ಸುಮಾರು 19 ವರ್ಷದ ಯುವಕನೋರ್ವ ಮಾನಸಿಕವಾಗಿ ಮನನೊಂದು ಸುಮಾರು 11ಗಂಟೆ ರಾತ್ರಿಯಲ್ಲಿ ವಿಷ ಕುಡಿದು ತೀವ್ರವಾಗಿ ಅಸ್ವಸ್ಥಗೊಂಡು ಒದ್ದಾಡುತ್ತಿದ್ದನು. ಆಗ ಈ ಯುವಕನೇ ತನ್ನ ಫೋನ್ ನಿಂದ 112ಗೆ ಕರೆ ಮಾಡಿ ತಡವರಿಸುತ್ತಾ ತಾನು ವಿಷ ಕುಡಿದಿರುವ ಬಗ್ಗೆ ದೂರು ನೀಡುತ್ತಾನೆ.
ಕರೆ ಬಂದ ಕೆಲವೇ ಕ್ಷಣಗಳಲ್ಲಿ 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳದಲ್ಲಿ ಆ ಯುವಕನನ್ನು ಕತ್ತಲಲ್ಲೇ ಹುಡುಕಾಡಿದ್ದಾರೆ. ಆ ಯುವಕ ತೀವ್ರವಾಗಿ ಅಸ್ವಸ್ಥಗೊಂಡು ತೋಟವೊಂದರಲ್ಲಿ ಕೆಳಗೆ ಬಿದ್ದು ನರಳಾಡುತ್ತಿದ್ದನು. ಆತನ ಫೋನ್ ಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಮೊಬೈಲ್ ಗಳಲ್ಲಿ ಟಾರ್ಚ್ ಹಾಕಿಕೊಂಡು ಪೊಲೀಸರು ಹುಡುಕಾಡಿದ್ದಾರೆ. ಕೊನೆಗೆ ನರಳಾಡುತ್ತಿದ್ದ ಯುವಕನನ್ನು ಪತ್ತೆ ಮಾಡಿ ಸ್ಥಳೀಯ ಆಸ್ಪತ್ರೆಗೆ ತಮ್ಮ 112 ವಾಹನದಲ್ಲೇ ರವಾನಿಸಿದ್ದಾರೆ.
ಸದ್ಯ ವಿಷ ಕುಡಿದ ಯುವಕ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದಾನೆ. ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕನ ಜೀವವನ್ನು ಸಕಾಲಕ್ಕೆ ಬಂದ 112 ಪೊಲೀಸರು, ಆತನ ಜೀವ ಉಳಿಸಿದ್ದಾರೆ. 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಅವರ ಈ ಕಾರ್ಯಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಜೊತೆಗೆ ಯುವಕನ ಸಂಬಂಧಿಕರು ಕೂಡ ಮುನಿರಾಜು ಎಂ ಹಾಗೂ ಕಾಂತರಾಜುರವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ….
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…
ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…