ವಿಷಜಂತು‌ ಕಚ್ಚಿ ಬಾಲಕ ಸಾವು: ಶಾಲಾ ಆವರಣದಲ್ಲಿ ಮೃತದೇಹವಿಟ್ಟು ಪ್ರತಿಭಟನೆ: ಸ್ಥಳಕ್ಕೆ ಬಾರದು ಶಾಲಾ ಆಡಳಿತ ಮಂಡಳಿ ಸದಸ್ಯರು:ತಾರಕಕ್ಕೇರಿದ ಗ್ರಾಮಸ್ಥರ ಆಕ್ರೋಶ: ಸೂಕ್ತ ನ್ಯಾಯ ಸಿಗುವವರಿಗೂ ಶವ ಸ್ಥಳಾಂತರಿಸುವುದಿಲ್ಲ ಎಂದು ಪಟ್ಟು

ತಾಲೂಕಿನ ಪುರಷನಹಳ್ಳಿಯಲ್ಲಿರುವ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆ ಸಮೀಪವಿರುವ ತೋಟದಲ್ಲಿ ತೆಂಗಿನಕಾಯಿ ತರಲು ಹೋದಾಗ ವಿಷಜಂತು ಕಚ್ಚಿ ಹತ್ತನೇ ತರಗತಿ ವಿದ್ಯಾರ್ಥಿ ದೇವರಾಜ್(15) ಮೃತಪಟ್ಟ ಘಟನೆ ನಡೆದಿದೆ.

ಬಾಲಕನ ಸಾವಿಗೆ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತ ಬಾಲಕನ ಪೋಷಕರು, ಪುರುಷನಹಳ್ಳಿ ಹಾಗೂ ಸುತ್ತಮುತ್ತ ಗ್ರಾಮಸ್ಥರು ಶಾಲಾ ಆವರಣದಲ್ಲೇ ಬಾಲಕನ ಶವ ಇರಿಸಿ ಪ್ರತಿಭಟನೆ ನಡೆಸಿದರು.

ಇತ್ತ ಸುಮಾರು 4 ಗಂಟೆಗೂ ಹೆಚ್ಚೂ ಕಾಲ ಶವ ಇರಿಸಿ ಪ್ರತಿಭಟನೆ ನಡೆಸಿದರೂ ಆಡಳಿತ ಮಂಡಳಿಯ ಯಾರೊಬ್ಬರೂ ಕ್ಯಾರೆ ಎನ್ನದಿರುವುದು ಪ್ರತಿಭಟನೆಕಾರರ ಕಿಚ್ಚು ಹೆಚ್ಚಿಸಿತು.

ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಲು ಮುಂದಾದರು. ಇದಕ್ಕೆ‌ ಸೊಪ್ಪು ಹಾಕದ ಪ್ರತಿಭಟನಾಕಾರರು ಆಡಳಿತ ಮಂಡಳಿಯವರು ಸ್ಥಳಕ್ಕೆ ಬರಲೇ ಬೇಕು. ಅಲ್ಲಿಯವರೆಗೆ ಶವ ಸ್ಥಳಾಂತರಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಮಠದ ವತಿಯಿಂದ 2‌ಲಕ್ಷ ಹಿಡುಗಂಟು ನೀಡುವ ಭರವಸೆ ನೀಡಿದ್ದಾರೆ ಎಂದು ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಕುಮಾರ್ ಅವರು ಪ್ರತಿಭಟನಾಕಾರರಿಗೆ ತಿಳಿಸಿದರು. ಆಗ ಮತ್ತಷ್ಟು ಕುಪಿತರಾದ ಜನರು, ಹಿಗ್ಗಾ‌ಮುಗ್ಗಾ ವಾಗ್ದಾಳಿ ನಡೆಸಿದರು. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.

ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ನಿರ್ಲಕ್ಷ್ಯ ತೋರಿದ ಶಾಲೆಯ ಸಿಬ್ಬಂದಿ ವಿರುದ್ಧ ಕಠಿಣ ಜರುಗಿಸಬೇಕು, ಶಾಲಾ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸುವ ಪ್ರವೃತ್ತಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಘಟನೆ ಹಿನ್ನೆಲೆ

ಆ.27(ಮಂಗಳವಾರ)ರಂದು ಎಂದಿನಂತೆ ಬೆಳಗ್ಗೆ 9ಗಂಟೆಗೆ ಸಮವಸ್ತ್ರ ಧರಿಸಿ ಶಾಲೆಗೆ ಬಂದಿದ್ದ, ಶಾಲೆಗೆ ಬಂದ‌ ಕೂಡಲೇ ಶಾಲೆಯ ಹಿಂಭಾಗದಲ್ಲಿರುವ ತೆಂಗಿನ ತೋಟದಲ್ಲಿ ತೆಂಗಿನಕಾಯಿ ತರಲು ಹೋದಾಗ ವಿಷಜಂತು ಕಚ್ಚಿದೆ. ಕೂಡಲೇ ಈ ವಿಚಾರವನ್ನು ಬೆಳಗ್ಗೆ 9:30ಕ್ಕೆ ಫೋನ್ ಕರೆ ಮೂಲಕ ಪೋಷಕರಿಗೆ ತಿಳಿಸಲಾಗಿದೆ.

ಕೂಡಲೇ ಪೋಷಕರು ಅಸ್ವಸ್ತಗೊಂಡಿದ್ದ ಬಾಲಕನನ್ನು ನಾಟಿ ಔಷಧಿಯನ್ನು ಕೊಡಿಸಿದ್ದಾರೆ. ನಾಟಿ ಔಷಧಿಯ ಚಿಕಿತ್ಸೆ ಯಿಂದ ಯಾವುದೇ ಪ್ರಯೋಜನ ಆಗದ ಹಿನ್ನೆಲೆ ಇಂದು ಮುಂಜಾನೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ವೈದ್ಯರ ಪ್ರಾಥಮಿಕ ವರದಿ ಪ್ರಕಾರ, ಬಾಲಕನಿಗೆ ವಿಷಜಂತು  ಕಚ್ಚಿರುವುದಾಗಿ ತಿಳಿದುಬಂದಿದೆ.

ಮೃತ ಬಾಲಕನ ಸ್ವಂತ ಊರು ರಾಮನಗರ ಜಿಲ್ಲೆಯ ಮಾಗಡಿ‌ ತಾಲೂಕಿನ ಸೋಲೂರು ಗ್ರಾಮದವನು. ತಾಲೂಕಿನ ಐಯ್ಯನಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸ ಮಾಡಿಕೊಂಡು ಪುರಷನಹಳ್ಳಿಯ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

ಇದೀಗ ಮಗನನ್ನು ಕಳೆದುಕೊಂಡ ತಂದೆ ತಾಯಿಯ ರೋಧನೆ ಮುಗಿಲು ಮುಟ್ಟಿದೆ.

Ramesh Babu

Journalist

Recent Posts

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

8 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

9 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಫಾರ್ಮ್ ಪಾರ್ಟಿ: ಸಂತಸದಿಂದ ಪ್ರಾಣಿಗಳ ಜೊತೆಯಲ್ಲಿ ಸಮಯ ಕಳೆದ ವಿದ್ಯಾರ್ಥಿಗಳು ಮತ್ತು ಪೋಷಕರು

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…

9 hours ago

Accident Update: ಹೊಸಕೋಟೆ ಸರಣಿ ಅಪಘಾತ ಪ್ರಕರಣ ಮಾಸುವ ಮುನ್ನವೇ, ನೆಲಮಂಗಲದ ಜಿಂದಾಲ್‌ ಸಮೀಪ ಮತ್ತೊಂದು ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು: ಮೃತರ ವಿವರ ಇಲ್ಲಿದೆ ನೋಡಿ…

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ…

17 hours ago

ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಎಗರಿಸಿದ ಖದೀಮರು

ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್…

19 hours ago

ನಿಕ್ಷಯ ಮಿತ್ರ (Nikshay Mitra) ಕಾರ್ಯಕ್ರಮ ವೀಕ್ಷಣೆ ಹಾಗೂ ಫುಡ್ ಕಿಟ್ ವಿತರಣೆ

ಕೇಂದ್ರ ಟಿಬಿ ಡಿವಿಷನ್, ದೆಹಲಿಯಿಂದ ನಿಕ್ಷಯ ಮಿತ್ರ ಕಾರ್ಯಕ್ರಮದ ಪ್ರಗತಿ ವೀಕ್ಷಣೆಗಾಗಿ ತಾಂತ್ರಿಕ ಸಹಾಯ ತಂಡವು ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಿಕ್ಷಯ…

20 hours ago