ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ  ಯುವಕನ ಜೀವ ಉಳಿಸಿದ 112 ಪೊಲೀಸರು: ಪೊಲೀಸರ ಕಾರ್ಯಯಕ್ಕೆ ಸಾರ್ವಜನಿಕರಿಂದ‌ ಭಾರೀ ಮೆಚ್ಚುಗೆ

ಸುಮಾರು 19 ವರ್ಷದ ಯುವಕನೋರ್ವ ಮಾನಸಿಕವಾಗಿ ಮನನೊಂದು ಸುಮಾರು 11ಗಂಟೆ ರಾತ್ರಿಯಲ್ಲಿ ವಿಷ ಕುಡಿದು ತೀವ್ರವಾಗಿ ಅಸ್ವಸ್ಥಗೊಂಡು ಒದ್ದಾಡುತ್ತಿದ್ದನು. ಆಗ ಈ ಯುವಕನೇ ತನ್ನ ಫೋನ್ ನಿಂದ 112ಗೆ ಕರೆ ಮಾಡಿ ತಡವರಿಸುತ್ತಾ ತಾನು ವಿಷ ಕುಡಿದಿರುವ ಬಗ್ಗೆ ದೂರು ನೀಡುತ್ತಾನೆ.

ಕರೆ ಬಂದ‌ ಕೆಲವೇ ಕ್ಷಣಗಳಲ್ಲಿ 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳದಲ್ಲಿ ಆ ಯುವಕನನ್ನು ಕತ್ತಲಲ್ಲೇ ಹುಡುಕಾಡಿದ್ದಾರೆ. ಆ ಯುವಕ ತೀವ್ರವಾಗಿ ಅಸ್ವಸ್ಥಗೊಂಡು ತೋಟವೊಂದರಲ್ಲಿ ಕೆಳಗೆ ಬಿದ್ದು ನರಳಾಡುತ್ತಿದ್ದನು. ಆತನ ಫೋನ್ ಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಮೊಬೈಲ್ ಗಳಲ್ಲಿ ಟಾರ್ಚ್ ಹಾಕಿಕೊಂಡು ಪೊಲೀಸರು ಹುಡುಕಾಡಿದ್ದಾರೆ. ಕೊನೆಗೆ ನರಳಾಡುತ್ತಿದ್ದ ಯುವಕನನ್ನು ಪತ್ತೆ ಮಾಡಿ ಸ್ಥಳೀಯ ಆಸ್ಪತ್ರೆಗೆ ತಮ್ಮ 112 ವಾಹನದಲ್ಲೇ ರವಾನಿಸಿದ್ದಾರೆ.

ಸದ್ಯ ವಿಷ ಕುಡಿದ ಯುವಕ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದಾನೆ. ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕನ ಜೀವವನ್ನು ಸಕಾಲಕ್ಕೆ ಬಂದ  112 ಪೊಲೀಸರು, ಆತನ ಜೀವ ಉಳಿಸಿದ್ದಾರೆ. 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಅವರ ಈ ಕಾರ್ಯಯಕ್ಕೆ ಸಾರ್ವಜನಿಕರಿಂದ‌ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಜೊತೆಗೆ ಯುವಕನ ಸಂಬಂಧಿಕರು ಕೂಡ ಮುನಿರಾಜು ಎಂ ಹಾಗೂ ಕಾಂತರಾಜುರವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ….

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

2 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

21 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

21 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

21 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago