಕೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಆಲ್ಕೋಹಾಲ್ ಬಳಕೆಯಂತಹ ನಾಲ್ಕು ಪ್ರಮುಖ ಅಪಾಯಕಾರಿ ಅಂಶಗಳನ್ನು ನಿಯಂತ್ರಿಸುವ ಮೂಲಕ ಕನಿಷ್ಠ 80% ಅಕಾಲಿಕ ಮರಣಗಳನ್ನು (ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ) ರಕ್ಷಿಸಬಹುದು. ವಿಶ್ವ ಹೃದಯ ದಿನದ ಅಭಿಯಾನದಲ್ಲಿ ಜನಸಾಮಾನ್ಯರೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೃದಯ ಸಂಬಂಧಿತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವು ಪಡೆಯುತ್ತಾರೆ ಹಾಗೂ ಅಕಾಲಿಕವಾಗಿ ಸಂಭವಿರುವ ಸಾವು ಎದುರಾಗದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸುತ್ತಾರೆ.

ಹೃದಯ ಕಾಳಜಿ ಅತಿ ಮುಖ್ಯ

ಮಧ್ಯ ವಯಸ್ಕರು ಸಾಮಾನ್ಯವಾಗಿ ಬೆಳಗ್ಗಿನ ಉಪಾಹಾರದ ಬದಲಿಗೆ ಜ್ಯೂಸ್ ಅಥವಾ ಕಾಫಿ ಸೇವಿಸಿ ಸುಮ್ಮನಾಗುತ್ತಾರೆ. ಆದರೆ, ಹಾಗೇ ಸರಿಯಾದ ಸಮಯಕ್ಕೆ ಸರಿಯಾದ ಪ್ರಮಾಣದ ಉಪಾಹಾರ ಸೇವಿಸದಿದ್ದರೆ ಹೃದಯ ಸಂಬಂಧಿ ರೋಗಗಳು ಬರುತ್ತವೆ. ಇದರ ನಿವಾರಣೆಗೆ ಸಮತೋಲನ ಆಹಾರ ಸೇವನೆ, ತೂಕದಲ್ಲಿ ಇಳಿಕೆ, ವ್ಯಾಯಾಮ, ಕಡಿಮೆ ಉಪ್ಪು, ಸಕ್ಕರೆ ಮತ್ತು ಕೊಬ್ಬಿನಾಂಶವಿರುವ ಆಹಾರ ಪದಾರ್ಥಗಳ ಮಿತಬಳಕೆ ಮಾಡಬೇಕು.

ಧ್ಯಾನ ಮಾಡುವುದರಿಂದ ದೇಹದ ಆಯಾಸ,‌ ಕೋಪ, ಹತಾಶೆಯನ್ನು ಕಡಿಮೆ ಮಾಡಿ, ಧ್ಯಾನ ಹೃದಯದ ಆರೋಗ್ಯವನ್ನು ವೃದ್ಧಿಸುತ್ತಿರುತ್ತದೆ. ನಿತ್ಯ 30 ನಿಮಿಷಗಳ ವ್ಯಾಯಾಮ ಮಾಡಬೇಕು. ಕಡಿಮೆ ನಿದ್ದೆ ಮಾಡುವುದು ಕೂಡಾ ಹೃದಯಕ್ಕೆ ಹಾನಿಕಾರಕ.

ಧೂಮಪಾನ, ಮದ್ಯಪಾನ, ತಂಬಾಕು ಸೇವನೆಯಿಂದ ದೂರವಿರುವುದು ಕೂಡಾ ಹೃದಯ ಆರೈಕೆಗೆ ಒಳ್ಳೆಯ ಮಾರ್ಗ. ಸದಾ ಚಟುವಟಿಕೆಯಿಂದ ಇರಿ, ಸಣ್ಣಪುಟ್ಟ ವಿಷಯಗಳನ್ನು ಗಂಭೀರವಾಗಿ ಪರಿಗಣಿಸದಿರಿ, ಆಗಾಗ್ಗೆ ವೈದ್ಯರ ಬಳಿ ಆರೋಗ್ಯ ತಪಾಸಣೆ ಮಾಡಿಸಿ.

ಇನ್ನು, ನಮ್ಮ ದೇಹವನ್ನು ಸದೃಢವಾಗಿಟ್ಟುಕೊಳ್ಳುವುದು ಸಹ ಮುಖ್ಯವಾಗುತ್ತದೆ. ಪ್ರತಿದಿನ ವ್ಯಾಯಾಮ, ಯೋಗಾಸನ ಮಾಡುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದಿನನಿತ್ಯ ಕನಿಷ್ಠ 45 ನಿಮಿಷ ದೇಹವನ್ನು ದಂಡಿಸಿ ಅಂದರೆ ವ್ಯಾಯಾಮ ಮಾಡಿ, ನಡಿಗೆ ಮಾಡಿ. ದಿನಕ್ಕೆ 10 ಸಾವಿರ ಹೆಜ್ಜೆ ಹಾಕಿರಿ ಇದು ಆರೋಗ್ಯಕ್ಕೆ ಒಳ್ಳೆಯದು.

ವಿಶೇಷ ಲೇಖನ: ಆರೋಗ್ಯ ಇಲಾಖೆ ಪ್ರಕಟಣೆ

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

3 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

3 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

7 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

14 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

17 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago