ವಿಷಜಂತು‌ ಕಚ್ಚಿ ಬಾಲಕ ಸಾವು: ಶಾಲಾ ಆವರಣದಲ್ಲಿ ಮೃತದೇಹವಿಟ್ಟು ಪ್ರತಿಭಟನೆ: ಸ್ಥಳಕ್ಕೆ ಬಾರದು ಶಾಲಾ ಆಡಳಿತ ಮಂಡಳಿ ಸದಸ್ಯರು:ತಾರಕಕ್ಕೇರಿದ ಗ್ರಾಮಸ್ಥರ ಆಕ್ರೋಶ: ಸೂಕ್ತ ನ್ಯಾಯ ಸಿಗುವವರಿಗೂ ಶವ ಸ್ಥಳಾಂತರಿಸುವುದಿಲ್ಲ ಎಂದು ಪಟ್ಟು

ತಾಲೂಕಿನ ಪುರಷನಹಳ್ಳಿಯಲ್ಲಿರುವ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆ ಸಮೀಪವಿರುವ ತೋಟದಲ್ಲಿ ತೆಂಗಿನಕಾಯಿ ತರಲು ಹೋದಾಗ ವಿಷಜಂತು ಕಚ್ಚಿ ಹತ್ತನೇ ತರಗತಿ ವಿದ್ಯಾರ್ಥಿ ದೇವರಾಜ್(15) ಮೃತಪಟ್ಟ ಘಟನೆ ನಡೆದಿದೆ.

ಬಾಲಕನ ಸಾವಿಗೆ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತ ಬಾಲಕನ ಪೋಷಕರು, ಪುರುಷನಹಳ್ಳಿ ಹಾಗೂ ಸುತ್ತಮುತ್ತ ಗ್ರಾಮಸ್ಥರು ಶಾಲಾ ಆವರಣದಲ್ಲೇ ಬಾಲಕನ ಶವ ಇರಿಸಿ ಪ್ರತಿಭಟನೆ ನಡೆಸಿದರು.

ಇತ್ತ ಸುಮಾರು 4 ಗಂಟೆಗೂ ಹೆಚ್ಚೂ ಕಾಲ ಶವ ಇರಿಸಿ ಪ್ರತಿಭಟನೆ ನಡೆಸಿದರೂ ಆಡಳಿತ ಮಂಡಳಿಯ ಯಾರೊಬ್ಬರೂ ಕ್ಯಾರೆ ಎನ್ನದಿರುವುದು ಪ್ರತಿಭಟನೆಕಾರರ ಕಿಚ್ಚು ಹೆಚ್ಚಿಸಿತು.

ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಲು ಮುಂದಾದರು. ಇದಕ್ಕೆ‌ ಸೊಪ್ಪು ಹಾಕದ ಪ್ರತಿಭಟನಾಕಾರರು ಆಡಳಿತ ಮಂಡಳಿಯವರು ಸ್ಥಳಕ್ಕೆ ಬರಲೇ ಬೇಕು. ಅಲ್ಲಿಯವರೆಗೆ ಶವ ಸ್ಥಳಾಂತರಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಮಠದ ವತಿಯಿಂದ 2‌ಲಕ್ಷ ಹಿಡುಗಂಟು ನೀಡುವ ಭರವಸೆ ನೀಡಿದ್ದಾರೆ ಎಂದು ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಕುಮಾರ್ ಅವರು ಪ್ರತಿಭಟನಾಕಾರರಿಗೆ ತಿಳಿಸಿದರು. ಆಗ ಮತ್ತಷ್ಟು ಕುಪಿತರಾದ ಜನರು, ಹಿಗ್ಗಾ‌ಮುಗ್ಗಾ ವಾಗ್ದಾಳಿ ನಡೆಸಿದರು. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.

ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ನಿರ್ಲಕ್ಷ್ಯ ತೋರಿದ ಶಾಲೆಯ ಸಿಬ್ಬಂದಿ ವಿರುದ್ಧ ಕಠಿಣ ಜರುಗಿಸಬೇಕು, ಶಾಲಾ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸುವ ಪ್ರವೃತ್ತಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಘಟನೆ ಹಿನ್ನೆಲೆ

ಆ.27(ಮಂಗಳವಾರ)ರಂದು ಎಂದಿನಂತೆ ಬೆಳಗ್ಗೆ 9ಗಂಟೆಗೆ ಸಮವಸ್ತ್ರ ಧರಿಸಿ ಶಾಲೆಗೆ ಬಂದಿದ್ದ, ಶಾಲೆಗೆ ಬಂದ‌ ಕೂಡಲೇ ಶಾಲೆಯ ಹಿಂಭಾಗದಲ್ಲಿರುವ ತೆಂಗಿನ ತೋಟದಲ್ಲಿ ತೆಂಗಿನಕಾಯಿ ತರಲು ಹೋದಾಗ ವಿಷಜಂತು ಕಚ್ಚಿದೆ. ಕೂಡಲೇ ಈ ವಿಚಾರವನ್ನು ಬೆಳಗ್ಗೆ 9:30ಕ್ಕೆ ಫೋನ್ ಕರೆ ಮೂಲಕ ಪೋಷಕರಿಗೆ ತಿಳಿಸಲಾಗಿದೆ.

ಕೂಡಲೇ ಪೋಷಕರು ಅಸ್ವಸ್ತಗೊಂಡಿದ್ದ ಬಾಲಕನನ್ನು ನಾಟಿ ಔಷಧಿಯನ್ನು ಕೊಡಿಸಿದ್ದಾರೆ. ನಾಟಿ ಔಷಧಿಯ ಚಿಕಿತ್ಸೆ ಯಿಂದ ಯಾವುದೇ ಪ್ರಯೋಜನ ಆಗದ ಹಿನ್ನೆಲೆ ಇಂದು ಮುಂಜಾನೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ವೈದ್ಯರ ಪ್ರಾಥಮಿಕ ವರದಿ ಪ್ರಕಾರ, ಬಾಲಕನಿಗೆ ವಿಷಜಂತು  ಕಚ್ಚಿರುವುದಾಗಿ ತಿಳಿದುಬಂದಿದೆ.

ಮೃತ ಬಾಲಕನ ಸ್ವಂತ ಊರು ರಾಮನಗರ ಜಿಲ್ಲೆಯ ಮಾಗಡಿ‌ ತಾಲೂಕಿನ ಸೋಲೂರು ಗ್ರಾಮದವನು. ತಾಲೂಕಿನ ಐಯ್ಯನಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸ ಮಾಡಿಕೊಂಡು ಪುರಷನಹಳ್ಳಿಯ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

ಇದೀಗ ಮಗನನ್ನು ಕಳೆದುಕೊಂಡ ತಂದೆ ತಾಯಿಯ ರೋಧನೆ ಮುಗಿಲು ಮುಟ್ಟಿದೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

5 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

11 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

12 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago