ಸುಮಾರು 19 ವರ್ಷದ ಯುವಕನೋರ್ವ ಮಾನಸಿಕವಾಗಿ ಮನನೊಂದು ಸುಮಾರು 11ಗಂಟೆ ರಾತ್ರಿಯಲ್ಲಿ ವಿಷ ಕುಡಿದು ತೀವ್ರವಾಗಿ ಅಸ್ವಸ್ಥಗೊಂಡು ಒದ್ದಾಡುತ್ತಿದ್ದನು. ಆಗ ಈ ಯುವಕನೇ ತನ್ನ ಫೋನ್ ನಿಂದ 112ಗೆ ಕರೆ ಮಾಡಿ ತಡವರಿಸುತ್ತಾ ತಾನು ವಿಷ ಕುಡಿದಿರುವ ಬಗ್ಗೆ ದೂರು ನೀಡುತ್ತಾನೆ.
ಕರೆ ಬಂದ ಕೆಲವೇ ಕ್ಷಣಗಳಲ್ಲಿ 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳದಲ್ಲಿ ಆ ಯುವಕನನ್ನು ಕತ್ತಲಲ್ಲೇ ಹುಡುಕಾಡಿದ್ದಾರೆ. ಆ ಯುವಕ ತೀವ್ರವಾಗಿ ಅಸ್ವಸ್ಥಗೊಂಡು ತೋಟವೊಂದರಲ್ಲಿ ಕೆಳಗೆ ಬಿದ್ದು ನರಳಾಡುತ್ತಿದ್ದನು. ಆತನ ಫೋನ್ ಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಮೊಬೈಲ್ ಗಳಲ್ಲಿ ಟಾರ್ಚ್ ಹಾಕಿಕೊಂಡು ಪೊಲೀಸರು ಹುಡುಕಾಡಿದ್ದಾರೆ. ಕೊನೆಗೆ ನರಳಾಡುತ್ತಿದ್ದ ಯುವಕನನ್ನು ಪತ್ತೆ ಮಾಡಿ ಸ್ಥಳೀಯ ಆಸ್ಪತ್ರೆಗೆ ತಮ್ಮ 112 ವಾಹನದಲ್ಲೇ ರವಾನಿಸಿದ್ದಾರೆ.
ಸದ್ಯ ವಿಷ ಕುಡಿದ ಯುವಕ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದಾನೆ. ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕನ ಜೀವವನ್ನು ಸಕಾಲಕ್ಕೆ ಬಂದ 112 ಪೊಲೀಸರು, ಆತನ ಜೀವ ಉಳಿಸಿದ್ದಾರೆ. 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಅವರ ಈ ಕಾರ್ಯಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಜೊತೆಗೆ ಯುವಕನ ಸಂಬಂಧಿಕರು ಕೂಡ ಮುನಿರಾಜು ಎಂ ಹಾಗೂ ಕಾಂತರಾಜುರವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ….
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…