Categories: ಆರೋಗ್ಯ

ವಿಶ್ವ ಹೃದಯ ದಿನ: ಹೃದಯದ ಬಗ್ಗೆ ಕಾಳಜಿ ವಹಿಸಿ

ಹೃದಯದ ಆರೋಗ್ಯದ ಕಾಳಜಿ ಕುರಿತು ವಿಶ್ವದ ಜನರಿಗೆ ಅರಿವು ಮೂಡಿಸಲು ವಿಶ್ವಮಟ್ಟದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 29ರಂದು ‘ವಿಶ್ವ ಹೃದಯ ದಿನ’ ವನ್ನು ಆಚರಿಸಲಾಗುತ್ತದೆ.

ಹೃದ್ರೋಗ ಜಾಗತಿಕ ಮಟ್ಟದಲ್ಲಿ ನಂ.1 ಮಾರಣಾಂತಿಕ ರೋಗ ಎಂಬುದರ ಬಗ್ಗೆ ಜಗತ್ತಿನಾದ್ಯಂತ ಜನರಿಗೆ ಮಾಹಿತಿ ನೀಡಲು ಮತ್ತು ಅರಿವು ಮೂಡಿಸುವ ಉದ್ದೇಶದಿಂದ ವಿಶ್ವ ಹೃದಯ ಒಕ್ಕೂಟವು ವಿಶ್ವ ಹೃದಯ ದಿನದ ಪರಿಕಲ್ಪನೆಯನ್ನು ಸೃಷ್ಟಿಸಿದೆ.

ಹೃದಯಾಘಾತದ ಎಚ್ಚರಿಕೆ ಸಂಕೇತಗಳು

ದವಡೆಯಿಂದ ಕೆಳಭಾಗ ಮತ್ತು ಹೊಕ್ಕುಳಿನಿಂದ ಮೇಲು ಭಾಗದ ಯಾವುದೇ ಸ್ಥಳದಲ್ಲಿ ಅಸ್ವಸ್ಥತೆಯು ಹೃದಯ ರೋಗದ ಕಾರಣದಿಂದ ಉಂಟಾಗಬಹುದು ಮತ್ತು ಅದರ ಸಂಕೀರ್ಣ ಸಮಸ್ಯೆಗಳನ್ನು ತಡೆಯಲು ಎಷ್ಟು ಸಾಧ್ಯವೋ ಅಷ್ಟು ಬೇಗ ಪರಿಣಿತ ವೈದ್ಯಕೀಯ ಅಭಿಪ್ರಾಯವನ್ನು ಪಡೆಯಬೇಕು. ಹೃದಯಾಘಾತದ ಕೌಟುಂಬಿಕ ಚರಿತ್ರೆ ಇರುವವರು ಹೃದಯ ರೋಗಗಳಿಗೆ ತುತ್ತಾಗುವ ಅಪಾಯ ಇರುವುದರಿಂದ ಮತ್ತಷ್ಟು ಎಚ್ಚರಿಕೆಯಿಂದಿರಬೇಕು.

ವಿಶ್ವ ಹೃದಯ ದಿನದ ಮಹತ್ವ

ವಿಶ್ವ ಹೃದಯ ಒಕ್ಕೂಟದ ಪ್ರಕಾರ, ಅನಾರೋಗ್ಯಕರ ಆಹಾರ, ತಂಬಾಕು ಬಳಕೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಆಲ್ಕೋಹಾಲ್ ಬಳಕೆಯಂತಹ ನಾಲ್ಕು ಪ್ರಮುಖ ಅಪಾಯಕಾರಿ ಅಂಶಗಳನ್ನು ನಿಯಂತ್ರಿಸುವ ಮೂಲಕ ಕನಿಷ್ಠ 80% ಅಕಾಲಿಕ ಮರಣಗಳನ್ನು (ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ) ರಕ್ಷಿಸಬಹುದು. ವಿಶ್ವ ಹೃದಯ ದಿನದ ಅಭಿಯಾನದಲ್ಲಿ ಜನಸಾಮಾನ್ಯರೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೃದಯ ಸಂಬಂಧಿತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವು ಪಡೆಯುತ್ತಾರೆ ಹಾಗೂ ಅಕಾಲಿಕವಾಗಿ ಸಂಭವಿರುವ ಸಾವು ಎದುರಾಗದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸುತ್ತಾರೆ.

