ವಿಷಜಂತು‌ ಕಚ್ಚಿ ಬಾಲಕ ಸಾವು: ಶಾಲಾ ಆವರಣದಲ್ಲಿ ಮೃತದೇಹವಿಟ್ಟು ಪ್ರತಿಭಟನೆ: ಸ್ಥಳಕ್ಕೆ ಬಾರದು ಶಾಲಾ ಆಡಳಿತ ಮಂಡಳಿ ಸದಸ್ಯರು:ತಾರಕಕ್ಕೇರಿದ ಗ್ರಾಮಸ್ಥರ ಆಕ್ರೋಶ: ಸೂಕ್ತ ನ್ಯಾಯ ಸಿಗುವವರಿಗೂ ಶವ ಸ್ಥಳಾಂತರಿಸುವುದಿಲ್ಲ ಎಂದು ಪಟ್ಟು

ತಾಲೂಕಿನ ಪುರಷನಹಳ್ಳಿಯಲ್ಲಿರುವ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆ ಸಮೀಪವಿರುವ ತೋಟದಲ್ಲಿ ತೆಂಗಿನಕಾಯಿ ತರಲು ಹೋದಾಗ ವಿಷಜಂತು ಕಚ್ಚಿ ಹತ್ತನೇ ತರಗತಿ ವಿದ್ಯಾರ್ಥಿ ದೇವರಾಜ್(15) ಮೃತಪಟ್ಟ ಘಟನೆ ನಡೆದಿದೆ.

ಬಾಲಕನ ಸಾವಿಗೆ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತ ಬಾಲಕನ ಪೋಷಕರು, ಪುರುಷನಹಳ್ಳಿ ಹಾಗೂ ಸುತ್ತಮುತ್ತ ಗ್ರಾಮಸ್ಥರು ಶಾಲಾ ಆವರಣದಲ್ಲೇ ಬಾಲಕನ ಶವ ಇರಿಸಿ ಪ್ರತಿಭಟನೆ ನಡೆಸಿದರು.

ಇತ್ತ ಸುಮಾರು 4 ಗಂಟೆಗೂ ಹೆಚ್ಚೂ ಕಾಲ ಶವ ಇರಿಸಿ ಪ್ರತಿಭಟನೆ ನಡೆಸಿದರೂ ಆಡಳಿತ ಮಂಡಳಿಯ ಯಾರೊಬ್ಬರೂ ಕ್ಯಾರೆ ಎನ್ನದಿರುವುದು ಪ್ರತಿಭಟನೆಕಾರರ ಕಿಚ್ಚು ಹೆಚ್ಚಿಸಿತು.

ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಲು ಮುಂದಾದರು. ಇದಕ್ಕೆ‌ ಸೊಪ್ಪು ಹಾಕದ ಪ್ರತಿಭಟನಾಕಾರರು ಆಡಳಿತ ಮಂಡಳಿಯವರು ಸ್ಥಳಕ್ಕೆ ಬರಲೇ ಬೇಕು. ಅಲ್ಲಿಯವರೆಗೆ ಶವ ಸ್ಥಳಾಂತರಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಮಠದ ವತಿಯಿಂದ 2‌ಲಕ್ಷ ಹಿಡುಗಂಟು ನೀಡುವ ಭರವಸೆ ನೀಡಿದ್ದಾರೆ ಎಂದು ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಕುಮಾರ್ ಅವರು ಪ್ರತಿಭಟನಾಕಾರರಿಗೆ ತಿಳಿಸಿದರು. ಆಗ ಮತ್ತಷ್ಟು ಕುಪಿತರಾದ ಜನರು, ಹಿಗ್ಗಾ‌ಮುಗ್ಗಾ ವಾಗ್ದಾಳಿ ನಡೆಸಿದರು. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.

ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ನಿರ್ಲಕ್ಷ್ಯ ತೋರಿದ ಶಾಲೆಯ ಸಿಬ್ಬಂದಿ ವಿರುದ್ಧ ಕಠಿಣ ಜರುಗಿಸಬೇಕು, ಶಾಲಾ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸುವ ಪ್ರವೃತ್ತಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಘಟನೆ ಹಿನ್ನೆಲೆ

ಆ.27(ಮಂಗಳವಾರ)ರಂದು ಎಂದಿನಂತೆ ಬೆಳಗ್ಗೆ 9ಗಂಟೆಗೆ ಸಮವಸ್ತ್ರ ಧರಿಸಿ ಶಾಲೆಗೆ ಬಂದಿದ್ದ, ಶಾಲೆಗೆ ಬಂದ‌ ಕೂಡಲೇ ಶಾಲೆಯ ಹಿಂಭಾಗದಲ್ಲಿರುವ ತೆಂಗಿನ ತೋಟದಲ್ಲಿ ತೆಂಗಿನಕಾಯಿ ತರಲು ಹೋದಾಗ ವಿಷಜಂತು ಕಚ್ಚಿದೆ. ಕೂಡಲೇ ಈ ವಿಚಾರವನ್ನು ಬೆಳಗ್ಗೆ 9:30ಕ್ಕೆ ಫೋನ್ ಕರೆ ಮೂಲಕ ಪೋಷಕರಿಗೆ ತಿಳಿಸಲಾಗಿದೆ.

ಕೂಡಲೇ ಪೋಷಕರು ಅಸ್ವಸ್ತಗೊಂಡಿದ್ದ ಬಾಲಕನನ್ನು ನಾಟಿ ಔಷಧಿಯನ್ನು ಕೊಡಿಸಿದ್ದಾರೆ. ನಾಟಿ ಔಷಧಿಯ ಚಿಕಿತ್ಸೆ ಯಿಂದ ಯಾವುದೇ ಪ್ರಯೋಜನ ಆಗದ ಹಿನ್ನೆಲೆ ಇಂದು ಮುಂಜಾನೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ವೈದ್ಯರ ಪ್ರಾಥಮಿಕ ವರದಿ ಪ್ರಕಾರ, ಬಾಲಕನಿಗೆ ವಿಷಜಂತು  ಕಚ್ಚಿರುವುದಾಗಿ ತಿಳಿದುಬಂದಿದೆ.

ಮೃತ ಬಾಲಕನ ಸ್ವಂತ ಊರು ರಾಮನಗರ ಜಿಲ್ಲೆಯ ಮಾಗಡಿ‌ ತಾಲೂಕಿನ ಸೋಲೂರು ಗ್ರಾಮದವನು. ತಾಲೂಕಿನ ಐಯ್ಯನಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸ ಮಾಡಿಕೊಂಡು ಪುರಷನಹಳ್ಳಿಯ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

ಇದೀಗ ಮಗನನ್ನು ಕಳೆದುಕೊಂಡ ತಂದೆ ತಾಯಿಯ ರೋಧನೆ ಮುಗಿಲು ಮುಟ್ಟಿದೆ.

Ramesh Babu

Journalist

Recent Posts

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

2 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

10 hours ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

1 day ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

1 day ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago