ವಿಷಜಂತು‌ ಕಚ್ಚಿ ಬಾಲಕ ಸಾವು: ಶಾಲಾ ಆವರಣದಲ್ಲಿ ಮೃತದೇಹವಿಟ್ಟು ಪ್ರತಿಭಟನೆ: ಸ್ಥಳಕ್ಕೆ ಬಾರದು ಶಾಲಾ ಆಡಳಿತ ಮಂಡಳಿ ಸದಸ್ಯರು:ತಾರಕಕ್ಕೇರಿದ ಗ್ರಾಮಸ್ಥರ ಆಕ್ರೋಶ: ಸೂಕ್ತ ನ್ಯಾಯ ಸಿಗುವವರಿಗೂ ಶವ ಸ್ಥಳಾಂತರಿಸುವುದಿಲ್ಲ ಎಂದು ಪಟ್ಟು

ತಾಲೂಕಿನ ಪುರಷನಹಳ್ಳಿಯಲ್ಲಿರುವ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆ ಸಮೀಪವಿರುವ ತೋಟದಲ್ಲಿ ತೆಂಗಿನಕಾಯಿ ತರಲು ಹೋದಾಗ ವಿಷಜಂತು ಕಚ್ಚಿ ಹತ್ತನೇ ತರಗತಿ ವಿದ್ಯಾರ್ಥಿ ದೇವರಾಜ್(15) ಮೃತಪಟ್ಟ ಘಟನೆ ನಡೆದಿದೆ.

ಬಾಲಕನ ಸಾವಿಗೆ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತ ಬಾಲಕನ ಪೋಷಕರು, ಪುರುಷನಹಳ್ಳಿ ಹಾಗೂ ಸುತ್ತಮುತ್ತ ಗ್ರಾಮಸ್ಥರು ಶಾಲಾ ಆವರಣದಲ್ಲೇ ಬಾಲಕನ ಶವ ಇರಿಸಿ ಪ್ರತಿಭಟನೆ ನಡೆಸಿದರು.

ಇತ್ತ ಸುಮಾರು 4 ಗಂಟೆಗೂ ಹೆಚ್ಚೂ ಕಾಲ ಶವ ಇರಿಸಿ ಪ್ರತಿಭಟನೆ ನಡೆಸಿದರೂ ಆಡಳಿತ ಮಂಡಳಿಯ ಯಾರೊಬ್ಬರೂ ಕ್ಯಾರೆ ಎನ್ನದಿರುವುದು ಪ್ರತಿಭಟನೆಕಾರರ ಕಿಚ್ಚು ಹೆಚ್ಚಿಸಿತು.

ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಲು ಮುಂದಾದರು. ಇದಕ್ಕೆ‌ ಸೊಪ್ಪು ಹಾಕದ ಪ್ರತಿಭಟನಾಕಾರರು ಆಡಳಿತ ಮಂಡಳಿಯವರು ಸ್ಥಳಕ್ಕೆ ಬರಲೇ ಬೇಕು. ಅಲ್ಲಿಯವರೆಗೆ ಶವ ಸ್ಥಳಾಂತರಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಮಠದ ವತಿಯಿಂದ 2‌ಲಕ್ಷ ಹಿಡುಗಂಟು ನೀಡುವ ಭರವಸೆ ನೀಡಿದ್ದಾರೆ ಎಂದು ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಕುಮಾರ್ ಅವರು ಪ್ರತಿಭಟನಾಕಾರರಿಗೆ ತಿಳಿಸಿದರು. ಆಗ ಮತ್ತಷ್ಟು ಕುಪಿತರಾದ ಜನರು, ಹಿಗ್ಗಾ‌ಮುಗ್ಗಾ ವಾಗ್ದಾಳಿ ನಡೆಸಿದರು. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.

ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ನಿರ್ಲಕ್ಷ್ಯ ತೋರಿದ ಶಾಲೆಯ ಸಿಬ್ಬಂದಿ ವಿರುದ್ಧ ಕಠಿಣ ಜರುಗಿಸಬೇಕು, ಶಾಲಾ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸುವ ಪ್ರವೃತ್ತಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಘಟನೆ ಹಿನ್ನೆಲೆ

ಆ.27(ಮಂಗಳವಾರ)ರಂದು ಎಂದಿನಂತೆ ಬೆಳಗ್ಗೆ 9ಗಂಟೆಗೆ ಸಮವಸ್ತ್ರ ಧರಿಸಿ ಶಾಲೆಗೆ ಬಂದಿದ್ದ, ಶಾಲೆಗೆ ಬಂದ‌ ಕೂಡಲೇ ಶಾಲೆಯ ಹಿಂಭಾಗದಲ್ಲಿರುವ ತೆಂಗಿನ ತೋಟದಲ್ಲಿ ತೆಂಗಿನಕಾಯಿ ತರಲು ಹೋದಾಗ ವಿಷಜಂತು ಕಚ್ಚಿದೆ. ಕೂಡಲೇ ಈ ವಿಚಾರವನ್ನು ಬೆಳಗ್ಗೆ 9:30ಕ್ಕೆ ಫೋನ್ ಕರೆ ಮೂಲಕ ಪೋಷಕರಿಗೆ ತಿಳಿಸಲಾಗಿದೆ.

ಕೂಡಲೇ ಪೋಷಕರು ಅಸ್ವಸ್ತಗೊಂಡಿದ್ದ ಬಾಲಕನನ್ನು ನಾಟಿ ಔಷಧಿಯನ್ನು ಕೊಡಿಸಿದ್ದಾರೆ. ನಾಟಿ ಔಷಧಿಯ ಚಿಕಿತ್ಸೆ ಯಿಂದ ಯಾವುದೇ ಪ್ರಯೋಜನ ಆಗದ ಹಿನ್ನೆಲೆ ಇಂದು ಮುಂಜಾನೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ವೈದ್ಯರ ಪ್ರಾಥಮಿಕ ವರದಿ ಪ್ರಕಾರ, ಬಾಲಕನಿಗೆ ವಿಷಜಂತು  ಕಚ್ಚಿರುವುದಾಗಿ ತಿಳಿದುಬಂದಿದೆ.

ಮೃತ ಬಾಲಕನ ಸ್ವಂತ ಊರು ರಾಮನಗರ ಜಿಲ್ಲೆಯ ಮಾಗಡಿ‌ ತಾಲೂಕಿನ ಸೋಲೂರು ಗ್ರಾಮದವನು. ತಾಲೂಕಿನ ಐಯ್ಯನಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸ ಮಾಡಿಕೊಂಡು ಪುರಷನಹಳ್ಳಿಯ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

ಇದೀಗ ಮಗನನ್ನು ಕಳೆದುಕೊಂಡ ತಂದೆ ತಾಯಿಯ ರೋಧನೆ ಮುಗಿಲು ಮುಟ್ಟಿದೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

2 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

3 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

7 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

8 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

14 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

15 hours ago