ಹೃದಯ ಕಾಳಜಿ ಅತಿ ಮುಖ್ಯ

ಮಧ್ಯ ವಯಸ್ಕರು ಸಾಮಾನ್ಯವಾಗಿ ಬೆಳಗ್ಗಿನ ಉಪಾಹಾರದ ಬದಲಿಗೆ ಜ್ಯೂಸ್ ಅಥವಾ ಕಾಫಿ ಸೇವಿಸಿ ಸುಮ್ಮನಾಗುತ್ತಾರೆ. ಆದರೆ, ಹಾಗೇ ಸರಿಯಾದ ಸಮಯಕ್ಕೆ ಸರಿಯಾದ ಪ್ರಮಾಣದ ಉಪಾಹಾರ ಸೇವಿಸದಿದ್ದರೆ ಹೃದಯ ಸಂಬಂಧಿ ರೋಗಗಳು ಬರುತ್ತವೆ. ಇದರ ನಿವಾರಣೆಗೆ ಸಮತೋಲನ ಆಹಾರ ಸೇವನೆ, ತೂಕದಲ್ಲಿ ಇಳಿಕೆ, ವ್ಯಾಯಾಮ, ಕಡಿಮೆ ಉಪ್ಪು, ಸಕ್ಕರೆ ಮತ್ತು ಕೊಬ್ಬಿನಾಂಶವಿರುವ ಆಹಾರ ಪದಾರ್ಥಗಳ ಮಿತಬಳಕೆ ಮಾಡಬೇಕು.

ಧ್ಯಾನ ಮಾಡುವುದರಿಂದ ದೇಹದ ಆಯಾಸ,‌ ಕೋಪ, ಹತಾಶೆಯನ್ನು ಕಡಿಮೆ ಮಾಡಿ, ಧ್ಯಾನ ಹೃದಯದ ಆರೋಗ್ಯವನ್ನು ವೃದ್ಧಿಸುತ್ತಿರುತ್ತದೆ. ನಿತ್ಯ 30 ನಿಮಿಷಗಳ ವ್ಯಾಯಾಮ ಮಾಡಬೇಕು. ಕಡಿಮೆ ನಿದ್ದೆ ಮಾಡುವುದು ಕೂಡಾ ಹೃದಯಕ್ಕೆ ಹಾನಿಕಾರಕ.

ಧೂಮಪಾನ, ಮದ್ಯಪಾನ, ತಂಬಾಕು ಸೇವನೆಯಿಂದ ದೂರವಿರುವುದು ಕೂಡಾ ಹೃದಯ ಆರೈಕೆಗೆ ಒಳ್ಳೆಯ ಮಾರ್ಗ. ಸದಾ ಚಟುವಟಿಕೆಯಿಂದ ಇರಿ, ಸಣ್ಣಪುಟ್ಟ ವಿಷಯಗಳನ್ನು ಗಂಭೀರವಾಗಿ ಪರಿಗಣಿಸದಿರಿ, ಆಗಾಗ್ಗೆ ವೈದ್ಯರ ಬಳಿ ಆರೋಗ್ಯ ತಪಾಸಣೆ ಮಾಡಿಸಿ.

ಇನ್ನು, ನಮ್ಮ ದೇಹವನ್ನು ಸದೃಢವಾಗಿಟ್ಟುಕೊಳ್ಳುವುದು ಸಹ ಮುಖ್ಯವಾಗುತ್ತದೆ. ಪ್ರತಿದಿನ ವ್ಯಾಯಾಮ, ಯೋಗಾಸನ ಮಾಡುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದಿನನಿತ್ಯ ಕನಿಷ್ಠ 45 ನಿಮಿಷ ದೇಹವನ್ನು ದಂಡಿಸಿ ಅಂದರೆ ವ್ಯಾಯಾಮ ಮಾಡಿ, ನಡಿಗೆ ಮಾಡಿ. ದಿನಕ್ಕೆ 10 ಸಾವಿರ ಹೆಜ್ಜೆ ಹಾಕಿರಿ ಇದು ಆರೋಗ್ಯಕ್ಕೆ ಒಳ್ಳೆಯದು.

ವಿಶೇಷ ಲೇಖನ: ಆರೋಗ್ಯ ಇಲಾಖೆ ಪ್ರಕಟಣೆ

Ramesh Babu

Journalist

Recent Posts

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

51 minutes ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

8 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

16 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

17 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago